Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಆಗಸ್ಟ್ 4ಕ್ಕೆ ಸಂಕಷ್ಠಿ: ಬದುಕಿನ ಎಲ್ಲಾ ವಿಘ್ನ ನಿವಾರಣೆಗೆ ಈ ಪರಿಹಾರ ಮಾಡಿ
ಯಾವುದೇ ಪೂಜೆ ಇರಲಿ ಮೊದಲಿಗೆ ವಿಘ್ನ ನಿವಾರಕ ಗಣೇಶನ ಊಜೆ ಮಾಡಿದ ಬಳಿಕವಷ್ಟೇ ಪೂಜೆ ಮಾಡಲಾಗುವುದು, ಅದರಲ್ಲೂ ಸಂಕಷ್ಠಿಯಂದು ಶ್ರೀ ಗಣೇಶನ ಆರಾಧಿಸುವುದರಿಂದ ಗಣೇಶನ ಕೃಪೆಗೆ ಬೇಗನೆ ಪಾತ್ರರಾಗುತ್ತೇವೆ, ನಮ್ಮೆಲ್ಲಾ ಸಮಸ್ಯೆಗಳಿಗೂ ಆ ಗಣೇಶ ಪರಿಹಾರ ನೀಡೇ ನೀಡುತ್ತಾನೆ ಎಂಬುವುದು ಶ್ರೀ ಗಣಪನ ನಂಬಿದ ಭಕ್ತರ ಅಚಲ ನಂಬಿಕೆ. ಆಗಸ್ಟ್ 4ರಂದು ಸಂಕಷ್ಠಿ, ಈ ದಿನ ನಿಮ್ಮ ಸಮಸ್ಯೆಗಳಿಗೆ ಈ ಪರಿಹಾರ ಮಾಡಿದರೆ ಒಳ್ಳೆಯದಾಗುವುದು...
ಸಂಕಷ್ಠಿಯಂದು ಉಪವಾಸವಿದ್ದು ಶ್ರೀಗಣೇಶನ ಆರಾಧನೆ ಮಾಡಿದರೆ ತುಂಬಾ ಒಳ್ಳೆಯದು. ಈ ದಿನ ನೀವು ಗಣೇಶನನ್ನು ಭಕ್ತಿಯಿಂದ ಪೂಜಿಸಿ 'ಓಂ ಗಣಪತೆಯೇ ಮಂತ್ರವನ್ನು' 108 ಬಾರಿ ಪಠಿಸಿ.

ವೃತ್ತಿ ಜೀವನದಲ್ಲಿ ಯಶಸ್ಸಿಗೆ
ವಿಭುವನ ಸಂಕಷ್ಟ ಚತುರ್ಥಿಯ ದಿನ ಗಣಪತಿಗೆ ಹೂವು, ಬೆಲ್ಲ, ಮೋದಕ , ಗರಿಕೆ ಇವುಗಳನ್ನು ಅರ್ಪಿಸಿ , ಓಂ ಗಣ ಗಣಪತಯೇ ನಮಃ ಎಂದು ಜಪಿಸಿ. ಇದರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿರುವ ಎಲ್ಲಾ ಅಡೆತಡೆಗಳು ದೂರಾಗಿ ಪ್ರಗತಿ ಕಾಣುವಿರಿ.
ಸಂಪತ್ತು ಮತ್ತು ಸಂತೋಷಕ್ಕಾಗಿ
ವಿಭುವನ ಸಂಕಷ್ಟ ಚತುರ್ಥಿಯಂದು ಪೂಜೆ ಮಾಡಿ ಗಣೇಶ ಸ್ತೋತ್ರ ಪಠಿಸಿದರೆ ಒಳ್ಳೆಯದು. ನೀವು ಗಣೇಶ ಸ್ತೋತ್ರವನ್ನು 11 ಬಾರಿ ಪಠಿಸಿ.
ವಾಸ್ತುದೋಷ ಪರಿಹಾರಕ್ಕೆ
ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ನೀವು ಕುಳಿತಿರುವ ಗಣೇಶನ ಮೂರ್ತಿಯನ್ನು ಮನೆಯಲ್ಲಿರಿಸಿ, ಆದರೆ ಗಣೇಶ ಬೆನ್ನು ಯಾರಿಗೆ ಕಾಣುವಂತೆ ಇರಬಾರದು. ಕೂತಿರುವ ಗಣೇಶನ ಮೂರ್ತಿಯ ಮನೆಯಲ್ಲಿದ್ದರೆ ವಾಸ್ತುದೋಷ ನಿವಾರಣೆಗೆ ಉತ್ತಮ ಪರಿಹಾರ ಎಂದು ಹೇಳಲಾಗುವುದು.
ಮದುವೆಯಾಗಲು ಅಡೆತಡೆಯಿದ್ದರೆ
ಮದುವೆಯಾಗಲು ಅಡೆತಡೆ ಇದ್ದರೆ ಈ ಸಂಕಷ್ಠಿಯಂದು ನೀವು 21 ಲಡ್ಡುಗಳನ್ನು ಅರ್ಪಿಸಿ ಪೂಜಿಸಿ.
ವ್ಯಾಪಾರದಲ್ಲಿ ಪ್ರಗತಿಗಾಗಿ
ವಿಭುವನ ಸಂಕಷ್ಠಿ ಚತುರ್ಥಿಯಂದು ಗಣೇಶನ ವಿಗ್ರಹವನ್ನು ಮನೆಗೆ ತಂದು ಆರಾಧಿಸಿ. ಅರಿಶಿಣದಿಂದ 5 ಲಡ್ಡು ಮಾಡಿ ಲಂಬೋದರನಿಗೆ ಅರ್ಪಿಸಿ.
ಮನೆಯಲ್ಲಿ ಹಣದ ಸಮಸ್ಯೆ ಹೋಗಲಾಡಿಸಲು
ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದರೆ ಈ ದಿನದಂದು ಮನೆಗೆ ಗಣೇಶ ಯಂತ್ರವನ್ನು ತಂದು ಸ್ಥಾಪಿಸಿ. ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು.
ಈ ಮಂತ್ರಗಳನ್ನು ಪಠಿಸಿ
ಓಂ ಶ್ರೀ ಗಣೇಶಾಯ ನಮಃ
ಓಂ ಏಕದಂತಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಬಾಲಚಂದ್ರಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿನಾಯಕಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ



Click it and Unblock the Notifications