Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಸಾಲದಿಂದ ಮುಕ್ತರಾಗಲು ಶ್ರಾವಣ ಶುಕ್ರವಾರ ಲಕ್ಷ್ಮಿ ಪೂಜೆ ಮಾಡುವಾಗ ಈ ಪರಿಹಾರ ಮಾಡಿದರೆ ಒಳ್ಳೆಯದು
ಶುಕ್ರವಾರ ಲಕ್ಷ್ಮಿ ಪೂಜೆಗೆ ವಿಶೇಷವಾದ ದಿನ, ಅದರಲ್ಲೂ ಶ್ರಾವಣ ಶುಕ್ರವಾರ ಲಕ್ಷ್ಮಿ ಪೂಜೆ ಮತ್ತಷ್ಟು ವಿಶೇಷವಾಗಿರುತ್ತದೆ. ಈ ದಿನ ಲಕ್ಷ್ಮಿಯನ್ನು ಆರಾಧನೆ ಮಾಡುವಾಗ ನಿಮ್ಮ ಜೀವನದಲ್ಲಿ ಏನು ಸಮಸ್ಯೆಯಿದೆಯೋ ಅದಕ್ಕೆ ತಕ್ಕಂತೆ ಪರಿಹಾರ ಮಾಡಿದರೆ ಆ ಸಮಸ್ಯೆ ಬೇಗನೆ ದೂರಾಗಲಿದೆ. ನಾವಿಲ್ಲಿ ಶ್ರಾವಣ ಶುಕ್ರವಾರ ಲಕ್ಷ್ಮಿ ಆರಾಧನೆ ಮಾಡುವಾಗ ಹಣದ ಸಮಸ್ಯೆ, ವೈವಾಹಿಕ ಜೀವನದ ಸಮಸ್ಯೆ, ವಿವಾಹ ತಡವಾಗುವುದು ಮುಂತಾದ ಸಮಸ್ಯೆಗೆ ಏನು ಪರಿಹಾರ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ ನೋಡಿ:

ಹಣದ ಸಮಸ್ಯೆಗೆ ಪರಿಹಾರ
ಲಕ್ಷ್ಮಿ ಕೃಪೆ ಇದ್ದರೆ ಸಾಲದಿಂದ ಮುಕ್ತರಾಗಿ ಒಳ್ಳೆಯ ಬದುಕು ನಡೆಸಬಹುದು, ಸಾಲದಿಂದ ಮುಕ್ತರಾಗಲು ಲಕ್ಷ್ಮಿಗೆ ಈ ಪರಿಹಾರ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು:
* ಶ್ರಾವಣ ಶುಕ್ರವಾರದಂದು ಸಂಜೆ ಪೂಜೆ ಮಾಡುವಾಗ ಕೆಂಪು ಬಟ್ಟೆಯಲ್ಲಿ ಹಸಿರು ಏಲಕ್ಕಿ ಕಟ್ಟಿ ಲಕ್ಷ್ಮಿಯ ಮೂರ್ತಿಯ ಮುಂದಿಟ್ಟು ಪೂಜಿಸಬೇಕು, ನಂತರ ಆರತಿ ಬೆಳಗಿದ ನಂತರ ಅದನ್ನು ಪರ್ಸ್ ಅಥವಾ ನಮ್ಮ ಕಪಾಟಿನಲ್ಲಿಟ್ಟರೆ ಒಳ್ಳೆಯದು ಎಂದು ಹೇಳಲಾಗುವುದು. ಹೀಗೆ ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಇದೆ.
ಶ್ರಾವಣ ಶುಕ್ರವಾರ ಶಿವಲಿಂಗಕ್ಕೆ ಅಭಿಷೇಕ ಮಾಡಿಸಿ
* ಶ್ರಾವಣ ಮಾಸ ಶಿವನಿಗೆ ಮೀಸಲಾದ ತಿಂಗಳು. ನೀವು ಶ್ರಾವಣ ಶುಕ್ರವಾರ 'ಓಂ ನಮಃ ಶಿವಾಯ' ಮಂತ್ರ ಪಠಿಸುತ್ತಾ ಜಲಾಭಿಷೇಕ ಮಾಡಿ.
