Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಈ ವರ್ಷಶ್ರಾವಣ ಮಾಸ ಎರಡು ತಿಂಗಳು ಬಂದಿರುವುದೇಕೆ? ಅಧಿಕ ಮಾಸ ಶುಭವಲ್ಲವೇ?
ಕನ್ನಡ ಪಂಚಾಂಗದ ಪ್ರಕಾರ ಶ್ರಾವಣ ಮಾಸ ಜುಲೈ 18ರಿಂದ ಶುರುವಾಗಿದೆ, ಸೆಪ್ಟೆಂರ್ 15ರವರೆಗೆ ಈ ವರ್ಷ ಶ್ರಾವಣ ಮಾಸ. ಸುಮಾರು 19 ವರ್ಷಗಳ ಬಳಿಕ ಅಧಿಕ ಶ್ರಾವಣ ಮಾಸ ಬಂದಿದೆ . ಅಧಿಕಮಾಸದಿಂದಾಗಿ ಚಾತುರ್ಮಾಸವು 4 ತಿಂಗಳ ಬದಲು ಈ ವರ್ಷ 5 ತಿಂಗಳು ಇರಲಿದೆ. ಹಿಂದೂ ಕ್ಯಾಲೆಂಡರ್ನಲ್ಲಿ ಸುಮಾರು ಮೂರು ವರ್ಷಗಳ ನಂತರ ಪ್ರತಿ ಬಾರಿ ಅಧಿಕಮಾಸ ಬರುತ್ತದೆ. ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ರಚನೆಯಾಗಿದೆ.
ಶ್ರಾವಣ ಮಾಸ ಶಿವ ಭಕ್ತರು ಕಾಯುವಂಥ ಮಾಸ
ಶಿವ ಭಕ್ತರು ಶ್ರಾವಣ ಮಾಸವನ್ನು ಖುಷಿಯಿಂದ ಬರಮಾಡಿಕೊಳ್ಳುತ್ತಾರೆ. ಶ್ರಾವಣ ಮಾಸದಲ್ಲಿ ಶ್ರಾವಣ ಸೋಮವಾರಂತೂ ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನವಾಗಿದೆ. ಈ ದಿನ ಉಪವಾಸವಿದ್ದು ಶಿವ ಭಕ್ತರು ಶಿವನ ಆರಾಧನೆಯಲ್ಲಿ ಮಗ್ನರಾಗಿರುತ್ತಾರೆ. ಈ ಬಾರಿ 8 ಶ್ರಾವಣ ಸೋಮವಾರ, 9 ಮಂಗಳಗೌರಿ ವ್ರತ ಬಂದಿದೆ.

ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ಏಕೆ ಉಂಟಾಗಿದೆ? ಅಧಿಕ ಮಾಸವನ್ನು ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗಿದೆ? ಈ ಸಮಯದಲ್ಲಿ ಶುಭ ಕಾರ್ಯ ಮಾಡಬಾರದು ಎಂದು ಏಕೆ ಹೇಳುತ್ತಾರೆ ಎಂದು ನೋಡೋಣ ಬನ್ನಿ:
ಅಧಿಕ ಮಾಸದಲ್ಲಿ ಸೂರ್ಯ ಸಂಕ್ರಾಂತಿ ಇಲ್ಲ
ಈ ವರ್ಷ ಶ್ರಾವಣ ಮಾಸ ಜುಲೈ 18ರಿಂದ ಆಗಸ್ಟ್ 17ರವರೆಗೆ ಇರಲಿದೆ, ಆಗಸ್ಟ್ 17ಕ್ಕೆ ಸೂರ್ಯ ಕರ್ಕ ರಾಶಿಯನ್ನು ಬಿಟ್ಟು ಸಿಂಹ ರಾಶಿಗೆ ಸಂಚರಿಸುತ್ತದೆ. ಆವಾಗ ಅಧಿಕ ಮಾಸ ಪ್ರಾರಂಭ, ಸೆಪ್ಟೆಂಬರ್ 15ರವರೆಗೆ ಶ್ರಾವಣ ಅಧಿಕ ಮಾಸ. ಈ ಮಾಸವನ್ನು ಪುರುಷೋತ್ತಮ ಮಾಸ ಎಂದು ಕರೆಯಲಾಗುವುದು.
ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗುವುದು?
ದಂತಕಥೆಯ ಪ್ರಕಾರ ಅಧಿಕ ಮಾಸವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ, ಆದ್ದರಿಂದ ಅಧಿಕ ಮಾಸದ ಒಡೆಯನಾಗಲು ಯಾವ ದೇವರೂ ಒಪ್ಪಿಕೊಳ್ಳುವುದಿಲ್ಲ, ಆವಾಗ ಅಧಿಕಮರು ಶ್ರೀವಿಷ್ಣುವನ್ನು ಪ್ರಾರ್ಥಿಸಿ ಈ ತಿಂಗಳ ಒಡೆಯನಾಗುವಂತೆ ಕೇಳಿಕೊಳ್ಳುತ್ತಾರೆ. ಅಧಿಕಮಾಗಳ ಪ್ರಾರ್ಥನೆಯನ್ನು ಕೇಳಿದ ವಿಷ್ಣು ಜೀ ಈ ತಿಂಗಳಿಗೆ ಪುರುಷೋತ್ತಮ ಎಂಬ ಅತ್ಯುತ್ತಮ ಹೆಸರನ್ನು ನೀಡಿದರು. ಅಂದಿನಿಂದ ಈ ಮಾಸಕ್ಕೆ ಪುರುಷೋತ್ತಮ ಮಾಸ ಎಂದು ಹೆಸರಾಯಿತು.
ಅಧಿಕ ಮಾಸದ ಮಹತ್ವ
ಈ ಮಾಸದಲ್ಲಿ ಭಕ್ತಿಯಿಂದ ಪೂಜೆ ಮಾಡುವುದರಿಂದ ಹರ-ಹರಿ ಇಬ್ಬರ ಕೃಪೆಗೆ ಪಾತ್ರರಾಗುತ್ತೀರಿ. ಈ ತಿಂಗಳಿನಲ್ಲಿ ಭಗವದ್ಗೀತೆ ಓದುವುದು, ಮಂತ್ರಗಳನ್ನು ಪಠಿಸುವುದು, ಪೂಜೆ ಮಾಡುವುದು, ದಾನ ಮಾಡುವುದು ಶ್ರೇಷ್ಠ ಎಂದು ಪರಿಗಣಿಸಲಾಗುವುದು. ಈ ತಿಂಗಳಿನಲ್ಲಿ ಭಕ್ತಿಯಿಂದ ದೇವರ ಕಾರ್ಯ ಮಾಡಿದರೆ ಹರ-ಹರಿಯ ಕೃಪೆಗೆ ಪಾತ್ರರಾಗುವಿರಿ.
8 ಅಧಿಕ ಮಾಸದಲ್ಲಿ ಶುಭ ಕಾರ್ಯ ಮಾಡುವುದಿಲ್ಲ
ಅಧಿಕ ಮಾಸವನ್ನು ಶುಭ ಎಂದು ಪರಿಗಣಿಸುವುದಿಲ್ಲ. ಆದ್ದರಿಂದ ಈ ಸಮಯದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಮದುವೆ, ನಾಮಕರಣ ಈ ರೀತಿ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ.



Click it and Unblock the Notifications