Latest Updates
-
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ! -
ಭಾರತ-ಜಿಂಬಾಬ್ವೆ ಟಿ20 ಪಂದ್ಯದ ಮಜಾ ಸವಿಯುತ್ತಲೇ ಮನೆಯ ಜವಾಬ್ದಾರಿ ನಿಭಾಯಿಸುವುದು ಹೇಗೆ? ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
IMD ರೆಡ್ ಅಲರ್ಟ್: ಭಾರಿ ಮಳೆಯಿಂದ ಮನೆಯನ್ನು ರಕ್ಷಿಸಲು ಈ 5 ಮುನ್ನೆಚ್ಚರಿಕೆಗಳು ಕಡ್ಡಾಯ! -
ಗುರು ಪೂರ್ಣಿಮಾ ಉಪವಾಸ: ಮಧುಮೇಹಿಗಳು ಆರೋಗ್ಯವಾಗಿರಲು ಈ ಸಾತ್ವಿಕ ಆಹಾರ ಕ್ರಮ ಪಾಲಿಸಿ -
ಪೇಪರ್ ಸೋರಿಕೆ ಮಾಡಿದ್ರೆ 10 ವರ್ಷ ಜೈಲು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಿಗಲಿದೆ ಹೊಸ ಭದ್ರತೆ! -
ಕಾರ್ಗಿಲ್ ವಿಜಯ್ ದಿವಸ್: ದೇಶಭಕ್ತಿಯ ನಡಿಗೆಯಲ್ಲಿ ಪಾಲ್ಗೊಳ್ಳುವ ಮುನ್ನ ಈ ಆರೋಗ್ಯ ಟಿಪ್ಸ್ ಮರೆಯದಿರಿ -
ದೇವಶಯನಿ ಏಕಾದಶಿ: ದಂಪತಿಗಳ ಬಾಂಧವ್ಯ ಹೆಚ್ಚಿಸಲು ಈ ಉಪವಾಸದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ತೇವಾಂಶ: ನಿಮ್ಮ ದುಬಾರಿ ಸೀರೆ ಮತ್ತು ಶೂಗಳನ್ನು ಬೂಸ್ಟ್ನಿಂದ ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಸಾಕು! -
ಅಹಮದಾಬಾದ್ ಮಳೆ: ಪ್ರವಾಹದ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಮಾರ್ಗಸೂಚಿಗಳನ್ನು ಅನುಸರಿಸಿ -
ಕಾಮನ್ವೆಲ್ತ್ ಗೇಮ್ಸ್ 2026: 3ನೇ ದಿನ ಭಾರತದ ಆಟಗಾರರ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ!
ಈ ವರ್ಷಶ್ರಾವಣ ಮಾಸ ಎರಡು ತಿಂಗಳು ಬಂದಿರುವುದೇಕೆ? ಅಧಿಕ ಮಾಸ ಶುಭವಲ್ಲವೇ?
ಕನ್ನಡ ಪಂಚಾಂಗದ ಪ್ರಕಾರ ಶ್ರಾವಣ ಮಾಸ ಜುಲೈ 18ರಿಂದ ಶುರುವಾಗಿದೆ, ಸೆಪ್ಟೆಂರ್ 15ರವರೆಗೆ ಈ ವರ್ಷ ಶ್ರಾವಣ ಮಾಸ. ಸುಮಾರು 19 ವರ್ಷಗಳ ಬಳಿಕ ಅಧಿಕ ಶ್ರಾವಣ ಮಾಸ ಬಂದಿದೆ . ಅಧಿಕಮಾಸದಿಂದಾಗಿ ಚಾತುರ್ಮಾಸವು 4 ತಿಂಗಳ ಬದಲು ಈ ವರ್ಷ 5 ತಿಂಗಳು ಇರಲಿದೆ. ಹಿಂದೂ ಕ್ಯಾಲೆಂಡರ್ನಲ್ಲಿ ಸುಮಾರು ಮೂರು ವರ್ಷಗಳ ನಂತರ ಪ್ರತಿ ಬಾರಿ ಅಧಿಕಮಾಸ ಬರುತ್ತದೆ. ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ರಚನೆಯಾಗಿದೆ.
ಶ್ರಾವಣ ಮಾಸ ಶಿವ ಭಕ್ತರು ಕಾಯುವಂಥ ಮಾಸ
ಶಿವ ಭಕ್ತರು ಶ್ರಾವಣ ಮಾಸವನ್ನು ಖುಷಿಯಿಂದ ಬರಮಾಡಿಕೊಳ್ಳುತ್ತಾರೆ. ಶ್ರಾವಣ ಮಾಸದಲ್ಲಿ ಶ್ರಾವಣ ಸೋಮವಾರಂತೂ ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನವಾಗಿದೆ. ಈ ದಿನ ಉಪವಾಸವಿದ್ದು ಶಿವ ಭಕ್ತರು ಶಿವನ ಆರಾಧನೆಯಲ್ಲಿ ಮಗ್ನರಾಗಿರುತ್ತಾರೆ. ಈ ಬಾರಿ 8 ಶ್ರಾವಣ ಸೋಮವಾರ, 9 ಮಂಗಳಗೌರಿ ವ್ರತ ಬಂದಿದೆ.

