Latest Updates
-
ಮನೆಯನ್ನು ತಂಪಾಗಿಡಲು ಹೀಟ್ವೇವ್ ಸಮಯದಲ್ಲಿ ಈ ಟ್ರಿಕ್ಸ್ ಫಾಲೋ ಮಾಡಿ -
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲೂ ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ
ತಿರುಪತಿಯಲ್ಲಿ ಮುಡಿ ದಾನ ಮಾಡುವುದರ ಹಿಂದಿರುವ ಮಹತ್ವವೇನು ಗೊತ್ತೇ?
ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದು ತಿರುಪತಿ. ತಿರುಪತಿ ಬಾಲಾಜಿಯ ದರ್ಶನ ಪಡೆಯಲು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಈ ಯಾರು ಈ ಪವಿತ್ರ ಕ್ಷೇತ್ರಕ್ಕೆ ಬಂದು ಬಾಲಾಜಿ ದೇವರ ದರ್ಶನ ಪಡೆಯುತ್ತಾರೋ ಅವರಿಗೆ ಎಲ್ಲಾ ಪಾಪಗಳಿಂದ ಮೋಕ್ಷ ಸಿಗುವುದು ಎಂಬ ನಂಬಿಕೆ.

ತಿರುಪತಿ ದೇವಾಲಯಕ್ಕೆ ಬಂದ ಭಕ್ತರು ಇಲ್ಲಿ ಮುಡಿಯನ್ನು ಹರಿಕೆ ರೂಪದಲ್ಲಿ ಸಲ್ಲಿಸುತ್ತಾರೆ. ತಮ್ಮ ಯಾವುದೋ ಒಂದು ಕಾರ್ಯಸಿದ್ಧಿಗಾಗಿ ಭಗವಂತ ತಿರುಪತಿ ಬಾಲಾಜಿಯಲ್ಲಿ ಪ್ರಾರ್ಥನೆ ಮಾಡಿರುತ್ತಾರೆ. ಆ ಕಾರ್ಯ ನೆರವೇರಿದಾಗ ಆ ಬಾಲಾಜಿಗೆ ತಮ್ಮ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೆ. ಏಕೆ ಬಾಲಾಜಿಗೆ ಮುಡಿಯನ್ನು ಅರ್ಪಿಸುತ್ತಾರೆ, ಇದರ ಹಿಂದಿರುವ ಪೌರಾಣಿಕ ಕತೆಯ ಹಿನ್ನೆಲೆಯೇನು ಎಂದು ನೋಡೋಣ ಬನ್ನಿ:
ನಂಬಿಕೆ
ವೆಂಕಟೇಶ್ವರ ಕುಬೇರನಿಂದ ಪಡೆದ ಸಂಪತ್ತನ್ನು ಕೂದಲಿನ ರೂಪದಲ್ಲಿ ಮರಳಿಸುತ್ತಾನೆ ಎಂಬುವುದಾಗಿ ಪೌರಾಣಿಕ ಕತೆಯಿದೆ. ಭಕ್ತರು ವೆಂಕಟೇಶ್ವರನಿಗೆ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸಿದರೆ ತಿರುಪತಿ ಅವರಿಗೆ 10 ಪಟ್ಟು ಅಧಿಕ ಸಂಪತ್ತು ಮರಳಿಸುತ್ತಾನೆ ಎಂಬ ನಂಬಿಕೆಯಿದೆ. ಯಾರು ವೆಂಕಟೇಶ್ವರನಿಗೆ ಕೂದಲನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೋ ಅವರಿಗೆ ಲಕ್ಷ್ಮಿ ಕೃಪೆ ಇರಲಿದೆ. ಇಲ್ಲಿ ಪುರುಷರು ಹಾಗೂ ಮಹಿಳೆಯರು ವೆಂಟೇಶ್ವರನಿಗೆ ಕೂದಲನ್ನು ಅರ್ಪಿಸುತ್ತಾರೆ.
ಪೌರಾಣಿಕ ಕತೆ
ಪೌರಾಣಿಕ ಕತೆಯ ಪ್ರಕಾರ ಬೆಟ್ಟದಲ್ಲಿ ಇರುವೆಗಳ ಗುಂಪುವೊಂದು ವೆಂಕಟೇಶ್ವರ ಪ್ರಾರ್ಥಿಸುತ್ತವೆ,ಹಸುವೊಂದು ಬೆಟ್ಟಕ್ಕೆ ಹೋಗಿ ಆ ಇರುವೆಗಳಿಗೆ ಹಾಲು ನೀಡುತ್ತದೆ. ಇದನ್ನು ನೋಡಿದ ಹಸುವಿನ ಮಾಲಿಕ ಕೋಪದಿಂದ ಕೊಡಲಿಯಿಂದ ಹಸುವಿನ ತಲೆಗೆ ಪೆಟ್ಟು ನೀಡುತ್ತಾನೆ. ಇದರಿಂದ ಬಾಲಾಜಿ ತಲೆಗೆ ಪೆಟ್ಟಾಗಿ ಕೂದಲು ಕೆಳಗೆ ಬೀಳುತ್ತದೆ. ಆಗ ನೀಲಾ ದೇವಿ ತನ್ನ ಕೂದಲನ್ನು ಕತ್ತರಿಸಿ, ಬಾಲಾಜಿ ತಲೆಗೆ ಅಂಟಿಸುತ್ತಾಳೆ, ಇದರಿಂದ ಬಾಲಾಜಿ ಗಾಯ ವಾಸಿಯಾಗುವುದು. ಕೂದಲು ಸೌಂದರ್ಯದ ಪ್ರತೀಕ. ತನ್ನ ಸೌಂದರ್ಯ ಲೆಕ್ಕಿಸದೆ ನೀಲಾ ದೇವಿ ತನ್ನ ಕೂದಲನ್ನು ಬಾಲಾಜಿಗೆ ಅರ್ಪಿಸುತ್ತಾಳೆ. ಆದ್ದರಿಂದ ಯಾರು ವೆಂಕಟೇಶ್ವರನಿಗೆ ಕೂದಲು ಅರ್ಪಿಸುತ್ತಾರೋ ಅವರ ಬಯಕೆ ಈಡೇರುವುದು ಎಂಬ ನಂಬಿಕೆ ಇದೆ.
ಇಲ್ಲಿ ದಾನ ಮಾಡಿದ ಕೂದಲು ಏನಾಗುತ್ತದೆ?
ತಿರುಪತಿಯಲ್ಲಿ ದಾನ ಮಾಡಲಾಗುವ ಕೂದಲನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಮಾರಲಾಗುವುದು. ಯುರೋಪ್, ಅಮೆರಿಕ, ಚೀನಾ, ಆಫ್ರಿಕಾ ದೇಶಗಳಲ್ಲಿ ಕೂದಲಿಗೆ ತುಂಬಾ ಡಿಮ್ಯಾಂಡ್ ಇದೆ.
ಒಂದು ದಿನದಲ್ಲಿ ಸುಮಾರು 20, 000ಕ್ಕೂ ಅಧಿಕ ಭಕ್ತರು ಇಲ್ಲಿ ಕೂದಲನ್ನು ದಾನ ಮಾಡುತ್ತಾರೆ.



Click it and Unblock the Notifications











