Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಈ ವರ್ಷಶ್ರಾವಣ ಮಾಸ ಎರಡು ತಿಂಗಳು ಬಂದಿರುವುದೇಕೆ? ಅಧಿಕ ಮಾಸ ಶುಭವಲ್ಲವೇ?
ಕನ್ನಡ ಪಂಚಾಂಗದ ಪ್ರಕಾರ ಶ್ರಾವಣ ಮಾಸ ಜುಲೈ 18ರಿಂದ ಶುರುವಾಗಿದೆ, ಸೆಪ್ಟೆಂರ್ 15ರವರೆಗೆ ಈ ವರ್ಷ ಶ್ರಾವಣ ಮಾಸ. ಸುಮಾರು 19 ವರ್ಷಗಳ ಬಳಿಕ ಅಧಿಕ ಶ್ರಾವಣ ಮಾಸ ಬಂದಿದೆ . ಅಧಿಕಮಾಸದಿಂದಾಗಿ ಚಾತುರ್ಮಾಸವು 4 ತಿಂಗಳ ಬದಲು ಈ ವರ್ಷ 5 ತಿಂಗಳು ಇರಲಿದೆ. ಹಿಂದೂ ಕ್ಯಾಲೆಂಡರ್ನಲ್ಲಿ ಸುಮಾರು ಮೂರು ವರ್ಷಗಳ ನಂತರ ಪ್ರತಿ ಬಾರಿ ಅಧಿಕಮಾಸ ಬರುತ್ತದೆ. ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ರಚನೆಯಾಗಿದೆ.
ಶ್ರಾವಣ ಮಾಸ ಶಿವ ಭಕ್ತರು ಕಾಯುವಂಥ ಮಾಸ
ಶಿವ ಭಕ್ತರು ಶ್ರಾವಣ ಮಾಸವನ್ನು ಖುಷಿಯಿಂದ ಬರಮಾಡಿಕೊಳ್ಳುತ್ತಾರೆ. ಶ್ರಾವಣ ಮಾಸದಲ್ಲಿ ಶ್ರಾವಣ ಸೋಮವಾರಂತೂ ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನವಾಗಿದೆ. ಈ ದಿನ ಉಪವಾಸವಿದ್ದು ಶಿವ ಭಕ್ತರು ಶಿವನ ಆರಾಧನೆಯಲ್ಲಿ ಮಗ್ನರಾಗಿರುತ್ತಾರೆ. ಈ ಬಾರಿ 8 ಶ್ರಾವಣ ಸೋಮವಾರ, 9 ಮಂಗಳಗೌರಿ ವ್ರತ ಬಂದಿದೆ.

ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ಏಕೆ ಉಂಟಾಗಿದೆ? ಅಧಿಕ ಮಾಸವನ್ನು ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗಿದೆ? ಈ ಸಮಯದಲ್ಲಿ ಶುಭ ಕಾರ್ಯ ಮಾಡಬಾರದು ಎಂದು ಏಕೆ ಹೇಳುತ್ತಾರೆ ಎಂದು ನೋಡೋಣ ಬನ್ನಿ:
ಅಧಿಕ ಮಾಸದಲ್ಲಿ ಸೂರ್ಯ ಸಂಕ್ರಾಂತಿ ಇಲ್ಲ
ಈ ವರ್ಷ ಶ್ರಾವಣ ಮಾಸ ಜುಲೈ 18ರಿಂದ ಆಗಸ್ಟ್ 17ರವರೆಗೆ ಇರಲಿದೆ, ಆಗಸ್ಟ್ 17ಕ್ಕೆ ಸೂರ್ಯ ಕರ್ಕ ರಾಶಿಯನ್ನು ಬಿಟ್ಟು ಸಿಂಹ ರಾಶಿಗೆ ಸಂಚರಿಸುತ್ತದೆ. ಆವಾಗ ಅಧಿಕ ಮಾಸ ಪ್ರಾರಂಭ, ಸೆಪ್ಟೆಂಬರ್ 15ರವರೆಗೆ ಶ್ರಾವಣ ಅಧಿಕ ಮಾಸ. ಈ ಮಾಸವನ್ನು ಪುರುಷೋತ್ತಮ ಮಾಸ ಎಂದು ಕರೆಯಲಾಗುವುದು.
ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗುವುದು?
ದಂತಕಥೆಯ ಪ್ರಕಾರ ಅಧಿಕ ಮಾಸವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ, ಆದ್ದರಿಂದ ಅಧಿಕ ಮಾಸದ ಒಡೆಯನಾಗಲು ಯಾವ ದೇವರೂ ಒಪ್ಪಿಕೊಳ್ಳುವುದಿಲ್ಲ, ಆವಾಗ ಅಧಿಕಮರು ಶ್ರೀವಿಷ್ಣುವನ್ನು ಪ್ರಾರ್ಥಿಸಿ ಈ ತಿಂಗಳ ಒಡೆಯನಾಗುವಂತೆ ಕೇಳಿಕೊಳ್ಳುತ್ತಾರೆ. ಅಧಿಕಮಾಗಳ ಪ್ರಾರ್ಥನೆಯನ್ನು ಕೇಳಿದ ವಿಷ್ಣು ಜೀ ಈ ತಿಂಗಳಿಗೆ ಪುರುಷೋತ್ತಮ ಎಂಬ ಅತ್ಯುತ್ತಮ ಹೆಸರನ್ನು ನೀಡಿದರು. ಅಂದಿನಿಂದ ಈ ಮಾಸಕ್ಕೆ ಪುರುಷೋತ್ತಮ ಮಾಸ ಎಂದು ಹೆಸರಾಯಿತು.
ಅಧಿಕ ಮಾಸದ ಮಹತ್ವ
ಈ ಮಾಸದಲ್ಲಿ ಭಕ್ತಿಯಿಂದ ಪೂಜೆ ಮಾಡುವುದರಿಂದ ಹರ-ಹರಿ ಇಬ್ಬರ ಕೃಪೆಗೆ ಪಾತ್ರರಾಗುತ್ತೀರಿ. ಈ ತಿಂಗಳಿನಲ್ಲಿ ಭಗವದ್ಗೀತೆ ಓದುವುದು, ಮಂತ್ರಗಳನ್ನು ಪಠಿಸುವುದು, ಪೂಜೆ ಮಾಡುವುದು, ದಾನ ಮಾಡುವುದು ಶ್ರೇಷ್ಠ ಎಂದು ಪರಿಗಣಿಸಲಾಗುವುದು. ಈ ತಿಂಗಳಿನಲ್ಲಿ ಭಕ್ತಿಯಿಂದ ದೇವರ ಕಾರ್ಯ ಮಾಡಿದರೆ ಹರ-ಹರಿಯ ಕೃಪೆಗೆ ಪಾತ್ರರಾಗುವಿರಿ.
8 ಅಧಿಕ ಮಾಸದಲ್ಲಿ ಶುಭ ಕಾರ್ಯ ಮಾಡುವುದಿಲ್ಲ
ಅಧಿಕ ಮಾಸವನ್ನು ಶುಭ ಎಂದು ಪರಿಗಣಿಸುವುದಿಲ್ಲ. ಆದ್ದರಿಂದ ಈ ಸಮಯದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಮದುವೆ, ನಾಮಕರಣ ಈ ರೀತಿ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ.



Click it and Unblock the Notifications