Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
ತಿರುಪತಿಯಲ್ಲಿ ಮುಡಿ ದಾನ ಮಾಡುವುದರ ಹಿಂದಿರುವ ಮಹತ್ವವೇನು ಗೊತ್ತೇ?
ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದು ತಿರುಪತಿ. ತಿರುಪತಿ ಬಾಲಾಜಿಯ ದರ್ಶನ ಪಡೆಯಲು ಪ್ರತಿನಿತ್ಯ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಈ ಯಾರು ಈ ಪವಿತ್ರ ಕ್ಷೇತ್ರಕ್ಕೆ ಬಂದು ಬಾಲಾಜಿ ದೇವರ ದರ್ಶನ ಪಡೆಯುತ್ತಾರೋ ಅವರಿಗೆ ಎಲ್ಲಾ ಪಾಪಗಳಿಂದ ಮೋಕ್ಷ ಸಿಗುವುದು ಎಂಬ ನಂಬಿಕೆ.

ತಿರುಪತಿ ದೇವಾಲಯಕ್ಕೆ ಬಂದ ಭಕ್ತರು ಇಲ್ಲಿ ಮುಡಿಯನ್ನು ಹರಿಕೆ ರೂಪದಲ್ಲಿ ಸಲ್ಲಿಸುತ್ತಾರೆ. ತಮ್ಮ ಯಾವುದೋ ಒಂದು ಕಾರ್ಯಸಿದ್ಧಿಗಾಗಿ ಭಗವಂತ ತಿರುಪತಿ ಬಾಲಾಜಿಯಲ್ಲಿ ಪ್ರಾರ್ಥನೆ ಮಾಡಿರುತ್ತಾರೆ. ಆ ಕಾರ್ಯ ನೆರವೇರಿದಾಗ ಆ ಬಾಲಾಜಿಗೆ ತಮ್ಮ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೆ. ಏಕೆ ಬಾಲಾಜಿಗೆ ಮುಡಿಯನ್ನು ಅರ್ಪಿಸುತ್ತಾರೆ, ಇದರ ಹಿಂದಿರುವ ಪೌರಾಣಿಕ ಕತೆಯ ಹಿನ್ನೆಲೆಯೇನು ಎಂದು ನೋಡೋಣ ಬನ್ನಿ:
ನಂಬಿಕೆ
ವೆಂಕಟೇಶ್ವರ ಕುಬೇರನಿಂದ ಪಡೆದ ಸಂಪತ್ತನ್ನು ಕೂದಲಿನ ರೂಪದಲ್ಲಿ ಮರಳಿಸುತ್ತಾನೆ ಎಂಬುವುದಾಗಿ ಪೌರಾಣಿಕ ಕತೆಯಿದೆ. ಭಕ್ತರು ವೆಂಕಟೇಶ್ವರನಿಗೆ ಮುಡಿಯನ್ನು ಹರಿಕೆ ರೂಪದಲ್ಲಿ ಅರ್ಪಿಸಿದರೆ ತಿರುಪತಿ ಅವರಿಗೆ 10 ಪಟ್ಟು ಅಧಿಕ ಸಂಪತ್ತು ಮರಳಿಸುತ್ತಾನೆ ಎಂಬ ನಂಬಿಕೆಯಿದೆ. ಯಾರು ವೆಂಕಟೇಶ್ವರನಿಗೆ ಕೂದಲನ್ನು ಹರಿಕೆ ರೂಪದಲ್ಲಿ ಅರ್ಪಿಸುತ್ತಾರೋ ಅವರಿಗೆ ಲಕ್ಷ್ಮಿ ಕೃಪೆ ಇರಲಿದೆ. ಇಲ್ಲಿ ಪುರುಷರು ಹಾಗೂ ಮಹಿಳೆಯರು ವೆಂಟೇಶ್ವರನಿಗೆ ಕೂದಲನ್ನು ಅರ್ಪಿಸುತ್ತಾರೆ.
ಪೌರಾಣಿಕ ಕತೆ
ಪೌರಾಣಿಕ ಕತೆಯ ಪ್ರಕಾರ ಬೆಟ್ಟದಲ್ಲಿ ಇರುವೆಗಳ ಗುಂಪುವೊಂದು ವೆಂಕಟೇಶ್ವರ ಪ್ರಾರ್ಥಿಸುತ್ತವೆ,ಹಸುವೊಂದು ಬೆಟ್ಟಕ್ಕೆ ಹೋಗಿ ಆ ಇರುವೆಗಳಿಗೆ ಹಾಲು ನೀಡುತ್ತದೆ. ಇದನ್ನು ನೋಡಿದ ಹಸುವಿನ ಮಾಲಿಕ ಕೋಪದಿಂದ ಕೊಡಲಿಯಿಂದ ಹಸುವಿನ ತಲೆಗೆ ಪೆಟ್ಟು ನೀಡುತ್ತಾನೆ. ಇದರಿಂದ ಬಾಲಾಜಿ ತಲೆಗೆ ಪೆಟ್ಟಾಗಿ ಕೂದಲು ಕೆಳಗೆ ಬೀಳುತ್ತದೆ. ಆಗ ನೀಲಾ ದೇವಿ ತನ್ನ ಕೂದಲನ್ನು ಕತ್ತರಿಸಿ, ಬಾಲಾಜಿ ತಲೆಗೆ ಅಂಟಿಸುತ್ತಾಳೆ, ಇದರಿಂದ ಬಾಲಾಜಿ ಗಾಯ ವಾಸಿಯಾಗುವುದು. ಕೂದಲು ಸೌಂದರ್ಯದ ಪ್ರತೀಕ. ತನ್ನ ಸೌಂದರ್ಯ ಲೆಕ್ಕಿಸದೆ ನೀಲಾ ದೇವಿ ತನ್ನ ಕೂದಲನ್ನು ಬಾಲಾಜಿಗೆ ಅರ್ಪಿಸುತ್ತಾಳೆ. ಆದ್ದರಿಂದ ಯಾರು ವೆಂಕಟೇಶ್ವರನಿಗೆ ಕೂದಲು ಅರ್ಪಿಸುತ್ತಾರೋ ಅವರ ಬಯಕೆ ಈಡೇರುವುದು ಎಂಬ ನಂಬಿಕೆ ಇದೆ.
ಇಲ್ಲಿ ದಾನ ಮಾಡಿದ ಕೂದಲು ಏನಾಗುತ್ತದೆ?
ತಿರುಪತಿಯಲ್ಲಿ ದಾನ ಮಾಡಲಾಗುವ ಕೂದಲನ್ನು ಅಂತರರಾಷ್ಟ್ರೀಯ ಮಾರುಕಟ್ಟೆಗೆ ಮಾರಲಾಗುವುದು. ಯುರೋಪ್, ಅಮೆರಿಕ, ಚೀನಾ, ಆಫ್ರಿಕಾ ದೇಶಗಳಲ್ಲಿ ಕೂದಲಿಗೆ ತುಂಬಾ ಡಿಮ್ಯಾಂಡ್ ಇದೆ.
ಒಂದು ದಿನದಲ್ಲಿ ಸುಮಾರು 20, 000ಕ್ಕೂ ಅಧಿಕ ಭಕ್ತರು ಇಲ್ಲಿ ಕೂದಲನ್ನು ದಾನ ಮಾಡುತ್ತಾರೆ.



Click it and Unblock the Notifications