Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಈ ವರ್ಷಶ್ರಾವಣ ಮಾಸ ಎರಡು ತಿಂಗಳು ಬಂದಿರುವುದೇಕೆ? ಅಧಿಕ ಮಾಸ ಶುಭವಲ್ಲವೇ?
ಕನ್ನಡ ಪಂಚಾಂಗದ ಪ್ರಕಾರ ಶ್ರಾವಣ ಮಾಸ ಜುಲೈ 18ರಿಂದ ಶುರುವಾಗಿದೆ, ಸೆಪ್ಟೆಂರ್ 15ರವರೆಗೆ ಈ ವರ್ಷ ಶ್ರಾವಣ ಮಾಸ. ಸುಮಾರು 19 ವರ್ಷಗಳ ಬಳಿಕ ಅಧಿಕ ಶ್ರಾವಣ ಮಾಸ ಬಂದಿದೆ . ಅಧಿಕಮಾಸದಿಂದಾಗಿ ಚಾತುರ್ಮಾಸವು 4 ತಿಂಗಳ ಬದಲು ಈ ವರ್ಷ 5 ತಿಂಗಳು ಇರಲಿದೆ. ಹಿಂದೂ ಕ್ಯಾಲೆಂಡರ್ನಲ್ಲಿ ಸುಮಾರು ಮೂರು ವರ್ಷಗಳ ನಂತರ ಪ್ರತಿ ಬಾರಿ ಅಧಿಕಮಾಸ ಬರುತ್ತದೆ. ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ರಚನೆಯಾಗಿದೆ.
ಶ್ರಾವಣ ಮಾಸ ಶಿವ ಭಕ್ತರು ಕಾಯುವಂಥ ಮಾಸ
ಶಿವ ಭಕ್ತರು ಶ್ರಾವಣ ಮಾಸವನ್ನು ಖುಷಿಯಿಂದ ಬರಮಾಡಿಕೊಳ್ಳುತ್ತಾರೆ. ಶ್ರಾವಣ ಮಾಸದಲ್ಲಿ ಶ್ರಾವಣ ಸೋಮವಾರಂತೂ ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನವಾಗಿದೆ. ಈ ದಿನ ಉಪವಾಸವಿದ್ದು ಶಿವ ಭಕ್ತರು ಶಿವನ ಆರಾಧನೆಯಲ್ಲಿ ಮಗ್ನರಾಗಿರುತ್ತಾರೆ. ಈ ಬಾರಿ 8 ಶ್ರಾವಣ ಸೋಮವಾರ, 9 ಮಂಗಳಗೌರಿ ವ್ರತ ಬಂದಿದೆ.

ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ಏಕೆ ಉಂಟಾಗಿದೆ? ಅಧಿಕ ಮಾಸವನ್ನು ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗಿದೆ? ಈ ಸಮಯದಲ್ಲಿ ಶುಭ ಕಾರ್ಯ ಮಾಡಬಾರದು ಎಂದು ಏಕೆ ಹೇಳುತ್ತಾರೆ ಎಂದು ನೋಡೋಣ ಬನ್ನಿ:
ಅಧಿಕ ಮಾಸದಲ್ಲಿ ಸೂರ್ಯ ಸಂಕ್ರಾಂತಿ ಇಲ್ಲ
ಈ ವರ್ಷ ಶ್ರಾವಣ ಮಾಸ ಜುಲೈ 18ರಿಂದ ಆಗಸ್ಟ್ 17ರವರೆಗೆ ಇರಲಿದೆ, ಆಗಸ್ಟ್ 17ಕ್ಕೆ ಸೂರ್ಯ ಕರ್ಕ ರಾಶಿಯನ್ನು ಬಿಟ್ಟು ಸಿಂಹ ರಾಶಿಗೆ ಸಂಚರಿಸುತ್ತದೆ. ಆವಾಗ ಅಧಿಕ ಮಾಸ ಪ್ರಾರಂಭ, ಸೆಪ್ಟೆಂಬರ್ 15ರವರೆಗೆ ಶ್ರಾವಣ ಅಧಿಕ ಮಾಸ. ಈ ಮಾಸವನ್ನು ಪುರುಷೋತ್ತಮ ಮಾಸ ಎಂದು ಕರೆಯಲಾಗುವುದು.
ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗುವುದು?
ದಂತಕಥೆಯ ಪ್ರಕಾರ ಅಧಿಕ ಮಾಸವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ, ಆದ್ದರಿಂದ ಅಧಿಕ ಮಾಸದ ಒಡೆಯನಾಗಲು ಯಾವ ದೇವರೂ ಒಪ್ಪಿಕೊಳ್ಳುವುದಿಲ್ಲ, ಆವಾಗ ಅಧಿಕಮರು ಶ್ರೀವಿಷ್ಣುವನ್ನು ಪ್ರಾರ್ಥಿಸಿ ಈ ತಿಂಗಳ ಒಡೆಯನಾಗುವಂತೆ ಕೇಳಿಕೊಳ್ಳುತ್ತಾರೆ. ಅಧಿಕಮಾಗಳ ಪ್ರಾರ್ಥನೆಯನ್ನು ಕೇಳಿದ ವಿಷ್ಣು ಜೀ ಈ ತಿಂಗಳಿಗೆ ಪುರುಷೋತ್ತಮ ಎಂಬ ಅತ್ಯುತ್ತಮ ಹೆಸರನ್ನು ನೀಡಿದರು. ಅಂದಿನಿಂದ ಈ ಮಾಸಕ್ಕೆ ಪುರುಷೋತ್ತಮ ಮಾಸ ಎಂದು ಹೆಸರಾಯಿತು.
ಅಧಿಕ ಮಾಸದ ಮಹತ್ವ
ಈ ಮಾಸದಲ್ಲಿ ಭಕ್ತಿಯಿಂದ ಪೂಜೆ ಮಾಡುವುದರಿಂದ ಹರ-ಹರಿ ಇಬ್ಬರ ಕೃಪೆಗೆ ಪಾತ್ರರಾಗುತ್ತೀರಿ. ಈ ತಿಂಗಳಿನಲ್ಲಿ ಭಗವದ್ಗೀತೆ ಓದುವುದು, ಮಂತ್ರಗಳನ್ನು ಪಠಿಸುವುದು, ಪೂಜೆ ಮಾಡುವುದು, ದಾನ ಮಾಡುವುದು ಶ್ರೇಷ್ಠ ಎಂದು ಪರಿಗಣಿಸಲಾಗುವುದು. ಈ ತಿಂಗಳಿನಲ್ಲಿ ಭಕ್ತಿಯಿಂದ ದೇವರ ಕಾರ್ಯ ಮಾಡಿದರೆ ಹರ-ಹರಿಯ ಕೃಪೆಗೆ ಪಾತ್ರರಾಗುವಿರಿ.
8 ಅಧಿಕ ಮಾಸದಲ್ಲಿ ಶುಭ ಕಾರ್ಯ ಮಾಡುವುದಿಲ್ಲ
ಅಧಿಕ ಮಾಸವನ್ನು ಶುಭ ಎಂದು ಪರಿಗಣಿಸುವುದಿಲ್ಲ. ಆದ್ದರಿಂದ ಈ ಸಮಯದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಮದುವೆ, ನಾಮಕರಣ ಈ ರೀತಿ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ.



Click it and Unblock the Notifications
