Latest Updates
-
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ
ತಿರುಪತಿಯಲ್ಲಿ ಮುಡಿ ದಾನ ಮಾಡುವುದರ ಹಿಂದಿರುವ ಮಹತ್ವವೇನು ಗೊತ್ತೇ?
ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದು ತಿರುಪತಿ. ತಿರುಪತಿ ಬಾಲಾಜಿಯ ದರ್ಶನ ಪಡೆಯಲು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಈ ಯಾರು ಈ ಪವಿತ್ರ ಕ್ಷೇತ್ರಕ್ಕೆ ಬಂದು ಬಾಲಾಜಿ ದೇವರ ದರ್ಶನ ಪಡೆಯುತ್ತಾರೋ ಅವರಿಗೆ ಎಲ್ಲಾ ಪಾಪಗಳಿಂದ ಮೋಕ್ಷ ಸಿಗುವುದು ಎಂಬ ನಂಬಿಕೆ.

ತಿರುಪತಿ ದೇವಾಲಯಕ್ಕೆ ಬಂದ ಭಕ್ತರು ಇಲ್ಲಿ ಮುಡಿಯನ್ನು ಹರಿಕೆ ರೂಪದಲ್ಲಿ ಸಲ್ಲಿಸುತ್ತಾರೆ. ತಮ್ಮ ಯಾವುದೋ ಒಂದು ಕಾರ್ಯಸಿದ್ಧಿಗಾಗಿ ಭಗವಂತ ತಿರುಪತಿ ಬಾಲಾಜಿಯಲ್ಲಿ ಪ್ರಾರ್ಥನೆ ಮಾಡಿರುತ್ತಾರೆ. ಆ ಕಾರ್ಯ ನೆರವೇರಿದಾಗ ಆ ಬಾಲಾಜಿಗೆ ತಮ್ಮ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೆ. ಏಕೆ ಬಾಲಾಜಿಗೆ ಮುಡಿಯನ್ನು ಅರ್ಪಿಸುತ್ತಾರೆ, ಇದರ ಹಿಂದಿರುವ ಪೌರಾಣಿಕ ಕತೆಯ ಹಿನ್ನೆಲೆಯೇನು ಎಂದು ನೋಡೋಣ ಬನ್ನಿ:
ನಂಬಿಕೆ
ವೆಂಕಟೇಶ್ವರ ಕುಬೇರನಿಂದ ಪಡೆದ ಸಂಪತ್ತನ್ನು ಕೂದಲಿನ ರೂಪದಲ್ಲಿ ಮರಳಿಸುತ್ತಾನೆ ಎಂಬುವುದಾಗಿ ಪೌರಾಣಿಕ ಕತೆಯಿದೆ. ಭಕ್ತರು ವೆಂಕಟೇಶ್ವರನಿಗೆ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸಿದರೆ ತಿರುಪತಿ ಅವರಿಗೆ 10 ಪಟ್ಟು ಅಧಿಕ ಸಂಪತ್ತು ಮರಳಿಸುತ್ತಾನೆ ಎಂಬ ನಂಬಿಕೆಯಿದೆ. ಯಾರು ವೆಂಕಟೇಶ್ವರನಿಗೆ ಕೂದಲನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೋ ಅವರಿಗೆ ಲಕ್ಷ್ಮಿ ಕೃಪೆ ಇರಲಿದೆ. ಇಲ್ಲಿ ಪುರುಷರು ಹಾಗೂ ಮಹಿಳೆಯರು ವೆಂಟೇಶ್ವರನಿಗೆ ಕೂದಲನ್ನು ಅರ್ಪಿಸುತ್ತಾರೆ.
ಪೌರಾಣಿಕ ಕತೆ
ಪೌರಾಣಿಕ ಕತೆಯ ಪ್ರಕಾರ ಬೆಟ್ಟದಲ್ಲಿ ಇರುವೆಗಳ ಗುಂಪುವೊಂದು ವೆಂಕಟೇಶ್ವರ ಪ್ರಾರ್ಥಿಸುತ್ತವೆ,ಹಸುವೊಂದು ಬೆಟ್ಟಕ್ಕೆ ಹೋಗಿ ಆ ಇರುವೆಗಳಿಗೆ ಹಾಲು ನೀಡುತ್ತದೆ. ಇದನ್ನು ನೋಡಿದ ಹಸುವಿನ ಮಾಲಿಕ ಕೋಪದಿಂದ ಕೊಡಲಿಯಿಂದ ಹಸುವಿನ ತಲೆಗೆ ಪೆಟ್ಟು ನೀಡುತ್ತಾನೆ. ಇದರಿಂದ ಬಾಲಾಜಿ ತಲೆಗೆ ಪೆಟ್ಟಾಗಿ ಕೂದಲು ಕೆಳಗೆ ಬೀಳುತ್ತದೆ. ಆಗ ನೀಲಾ ದೇವಿ ತನ್ನ ಕೂದಲನ್ನು ಕತ್ತರಿಸಿ, ಬಾಲಾಜಿ ತಲೆಗೆ ಅಂಟಿಸುತ್ತಾಳೆ, ಇದರಿಂದ ಬಾಲಾಜಿ ಗಾಯ ವಾಸಿಯಾಗುವುದು. ಕೂದಲು ಸೌಂದರ್ಯದ ಪ್ರತೀಕ. ತನ್ನ ಸೌಂದರ್ಯ ಲೆಕ್ಕಿಸದೆ ನೀಲಾ ದೇವಿ ತನ್ನ ಕೂದಲನ್ನು ಬಾಲಾಜಿಗೆ ಅರ್ಪಿಸುತ್ತಾಳೆ. ಆದ್ದರಿಂದ ಯಾರು ವೆಂಕಟೇಶ್ವರನಿಗೆ ಕೂದಲು ಅರ್ಪಿಸುತ್ತಾರೋ ಅವರ ಬಯಕೆ ಈಡೇರುವುದು ಎಂಬ ನಂಬಿಕೆ ಇದೆ.
ಇಲ್ಲಿ ದಾನ ಮಾಡಿದ ಕೂದಲು ಏನಾಗುತ್ತದೆ?
ತಿರುಪತಿಯಲ್ಲಿ ದಾನ ಮಾಡಲಾಗುವ ಕೂದಲನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಮಾರಲಾಗುವುದು. ಯುರೋಪ್, ಅಮೆರಿಕ, ಚೀನಾ, ಆಫ್ರಿಕಾ ದೇಶಗಳಲ್ಲಿ ಕೂದಲಿಗೆ ತುಂಬಾ ಡಿಮ್ಯಾಂಡ್ ಇದೆ.
ಒಂದು ದಿನದಲ್ಲಿ ಸುಮಾರು 20, 000ಕ್ಕೂ ಅಧಿಕ ಭಕ್ತರು ಇಲ್ಲಿ ಕೂದಲನ್ನು ದಾನ ಮಾಡುತ್ತಾರೆ.



Click it and Unblock the Notifications











