Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ!
ಈ ವರ್ಷಶ್ರಾವಣ ಮಾಸ ಎರಡು ತಿಂಗಳು ಬಂದಿರುವುದೇಕೆ? ಅಧಿಕ ಮಾಸ ಶುಭವಲ್ಲವೇ?
ಕನ್ನಡ ಪಂಚಾಂಗದ ಪ್ರಕಾರ ಶ್ರಾವಣ ಮಾಸ ಜುಲೈ 18ರಿಂದ ಶುರುವಾಗಿದೆ, ಸೆಪ್ಟೆಂರ್ 15ರವರೆಗೆ ಈ ವರ್ಷ ಶ್ರಾವಣ ಮಾಸ. ಸುಮಾರು 19 ವರ್ಷಗಳ ಬಳಿಕ ಅಧಿಕ ಶ್ರಾವಣ ಮಾಸ ಬಂದಿದೆ . ಅಧಿಕಮಾಸದಿಂದಾಗಿ ಚಾತುರ್ಮಾಸವು 4 ತಿಂಗಳ ಬದಲು ಈ ವರ್ಷ 5 ತಿಂಗಳು ಇರಲಿದೆ. ಹಿಂದೂ ಕ್ಯಾಲೆಂಡರ್ನಲ್ಲಿ ಸುಮಾರು ಮೂರು ವರ್ಷಗಳ ನಂತರ ಪ್ರತಿ ಬಾರಿ ಅಧಿಕಮಾಸ ಬರುತ್ತದೆ. ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ರಚನೆಯಾಗಿದೆ.
ಶ್ರಾವಣ ಮಾಸ ಶಿವ ಭಕ್ತರು ಕಾಯುವಂಥ ಮಾಸ
ಶಿವ ಭಕ್ತರು ಶ್ರಾವಣ ಮಾಸವನ್ನು ಖುಷಿಯಿಂದ ಬರಮಾಡಿಕೊಳ್ಳುತ್ತಾರೆ. ಶ್ರಾವಣ ಮಾಸದಲ್ಲಿ ಶ್ರಾವಣ ಸೋಮವಾರಂತೂ ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನವಾಗಿದೆ. ಈ ದಿನ ಉಪವಾಸವಿದ್ದು ಶಿವ ಭಕ್ತರು ಶಿವನ ಆರಾಧನೆಯಲ್ಲಿ ಮಗ್ನರಾಗಿರುತ್ತಾರೆ. ಈ ಬಾರಿ 8 ಶ್ರಾವಣ ಸೋಮವಾರ, 9 ಮಂಗಳಗೌರಿ ವ್ರತ ಬಂದಿದೆ.

ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ಏಕೆ ಉಂಟಾಗಿದೆ? ಅಧಿಕ ಮಾಸವನ್ನು ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗಿದೆ? ಈ ಸಮಯದಲ್ಲಿ ಶುಭ ಕಾರ್ಯ ಮಾಡಬಾರದು ಎಂದು ಏಕೆ ಹೇಳುತ್ತಾರೆ ಎಂದು ನೋಡೋಣ ಬನ್ನಿ:
ಅಧಿಕ ಮಾಸದಲ್ಲಿ ಸೂರ್ಯ ಸಂಕ್ರಾಂತಿ ಇಲ್ಲ
ಈ ವರ್ಷ ಶ್ರಾವಣ ಮಾಸ ಜುಲೈ 18ರಿಂದ ಆಗಸ್ಟ್ 17ರವರೆಗೆ ಇರಲಿದೆ, ಆಗಸ್ಟ್ 17ಕ್ಕೆ ಸೂರ್ಯ ಕರ್ಕ ರಾಶಿಯನ್ನು ಬಿಟ್ಟು ಸಿಂಹ ರಾಶಿಗೆ ಸಂಚರಿಸುತ್ತದೆ. ಆವಾಗ ಅಧಿಕ ಮಾಸ ಪ್ರಾರಂಭ, ಸೆಪ್ಟೆಂಬರ್ 15ರವರೆಗೆ ಶ್ರಾವಣ ಅಧಿಕ ಮಾಸ. ಈ ಮಾಸವನ್ನು ಪುರುಷೋತ್ತಮ ಮಾಸ ಎಂದು ಕರೆಯಲಾಗುವುದು.
ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗುವುದು?
ದಂತಕಥೆಯ ಪ್ರಕಾರ ಅಧಿಕ ಮಾಸವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ, ಆದ್ದರಿಂದ ಅಧಿಕ ಮಾಸದ ಒಡೆಯನಾಗಲು ಯಾವ ದೇವರೂ ಒಪ್ಪಿಕೊಳ್ಳುವುದಿಲ್ಲ, ಆವಾಗ ಅಧಿಕಮರು ಶ್ರೀವಿಷ್ಣುವನ್ನು ಪ್ರಾರ್ಥಿಸಿ ಈ ತಿಂಗಳ ಒಡೆಯನಾಗುವಂತೆ ಕೇಳಿಕೊಳ್ಳುತ್ತಾರೆ. ಅಧಿಕಮಾಗಳ ಪ್ರಾರ್ಥನೆಯನ್ನು ಕೇಳಿದ ವಿಷ್ಣು ಜೀ ಈ ತಿಂಗಳಿಗೆ ಪುರುಷೋತ್ತಮ ಎಂಬ ಅತ್ಯುತ್ತಮ ಹೆಸರನ್ನು ನೀಡಿದರು. ಅಂದಿನಿಂದ ಈ ಮಾಸಕ್ಕೆ ಪುರುಷೋತ್ತಮ ಮಾಸ ಎಂದು ಹೆಸರಾಯಿತು.
ಅಧಿಕ ಮಾಸದ ಮಹತ್ವ
ಈ ಮಾಸದಲ್ಲಿ ಭಕ್ತಿಯಿಂದ ಪೂಜೆ ಮಾಡುವುದರಿಂದ ಹರ-ಹರಿ ಇಬ್ಬರ ಕೃಪೆಗೆ ಪಾತ್ರರಾಗುತ್ತೀರಿ. ಈ ತಿಂಗಳಿನಲ್ಲಿ ಭಗವದ್ಗೀತೆ ಓದುವುದು, ಮಂತ್ರಗಳನ್ನು ಪಠಿಸುವುದು, ಪೂಜೆ ಮಾಡುವುದು, ದಾನ ಮಾಡುವುದು ಶ್ರೇಷ್ಠ ಎಂದು ಪರಿಗಣಿಸಲಾಗುವುದು. ಈ ತಿಂಗಳಿನಲ್ಲಿ ಭಕ್ತಿಯಿಂದ ದೇವರ ಕಾರ್ಯ ಮಾಡಿದರೆ ಹರ-ಹರಿಯ ಕೃಪೆಗೆ ಪಾತ್ರರಾಗುವಿರಿ.
8 ಅಧಿಕ ಮಾಸದಲ್ಲಿ ಶುಭ ಕಾರ್ಯ ಮಾಡುವುದಿಲ್ಲ
ಅಧಿಕ ಮಾಸವನ್ನು ಶುಭ ಎಂದು ಪರಿಗಣಿಸುವುದಿಲ್ಲ. ಆದ್ದರಿಂದ ಈ ಸಮಯದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಮದುವೆ, ನಾಮಕರಣ ಈ ರೀತಿ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ.



Click it and Unblock the Notifications