* ಲಕ್ಷ್ಮಿ ಮಂತ್ರ ಪಠಿಸಿ
ಮದುವೆಗೆ ಅಡೆತಡೆ ಇದ್ದರೆ
ಈ ದಿನ ನೀವು ಶಿವನಿಗೆ ಪಂಚಾಮೃತ ಅರ್ಪಿಸಿ ಅದರ ಜೊತೆಗೆ ಒಂದು ರೂಪಾಯಿ ನಾಣ್ಯವನ್ನು ಇಡಿ. ನಂತರ ಆ ನಾಣ್ಯವನ್ನು ನಿಮ್ಮ ಬಳಿ ಇರಿಸಿ,ಹೀಗೆ ಮಾಡುವುದರಿಂದ ವಿವಾಹದಲ್ಲಿರುವ ಅಡೆತಡೆ ದೂರಾಗಿ ಮನೆಯಲ್ಲಿ ಶುಭಕಾರ್ಯ ನಡೆಯುವುದು.
ಸಂಪತ್ತು ವೃದ್ಧಿಗೆ
ಶ್ರಾವಣ ಶುಕ್ರವಾರದಂದು ಅಕ್ಕಿ ಪಾಯಸವನ್ನು ಲಕ್ಷ್ಮಿಗೆ ನೈವೇದ್ಯವನ್ನಾಗಿ ಅರ್ಪಿಸಿ.
* ಶ್ರಾವಣ ಶುಕ್ರವಾರ 8 ಚಿಕ್ಕ ಹೆಣ್ಮಕ್ಕಳನ್ನು ಮನೆಗೆ ಕರೆದು ಅವರನ್ನು ಪೂಜಿಸಿ ಅವರಿಗೆ ಹೂವುಗಳು , ಸಿಹಿ ತಿಂಡಿಗಳು, ಬಟ್ಟೆಗಳನ್ನು ದಾನ ಮಾಡಿ.
ಇದರಿಂದ ಲಕ್ಷ್ಮಿ ಕೃಪೆ ಸಿಗುವುದು ಎಂಬ ನಂಬಿಕೆ ಇದೆ.
ಶುಕ್ರವಾರ ಉಪವಾಸ
ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ದಿನದ ಉಪವಾಸವು ಸಹ ಪ್ರಯೋಜನಕಾರಿಯಾಗಿದೆ. ಸಾಧ್ಯವಾದರೆ ಈ ದಿನ ಕಠಿಣ ಉಪವಾಸ ನಿಯಮ ಆಚರಿಸಿ. ಇದರಿಂದ ಲಕ್ಷ್ಮಿ ಕೃಪೆಗೆ ಪಾತ್ರರಾಗಬಹುದು.
ಅನ್ನವನ್ನು ವ್ಯರ್ಥ ಮಾಡಬೇಡಿ
ಧಾರ್ಮಿಕ ನಂಬಿಕೆಗಳ ಪ್ರಕಾರ ಆಹಾರವು ಲಕ್ಷ್ಮಿಯಾಗಿದೆ, ಆದ್ದರಿಂದ ಅನ್ನವನ್ನು ವ್ಯರ್ಥ ಮಾಡಬಾರದು. ಅಲ್ಲದೆ ಶುಕ್ರವಾರ ನಿರ್ಗತಿಕರಿಗೆ ಆಹಾರ ದಾನ ಮಾಡಿ.
ಶುಕ್ರವಾರ ಈ ಪರಿಹಾರ ಕೂಡ ಮಾಡಿದರೆ ಒಳ್ಳೆಯದು:
* ಶುಕ್ರವಾರ ದೀಪವನ್ನು ಹಚ್ಚಿ 11 ದಿನಗಳ ಕಾಲ ಅಖಂಡ ಜ್ಯೋತಿಯನ್ನು ಬೆಳಗಿಸಿ. 11ನೇ ದಿನ 11 ಹೆಣ್ಣು ಮಕ್ಕಳಿಗೆ ತಾಯಿಯ ಹೆಸರಿನಲ್ಲಿ ಊಟ ಹಾಕಬೇಕು. ಇದರಿಂದ ಹಣದ ಸಮಸ್ಯೆ ದೂರಾಗಲಿದೆ
* ಪ್ರತಿ ಶುಕ್ರವಾರದಂದು ದಕ್ಷಿಣಾವರ್ತಿ ಶಂಖದಲ್ಲಿ ನೀರು ತುಂಬಿ ವಿಷ್ಣುವಿಗೆ ಅಭಿಷೇಕ ಮಾಡುವುದರಿಂದ ತಾಯಿ ಲಕ್ಷ್ಮಿ ಶೀಘ್ರವಾಗಿ ಪ್ರಸನ್ನಳಾಗುತ್ತಾಳೆ.



Click it and Unblock the Notifications
