Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಆಗಸ್ಟ್ 4ಕ್ಕೆ ಸಂಕಷ್ಠಿ: ಬದುಕಿನ ಎಲ್ಲಾ ವಿಘ್ನ ನಿವಾರಣೆಗೆ ಈ ಪರಿಹಾರ ಮಾಡಿ
ಯಾವುದೇ ಪೂಜೆ ಇರಲಿ ಮೊದಲಿಗೆ ವಿಘ್ನ ನಿವಾರಕ ಗಣೇಶನ ಊಜೆ ಮಾಡಿದ ಬಳಿಕವಷ್ಟೇ ಪೂಜೆ ಮಾಡಲಾಗುವುದು, ಅದರಲ್ಲೂ ಸಂಕಷ್ಠಿಯಂದು ಶ್ರೀ ಗಣೇಶನ ಆರಾಧಿಸುವುದರಿಂದ ಗಣೇಶನ ಕೃಪೆಗೆ ಬೇಗನೆ ಪಾತ್ರರಾಗುತ್ತೇವೆ, ನಮ್ಮೆಲ್ಲಾ ಸಮಸ್ಯೆಗಳಿಗೂ ಆ ಗಣೇಶ ಪರಿಹಾರ ನೀಡೇ ನೀಡುತ್ತಾನೆ ಎಂಬುವುದು ಶ್ರೀ ಗಣಪನ ನಂಬಿದ ಭಕ್ತರ ಅಚಲ ನಂಬಿಕೆ. ಆಗಸ್ಟ್ 4ರಂದು ಸಂಕಷ್ಠಿ, ಈ ದಿನ ನಿಮ್ಮ ಸಮಸ್ಯೆಗಳಿಗೆ ಈ ಪರಿಹಾರ ಮಾಡಿದರೆ ಒಳ್ಳೆಯದಾಗುವುದು...
ಸಂಕಷ್ಠಿಯಂದು ಉಪವಾಸವಿದ್ದು ಶ್ರೀಗಣೇಶನ ಆರಾಧನೆ ಮಾಡಿದರೆ ತುಂಬಾ ಒಳ್ಳೆಯದು. ಈ ದಿನ ನೀವು ಗಣೇಶನನ್ನು ಭಕ್ತಿಯಿಂದ ಪೂಜಿಸಿ 'ಓಂ ಗಣಪತೆಯೇ ಮಂತ್ರವನ್ನು' 108 ಬಾರಿ ಪಠಿಸಿ.

ವೃತ್ತಿ ಜೀವನದಲ್ಲಿ ಯಶಸ್ಸಿಗೆ
ವಿಭುವನ ಸಂಕಷ್ಟ ಚತುರ್ಥಿಯ ದಿನ ಗಣಪತಿಗೆ ಹೂವು, ಬೆಲ್ಲ, ಮೋದಕ , ಗರಿಕೆ ಇವುಗಳನ್ನು ಅರ್ಪಿಸಿ , ಓಂ ಗಣ ಗಣಪತಯೇ ನಮಃ ಎಂದು ಜಪಿಸಿ. ಇದರಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿರುವ ಎಲ್ಲಾ ಅಡೆತಡೆಗಳು ದೂರಾಗಿ ಪ್ರಗತಿ ಕಾಣುವಿರಿ.
ಸಂಪತ್ತು ಮತ್ತು ಸಂತೋಷಕ್ಕಾಗಿ
ವಿಭುವನ ಸಂಕಷ್ಟ ಚತುರ್ಥಿಯಂದು ಪೂಜೆ ಮಾಡಿ ಗಣೇಶ ಸ್ತೋತ್ರ ಪಠಿಸಿದರೆ ಒಳ್ಳೆಯದು. ನೀವು ಗಣೇಶ ಸ್ತೋತ್ರವನ್ನು 11 ಬಾರಿ ಪಠಿಸಿ.
ವಾಸ್ತುದೋಷ ಪರಿಹಾರಕ್ಕೆ
ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ನೀವು ಕುಳಿತಿರುವ ