Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಗರುಡ ಪುರಾಣವು ಈ 5 ಕೆಲಸವನ್ನು ಮಹಾಪಾಪ ಎಂದಿದೆ
ಹಿಂದೂಗಳ 18 ಮಹಾಪುರಣಗಳಲ್ಲಿ ಗರುಡ ಪುರಾಣ ಕೂಡ. ಗರುಡ ಪುರಾಣದಲ್ಲಿ ಮನುಷ್ಯ ಹೇಗೆ ಜೀವಿಸಬೇಕು? ಸನ್ಮಾರ್ಗದಲ್ಲಿ ನಡೆದರೆ ಏನು ಪ್ರಯೋಜನ, ಕೆಟ್ಟ ಮಾರ್ಗದಲ್ಲಿ ನಡೆದರೆ ಯಾವ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ಇದರಲ್ಲಿ ವ್ಯಕ್ತಿ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗಿನ ಮನುಷ್ಯನ ಜೀವನದ ಬಗ್ಗೆ ಹೇಳಲಾಗಿದೆ. ಸ್ವರ್ಗ, ನರಕದ ಕಲ್ಪನೆ ಇದರಲ್ಲಿದೆ.
ಮನುಷ್ಯ ಸರಿಯಾದ ಮಾರ್ಗದಲ್ಲಿ ನಡೆಯಬೇಕೆಂಬ ಉದ್ದೇಶ ಗರುಡ ಪುರಾಣದಲ್ಲಿ ಏನು ಮಾಡಬಾರದು, ಯಶಸ್ವಿ ಬದುಕಿಗೆ ಏನು ಮಾಡಬೇಕು, ಬದುಕಿನ ನಂತರ ಮೋಕ್ಷವನ್ನು ಪಡೆಯುವುದು ಹೇಗೆ ಎಂಬುವುದರ ಬಗ್ಗೆ ಹೇಳಲಾಗಿದೆ.

* ಭ್ರೂಣದಲ್ಲಿರುವ ಮಗುವನ್ನು ಕೊಲ್ಲುವುದು, ನವಜಾತ ಶಿಶುವನ್ನು ಕೊಲ್ಲುವುದು, ಗರ್ಭಿಣಿ ಮಹಿಳೆಯನ್ನು ಕೊಲ್ಲುವುದು ಮಹಾ ಪಾಪವೆಂದು ಹೇಳಲಾಗಿದೆ. ಈ ರೀತಿ ಮಾಡಿದರೆ ಮಹಾಪಾಪ ಸುತ್ತಿಕೊಳ್ಳುತ್ತದೆ ಎಂದು ಹೇಳಿದೆ.
* ಯಾರು ಮಹಿಳೆಯರನ್ನು ಅವಮಾನಿಸುತ್ತಾರೋ, ಅವರಿಗೆ ಕಿರುಕುಳ ನೀಡುತ್ತಾರೋ, ಅತ್ಯಾಚಾರ ಮಾಡುತ್ತಾರೋ ಅವರಿಗೆ ನರಕದಲ್ಲಿ ದೊಡ್ಡ ಶಿಕ್ಷೆಯನ್ನು ನೀಡಲಾಗುವುದು ಎಂದು ಹೇಳಲಾಗುತ್ತದೆ.
* ಸ್ನೇಹಿತೆ ಅಥವಾ ಪರಸ್ತ್ರೀ ಜೊತೆ ತಪ್ಪಾಗಿ ವರ್ತಿಸಿದರೆ ಅಂಥ ವ್ಯಕ್ತಿ ಮಹಾಪಾಪ ತಗುಲುತ್ತದೆ, ಅವನಿಗೆ ನರಕದಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಲಾಗಿದೆ.
* ಯಾರು ದೇವಾಲಯ, ಧಾರ್ಮಿಕ ಆಚರಣೆಗಳನ್ನು ನಿಂದಿಸುತ್ತಾರೋ ಅವರು ಬದುಕಿನಲ್ಲಿ ತುಂಬಾ ಕಷ್ಟ ಅನುಭವಿಸುತ್ತಾರೆ. ಅವರ ವೈವಾಹಿಕ ಬದುಕು ಚೆನ್ನಾಗಿರುವುದಿಲ್ಲ, ತುಂಬಾನೇ ಕಷ್ಟಗಳನ್ನು ಅನುಭವಿಸುತ್ತಾರೆ ಎಂದು ಹೇಳಲಾಗುವುದು.
* ಯಾರು ಹಿರಿಯರ ಜೊತೆ ಅಗೌರವದಿಂದ ವರ್ತಿಸುತ್ತಾರೋ, ಯಾರು ದುರ್ಬಲರಿಗೆ ಸಹಾಯ ಮಾಡುವುದಿಲ್ಲ, ಪೋಷಕರನ್ನು ನೋಡಿಕೊಳ್ಳುವುದಿಲ್ಲವೂ ಅವರಿಗೆ ಮಹಾಪಾಪ ಸುತ್ತಿಕೊಳ್ಳುತ್ತದೆ. ಇವರು ಬದುಕಿನಲ್ಲಿ ತುಂಬಾನೇ ಕಷ್ಟಗಳನ್ನು ಅನುಭವಿಸುತ್ತರೆ ಎಂದು ಹೇಳಲಾಗಿದೆ. ಇಂಥ ವ್ಯಕ್ತಿಗಳು ಸಾವಿನ ಬಳಿಕ ನರಕವನ್ನು ಕಾಣುತ್ತಾರೆ ಎಂದು ಹೇಳಲಾಗುವುದು.
ಸ್ವರ್ಗ-ನರಕದ ಕಲ್ಪನೆ ಮೂಲಕ ಗರುಡ ಪುರಾಣವು ಮನುಷ್ಯನನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುತ್ತದೆ. ಸಾವಿನ ನಂತರ ನರಕವಿದೆಯೀ ಎಂಬುವುದು ಗೊತ್ತಿಲ್ಲ ಆದರೆ ಗರುಡ ಪುರಾಣದಲ್ಲಿ ಯಾವ ಕಾರ್ಯ ಮಾಡಬಾರದು, ಯಾವುದನ್ನು ಮಾಡಬೇಕು ಎಂದು ಹೇಳಿರುವುದನ್ನು ಪಾಲಸಿಇದರೆ ಮನುಷ್ಯ ಜೀವನ ಸುಂದರವಾಗಿರುತ್ತದೆ, ನೆಮ್ಮದಿಯಿಂದ ಕೂಡಿರುತ್ತದೆ.



Click it and Unblock the Notifications











