Latest Updates
-
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ? -
ಬೇಕರಿಯಲ್ಲಿ ಸಿಗುವ ಕೊಬ್ಬರಿ ತುರಿ ಬರ್ಫಿ ನಿಮಿಷದಲ್ಲಿ ಮಾಡಿ! ಇಲ್ಲಿದೆ ಸುಲಭದ ಸ್ವೀಟ್ ವಿಧಾನ -
ಮಧುರೈಗೆ ಹೋಗ್ತಿದ್ದೀರಾ? ಈ ಪವಿತ್ರ ದೇಗುಲಗಳಿಗೂ ಭೇಟಿ ನೀಡೋದನ್ನ ಮರೀಬೇಡಿ.. ಪಟ್ಟಿ ಇಲ್ಲಿದೆ
ಮಹಿಳಾ ದಿನಾಚರಣೆಯಂದೇ ಸುಧಾ ಮೂರ್ತಿ ರಾಜ್ಯಸಭೆಗೆ ನಾಮ ನಿರ್ದೇಶನ..!
ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದವರ ಸಾಲಿನಲ್ಲಿ ಲೇಖಕಿ, ಇನ್ಫೋಸಿಸ್ ಫೌಂಡೇಷನ್ನ ಮುಖ್ಯಸ್ಥೆ ಸುಧಾಮೂರ್ತಿ ಅವರು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಅವರ ಸಮಾಜಮುಖಿ ಕಾರ್ಯದಿಂದಲೇ ಹೆಸರಾಗಿದ್ದಾರೆ. ಈಗ ಅವರಿಗೆ ಸರ್ಕಾರದಿಂದ ಮತ್ತೊಂದು ಗೌರವ ಸಿಕ್ಕಿದೆ.
ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಶ್ರೀಮತಿ ಮೂರ್ತಿ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ದೇಶದ 'ನಾರಿ ಶಕ್ತಿ'ಗೆ ಪ್ರಬಲವಾದ ಸಾಕ್ಷಿಯಾಗಿದೆ ಎಂದು ಹೇಳಿದರು.

ನರೇಂದ್ರ ಮೋದಿ ಟ್ವೀಟ್
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ನರೇಂದ್ರ ಮೋದಿ, "ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ" ಎಂದು ಹೇಳಿದ್ದಾರೆ.
ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ. ಅವರ ಸಂಸದೀಯ ಅಧಿಕಾರಾವಧಿಗೆ ಹಾರೈಸುತ್ತೇನೆ" ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
ಸುಧಾ ಮೂರ್ತಿ ಅವರ ಬಗ್ಗೆ
ಆಗಸ್ಟ್ 19, 1950ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುಧಾಮೂರ್ತಿ ಜನಿಸಿದರು. ಡಾ. ಆರ್. ಹೆಚ್. ಕುಲಕರ್ಣಿ ಮತ್ತು ವಿಮಲಾ ಕುಲಕರ್ಣಿ ದಂಪತಿಯ ಪುತ್ರಿ. ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ BVB ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದರು. ನಂತರ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ಟಾಟಾ ಇಂಜಿನಿಯರಿಂಗ್ ಮತ್ತು ಲೋಕೊಮೊಟಿವ್ ಕಂಪನಿಯಲ್ಲಿ ಸುಧಾಮೂರ್ತಿ ಕೆಲಸ ಆರಂಭಿಸಿದರು. ಅತಿದೊಡ್ಡ ವಾಹನ ತಯಾರಿಕಾ ಘಟಕಕ್ಕೆ ನೇಮಕಗೊಂಡ ಮೊದಲ ಮಹಿಳಾ ಇಂಜಿನಿಯರ್ ಎಂಬ ಹೆಗ್ಗಳಿಕೆ ಅವರದ್ದು. ಮುಂಬೈ ಮತ್ತು ಜಮ್ಶೆಡ್ಪುರದಲ್ಲಿಯೂ ಕಾರ್ಯ ನಿರ್ವಹಣೆ ಮಾಡಿದರು.
ಸುಧಾಮೂರ್ತಿ ಅವರು 1970 ಫೆಬ್ರವರಿ 10ರಂದು ನಾರಾಯಣ ಮೂರ್ತಿ ಅವರನ್ನು ವಿವಾಹವಾದರು. ಇನ್ಪೋಸಿಸ್ ಕಂಪನಿ ಸ್ಥಾಪಿಸಿದರು. ಕಂಪನಿ ಆದಾಯದಲ್ಲಿ ಒಂದಷ್ಟು ಹಣವನ್ನು ಸಮಾಜ ಸೇವೆಗೆ ಮೀಡಲಿಟ್ಟರು. 1996ರಲ್ಲಿ ಇನ್ಫೋಸಿಸ್ ಫೌಂಡೇಷನ್ ಸ್ಥಾಪನೆ ಮಾಡಲಾಯಿತು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮನೆ ನಿರ್ಮಾಣ, ಶಾಲೆಗಳಲ್ಲಿ ಗ್ರಂಥಾಲಯ ನಿರ್ಮಾಣ, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಫೌಂಡೇಷನ್ ತೊಡಗಿಸಿಕೊಂಡಿದೆ. ಸುಧಾಮೂರ್ತಿ ಅವರಿಗೆ 2006ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕನ್ನಡ, ಇಂಗ್ಲೀಷ್ನಲ್ಲಿ ಹಲವಾರು ಪುಸ್ತಕಗಳನ್ನು ಅವರು ಬರೆದಿದ್ದಾರೆ.
