Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಆಡಿ ಕಾರಿನಲ್ಲಿ ಸೊಪ್ಪು ಮಾರುವ ಕೇರಳ ವ್ಯಕ್ತಿಯ ವೀಡಿಯೋ ವೈರಲ್
3-4 ದಿನದಿಂದ ಒಂದು ವೀಡಿಯೋ ತುಂಬಾನೇ ವೈರಲ್ ಆಗುತ್ತಿದೆ. ಪ್ರತಿಯೊಬ್ಬರಿಗೂ ಸ್ಪೂರ್ತಿ ತುಂಬುವ ವೀಡಿಯೋ ಅದು. ಯಾವ ಕೆಲಸವೂ ಕಡಿಮೆಯಲ್ಲ, ಶ್ರದ್ಧೆಯಿಂದ ನಾವುದನ್ನು ಮಾಡಬೇಕಷ್ಟೇ , ಅದಕ್ಕೆ ಈ ವ್ಯಕ್ತಿ ಸಾಕ್ಷಿ. ಸ್ವಲ್ಪ ಹಣ ಬಂದಾಗ ಆ ಕೆಲಸ ನನ್ನ ಸ್ಟೇಟಸ್ಗೆ ಸೂಟ್ ಅಲ್ಲ ಎಂದು ಭಾವಿಸುವವರೇ ಅಧಿಕ. ಆದರೆ ಇಲ್ಲೊಬ್ಬ ವ್ಯಕ್ತಿ ಆಡಿ ಕಾರಿನಲ್ಲಿ ಬಂದು ಸೊಪ್ಪು ಮಾರಾಟ ಮಾಡಿ ಹೋಗುತ್ತಿದ್ದಾರೆ. ಈ ವ್ಯಕ್ತಿ ಕೇರಳ ಮೂಲದವರಾಗಿದ್ದು ಆ ವೀಡಿಯೋ ತುಂಬಾನೇ ವೈರಲ್ ಆಗುತ್ತಿದೆ.

ಆಡಿ A4 ಲಕ್ಷುರಿ ಸೆಡಾನ್ ಕಾರಿನಲ್ಲಿ ಬರುವ ಈ ವ್ಯಕ್ತಿ ಬೀದಿ ಬದಿಯಲ್ಲಿ ಸೊಪ್ಪು ಮಾರಾಟ ಮಾಡುವ ವ್ಯಕ್ತಿ. ಬದುಕು ಅಷ್ಟು ಲಕ್ಷುರಿ ಆಗಿದ್ದರೂ ಬೀದಿಬದಿಯಲ್ಲಿ ನಿಂತು ಸೊಪ್ಪು ಮಾರಾಟ ಮಾಡುವ ವ್ಯಕ್ತಿಯ ವೀಡಿಯೋವನ್ನು ಸುಜಿತ್ ಎಸ್ಪಿ ಶೇರ್ ಮಾಡಿದ್ದು ತುಂಬಾನೇ ವೈರಲ್ ಆಗಿದೆ. ಇವರು ಬಳಸುವ ಕಾರಿಗೆ ಏನೆಂದರೂ 44 ಲಕ್ಷ ಮೇಲಿದೆ.
ಕೆಂಪು ಕೀರೆ ಸೊಪ್ಪನ್ನು ಇವರೇ ಬೆಳೆಯುತ್ತಿದ್ದಾರೆ. ಅದನ್ನು ಕಿತ್ತು ತಮ್ಮ ಕಾರಿನಲ್ಲಿಯೇ ತರುತ್ತಾರೆ. ನಂತರ ಪೇಟೆಯಲ್ಲಿ ನೆಲದ ಮೇಲೆ ಒಂದು ಮ್ಯಾಟ್ ಹಾಸಿ ನಂತರ ಸೊಪ್ಪು ಮಾರಾಟ ಮಾಡುತ್ತಿದ್ದಾರೆ. ಹಣವಿದೆ ಎಂಬ ಮಾತ್ರಕ್ಕೆ ಬೀದಿ ಬದಿಯಲ್ಲಿ ಸೊಪ್ಪು ಮಾರಾಟ ಮಾಡುವುದೇನು ನನ್ನ ಅಂತಸ್ತಿಗೆ ಸೂಟ್ ಅಲ್ಲ ಅಂತ ಭಾವಿಸಿಯೇ ಇಲ್ಲ. ಹೀಗಾಗಿ ಇವರು ಈ ವಿಷಯದಲ್ಲಿ ರೋಲ್ ಮಾಡೆಲ್ ಆಗಿದ್ದರೆ.
ಈ ವೀಡಿಯೋವನ್ನು ನೆಟ್ಟಿಗರು ತುಂಬಾ ಮೆಚ್ಚಿಕೊಂಡಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಮೊದಲು ನಾನು ಆಡಿ ಕಾರು ತಗೋತೀನಿ ನಂತರ ತರಕಾರಿ ಮಾರುತ್ತೇನೆ ಎಂದು ಕೆಲವರು ತಮಾಷೆಯಾಗಿ ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ನಮ್ಮ ಕೆಲಸ ನಾವು ಮಾಡಲು ನಾಚಿಕೆ ಏಕೆ ಅಲ್ವಾ? ನಿಯತ್ತಿನಿಂದ, ನ್ಯಾಯ ಬದ್ಧವಾಗಿ ಮಾಡುವ ಯಾವ ಕೆಲಸವೂ ಕಡಿಮೆಯಲ್ಲ ಅಲ್ವಾ?
ಸುಜಿತ್ ಎಸ್ಪಿ ತುಂಬಾನೇ ಜನಪ್ರಿಯ ವ್ಯಕ್ತಿ ಕೂಡ
ವೆರೈಟಿ ಫಾರ್ಮಿಂಗ್ ಎಂಬ ಇನ್ಸ್ಟಾಗ್ರಾಮ್ ಖಾತೆ ಹೊಂದಿರುವ ಇವರಿಗೆ ತುಂಬಾನೇ ಫಾಲೋವರ್ಸ್ ಇದ್ದಾರೆ. ಇವರು ಕೃಷಿ ಬಗ್ಗೆ ತುಂಬಾನೇ ಉಪಯುಕ್ತ ಮಾಹಿತಿ ನೀಡುತ್ತಿರುತ್ತಾರೆ. ತಾವೇ ಕೃಷಿ ಬೆಳೆದು ಮಾರ್ಕೆಟಿಂಗ್ ಕೂಡ ತಾವೇ ಮಾಡುತ್ತಾರೆ, ಇದರಿಂದ ಇವರು ಕೃಷಿಯಿಂದ ಹೆಚ್ಚಿನ ಲಾಭ ಪಡೆಯುತ್ತಿದ್ದಾರೆ. ಜೊತೆಗೆ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಮಾತನಾಡಿಸಿ ಈ ಕುರಿತು ಕೂಡ ಜನರಿಗೆ ಮಾಹಿತಿ ನೀಡುತ್ತಿರುತ್ತಾರೆ, ಸಾಮಾಜಿಕ ತಾಣದಿಂದ ಕೂಡ ಲಕ್ಷಾಂತರ ರುಪಾಯಿ ದುಡಿಯುತ್ತಿದ್ದಾರೆ. ಒಟ್ಟಿನಲ್ಲಿ ಸ್ವಲ್ಪ ಕ್ರಿಯಾತ್ಮಕವಾಗಿ ಯೋಚಿಸಿದರೆ ಚೆನ್ನಾಗಿ ಸಂಪಾದನೆ ಮಾಡಬಹುದು ಎಂಬುವುದಕ್ಕೆ ಇವರು ಉದಾಹರಣೆ.



Click it and Unblock the Notifications