ಈ ವರ್ಷ ಶ್ರಾವಣ ಮಾಸದಲ್ಲಿ ಅಧಿಕ ಮಾಸ ಏಕೆ ಉಂಟಾಗಿದೆ? ಅಧಿಕ ಮಾಸವನ್ನು ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗಿದೆ? ಈ ಸಮಯದಲ್ಲಿ ಶುಭ ಕಾರ್ಯ ಮಾಡಬಾರದು ಎಂದು ಏಕೆ ಹೇಳುತ್ತಾರೆ ಎಂದು ನೋಡೋಣ ಬನ್ನಿ:
ಅಧಿಕ ಮಾಸದಲ್ಲಿ ಸೂರ್ಯ ಸಂಕ್ರಾಂತಿ ಇಲ್ಲ
ಈ ವರ್ಷ ಶ್ರಾವಣ ಮಾಸ ಜುಲೈ 18ರಿಂದ ಆಗಸ್ಟ್ 17ರವರೆಗೆ ಇರಲಿದೆ, ಆಗಸ್ಟ್ 17ಕ್ಕೆ ಸೂರ್ಯ ಕರ್ಕ ರಾಶಿಯನ್ನು ಬಿಟ್ಟು ಸಿಂಹ ರಾಶಿಗೆ ಸಂಚರಿಸುತ್ತದೆ. ಆವಾಗ ಅಧಿಕ ಮಾಸ ಪ್ರಾರಂಭ, ಸೆಪ್ಟೆಂಬರ್ 15ರವರೆಗೆ ಶ್ರಾವಣ ಅಧಿಕ ಮಾಸ. ಈ ಮಾಸವನ್ನು ಪುರುಷೋತ್ತಮ ಮಾಸ ಎಂದು ಕರೆಯಲಾಗುವುದು.
ಪುರುಷೋತ್ತಮ ಮಾಸ ಎಂದು ಏಕೆ ಕರೆಯಲಾಗುವುದು?
ದಂತಕಥೆಯ ಪ್ರಕಾರ ಅಧಿಕ ಮಾಸವನ್ನು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ, ಆದ್ದರಿಂದ ಅಧಿಕ ಮಾಸದ ಒಡೆಯನಾಗಲು ಯಾವ ದೇವರೂ ಒಪ್ಪಿಕೊಳ್ಳುವುದಿಲ್ಲ, ಆವಾಗ ಅಧಿಕಮರು ಶ್ರೀವಿಷ್ಣುವನ್ನು ಪ್ರಾರ್ಥಿಸಿ ಈ ತಿಂಗಳ ಒಡೆಯನಾಗುವಂತೆ ಕೇಳಿಕೊಳ್ಳುತ್ತಾರೆ. ಅಧಿಕಮಾಗಳ ಪ್ರಾರ್ಥನೆಯನ್ನು ಕೇಳಿದ ವಿಷ್ಣು ಜೀ ಈ ತಿಂಗಳಿಗೆ ಪುರುಷೋತ್ತಮ ಎಂಬ ಅತ್ಯುತ್ತಮ ಹೆಸರನ್ನು ನೀಡಿದರು. ಅಂದಿನಿಂದ ಈ ಮಾಸಕ್ಕೆ ಪುರುಷೋತ್ತಮ ಮಾಸ ಎಂದು ಹೆಸರಾಯಿತು.
ಅಧಿಕ ಮಾಸದ ಮಹತ್ವ
ಈ ಮಾಸದಲ್ಲಿ ಭಕ್ತಿಯಿಂದ ಪೂಜೆ ಮಾಡುವುದರಿಂದ ಹರ-ಹರಿ ಇಬ್ಬರ ಕೃಪೆಗೆ ಪಾತ್ರರಾಗುತ್ತೀರಿ. ಈ ತಿಂಗಳಿನಲ್ಲಿ ಭಗವದ್ಗೀತೆ ಓದುವುದು, ಮಂತ್ರಗಳನ್ನು ಪಠಿಸುವುದು, ಪೂಜೆ ಮಾಡುವುದು, ದಾನ ಮಾಡುವುದು ಶ್ರೇಷ್ಠ ಎಂದು ಪರಿಗಣಿಸಲಾಗುವುದು. ಈ ತಿಂಗಳಿನಲ್ಲಿ ಭಕ್ತಿಯಿಂದ ದೇವರ ಕಾರ್ಯ ಮಾಡಿದರೆ ಹರ-ಹರಿಯ ಕೃಪೆಗೆ ಪಾತ್ರರಾಗುವಿರಿ.
8 ಅಧಿಕ ಮಾಸದಲ್ಲಿ ಶುಭ ಕಾರ್ಯ ಮಾಡುವುದಿಲ್ಲ
ಅಧಿಕ ಮಾಸವನ್ನು ಶುಭ ಎಂದು ಪರಿಗಣಿಸುವುದಿಲ್ಲ. ಆದ್ದರಿಂದ ಈ ಸಮಯದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಮದುವೆ, ನಾಮಕರಣ ಈ ರೀತಿ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ.



Click it and Unblock the Notifications