Latest Updates
-
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್!
ತಿರುಪತಿಯಲ್ಲಿ ಮುಡಿ ದಾನ ಮಾಡುವುದರ ಹಿಂದಿರುವ ಮಹತ್ವವೇನು ಗೊತ್ತೇ?
ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದು ತಿರುಪತಿ. ತಿರುಪತಿ ಬಾಲಾಜಿಯ ದರ್ಶನ ಪಡೆಯಲು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಈ ಯಾರು ಈ ಪವಿತ್ರ ಕ್ಷೇತ್ರಕ್ಕೆ ಬಂದು ಬಾಲಾಜಿ ದೇವರ ದರ್ಶನ ಪಡೆಯುತ್ತಾರೋ ಅವರಿಗೆ ಎಲ್ಲಾ ಪಾಪಗಳಿಂದ ಮೋಕ್ಷ ಸಿಗುವುದು ಎಂಬ ನಂಬಿಕೆ.

ತಿರುಪತಿ ದೇವಾಲಯಕ್ಕೆ ಬಂದ ಭಕ್ತರು ಇಲ್ಲಿ ಮುಡಿಯನ್ನು ಹರಿಕೆ ರೂಪದಲ್ಲಿ ಸಲ್ಲಿಸುತ್ತಾರೆ. ತಮ್ಮ ಯಾವುದೋ ಒಂದು ಕಾರ್ಯಸಿದ್ಧಿಗಾಗಿ ಭಗವಂತ ತಿರುಪತಿ ಬಾಲಾಜಿಯಲ್ಲಿ ಪ್ರಾರ್ಥನೆ ಮಾಡಿರುತ್ತಾರೆ. ಆ ಕಾರ್ಯ ನೆರವೇರಿದಾಗ ಆ ಬಾಲಾಜಿಗೆ ತಮ್ಮ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೆ. ಏಕೆ ಬಾಲಾಜಿಗೆ ಮುಡಿಯನ್ನು ಅರ್ಪಿಸುತ್ತಾರೆ, ಇದರ ಹಿಂದಿರುವ ಪೌರಾಣಿಕ ಕತೆಯ ಹಿನ್ನೆಲೆಯೇನು ಎಂದು ನೋಡೋಣ ಬನ್ನಿ:
ನಂಬಿಕೆ
ವೆಂಕಟೇಶ್ವರ ಕುಬೇರನಿಂದ ಪಡೆದ ಸಂಪತ್ತನ್ನು ಕೂದಲಿನ ರೂಪದಲ್ಲಿ ಮರಳಿಸುತ್ತಾನೆ ಎಂಬುವುದಾಗಿ ಪೌರಾಣಿಕ ಕತೆಯಿದೆ. ಭಕ್ತರು ವೆಂಕಟೇಶ್ವರನಿಗೆ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸಿದರೆ ತಿರುಪತಿ ಅವರಿಗೆ 10 ಪಟ್ಟು ಅಧಿಕ ಸಂಪತ್ತು ಮರಳಿಸುತ್ತಾನೆ ಎಂಬ ನಂಬಿಕೆಯಿದೆ. ಯಾರು ವೆಂಕಟೇಶ್ವರನಿಗೆ ಕೂದಲನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೋ ಅವರಿಗೆ ಲಕ್ಷ್ಮಿ ಕೃಪೆ ಇರಲಿದೆ. ಇಲ್ಲಿ ಪುರುಷರು ಹಾಗೂ ಮಹಿಳೆಯರು ವೆಂಟೇಶ್ವರನಿಗೆ ಕೂದಲನ್ನು ಅರ್ಪಿಸುತ್ತಾರೆ.
ಪೌರಾಣಿಕ ಕತೆ
ಪೌರಾಣಿಕ ಕತೆಯ ಪ್ರಕಾರ ಬೆಟ್ಟದಲ್ಲಿ ಇರುವೆಗಳ ಗುಂಪುವೊಂದು ವೆಂಕಟೇಶ್ವರ ಪ್ರಾರ್ಥಿಸುತ್ತವೆ,ಹಸುವೊಂದು ಬೆಟ್ಟಕ್ಕೆ ಹೋಗಿ ಆ ಇರುವೆಗಳಿಗೆ ಹಾಲು ನೀಡುತ್ತದೆ. ಇದನ್ನು ನೋಡಿದ ಹಸುವಿನ ಮಾಲಿಕ ಕೋಪದಿಂದ ಕೊಡಲಿಯಿಂದ ಹಸುವಿನ ತಲೆಗೆ ಪೆಟ್ಟು ನೀಡುತ್ತಾನೆ. ಇದರಿಂದ ಬಾಲಾಜಿ ತಲೆಗೆ ಪೆಟ್ಟಾಗಿ ಕೂದಲು ಕೆಳಗೆ ಬೀಳುತ್ತದೆ. ಆಗ ನೀಲಾ ದೇವಿ ತನ್ನ ಕೂದಲನ್ನು ಕತ್ತರಿಸಿ, ಬಾಲಾಜಿ ತಲೆಗೆ ಅಂಟಿಸುತ್ತಾಳೆ, ಇದರಿಂದ ಬಾಲಾಜಿ ಗಾಯ ವಾಸಿಯಾಗುವುದು. ಕೂದಲು ಸೌಂದರ್ಯದ ಪ್ರತೀಕ. ತನ್ನ ಸೌಂದರ್ಯ ಲೆಕ್ಕಿಸದೆ ನೀಲಾ ದೇವಿ ತನ್ನ ಕೂದಲನ್ನು ಬಾಲಾಜಿಗೆ ಅರ್ಪಿಸುತ್ತಾಳೆ. ಆದ್ದರಿಂದ ಯಾರು ವೆಂಕಟೇಶ್ವರನಿಗೆ ಕೂದಲು ಅರ್ಪಿಸುತ್ತಾರೋ ಅವರ ಬಯಕೆ ಈಡೇರುವುದು ಎಂಬ ನಂಬಿಕೆ ಇದೆ.
ಇಲ್ಲಿ ದಾನ ಮಾಡಿದ ಕೂದಲು ಏನಾಗುತ್ತದೆ?
ತಿರುಪತಿಯಲ್ಲಿ ದಾನ ಮಾಡಲಾಗುವ ಕೂದಲನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಮಾರಲಾಗುವುದು. ಯುರೋಪ್, ಅಮೆರಿಕ, ಚೀನಾ, ಆಫ್ರಿಕಾ ದೇಶಗಳಲ್ಲಿ ಕೂದಲಿಗೆ ತುಂಬಾ ಡಿಮ್ಯಾಂಡ್ ಇದೆ.
ಒಂದು ದಿನದಲ್ಲಿ ಸುಮಾರು 20, 000ಕ್ಕೂ ಅಧಿಕ ಭಕ್ತರು ಇಲ್ಲಿ ಕೂದಲನ್ನು ದಾನ ಮಾಡುತ್ತಾರೆ.



Click it and Unblock the Notifications