ಅವರ ಕುರಿತ ಅಚ್ಚರಿಯ ಮಾಹಿತಿ
ಭಾರತದ ಅತಿ ದೊಡ್ಡ ವಾಹನ ತಯಾರಕ ಕಂಪನಿಯಾದ ಟಾಟಾ ಇಂಜಿನಿಯರಿಂಗ್ ಮತ್ತು ಲೊಕೊಮೊಟಿವ್ ಕಂಪನಿ (ಟೆಲ್ಕೊ) ನಲ್ಲಿ ನೇಮಕಗೊಂಡ ಮೊದಲ ಮಹಿಳಾ ಇಂಜಿನಿಯರ್ ಸುಧಾಮೂರ್ತಿ ಆಗಿದ್ದಾರೆ.
29ನೇ ವಯಸ್ಸಿನಲ್ಲಿ, ಸುಧಾ ಮೂರ್ತಿ ಅವರು ತಮ್ಮ ಚೊಚ್ಚಲ ಪುಸ್ತಕ ಮಹಾಶ್ವೇತವನ್ನು ಪ್ರಕಟಿಸಲು ಯುನೈಟೆಡ್ ಸ್ಟೇಟ್ಸ್ಗೆ ತೆರಳಿದರು. ಅವರು ಈ ಮೊದಲ ಸಾಹಿತ್ಯ ಕೃತಿಯನ್ನು ತಮ್ಮ ಜೀವನ ಸಂಗಾತಿ ಮತ್ತು ಸ್ನೇಹಿತರಾಗಿದ್ದ ಪತಿ ನಾರಾಯಣ ಮೂರ್ತಿ ಅವರಿಗೆ ಅರ್ಪಿಸಿದರು.
ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಅವರು 1980 ರಲ್ಲಿ ನಾರಾಯಣ ಮೂರ್ತಿ ಅವರನ್ನು ಮದುವೆಯಾಗುವ ಮೊದಲು ಹಲವಾರು ವರ್ಷಗಳ ಕಾಲ ಕಂಪ್ಯೂಟರ್ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದರು.
1980 ರ ದಶಕದ ಆರಂಭದಲ್ಲಿ, ಸುಧಾ ಮೂರ್ತಿ ಅವರು ಕಂಪ್ಯೂಟರ್ ತಂತ್ರಜ್ಞಾನದಲ್ಲಿ ಚೆನ್ನಾಗಿ ಪರಿಣತಿ ಹೊಂದಿರದ ವ್ಯಕ್ತಿಗಳಿಗೆ ಕಂಪ್ಯೂಟರ್ ಸಂವಹನವನ್ನು ಸುಲಭಗೊಳಿಸಲು ಬಳಕೆದಾರ ಸ್ನೇಹಿ ಪ್ರೋಗ್ರಾಮಿಂಗ್ ಭಾಷೆಯನ್ನು ರಚಿಸಲು ಯೋಜನೆಯನ್ನು ಪ್ರಾರಂಭಿಸಿದರು. ಈ ಪ್ರಯತ್ನವು 1981 ರಲ್ಲಿ ಇನ್ಫೋಸಿಸ್ ಸ್ಥಾಪನೆಯಲ್ಲಿ ಉತ್ತುಂಗಕ್ಕೇರಿತು.
ಸುಧಾ ಮೂರ್ತಿ ಅವರಿಗೆ ಪ್ರಾಣಿಗಳ ಮೇಲೆ ಅಪಾರ ಪ್ರೀತಿ. ಬೀದಿ ನಾಯಿಗಳು ಮತ್ತು ಬೆಕ್ಕುಗಳನ್ನು ರಕ್ಷಿಸಲು ಮತ್ತು ಆರೈಕೆ ಮಾಡುವುದು ಅವರ ಸಮಾಜ ಸೇವೆಯಲ್ಲಿ ಒಂದಾಗಿದೆ.
ಸುಧಾ ಮೂರ್ತಿ ಅವರು ಹಲವು ಕನ್ನಡ ಶಾಲೆಗಳು, ಅನಾಥಾಶ್ರಮಗಳಿಗೆ ತಮ್ಮ ಫೌಂಡೇಶನ್ ಮೂಲಕ ನೆರವು ನೀಡುತ್ತಿದ್ದಾರೆ.



Click it and Unblock the Notifications











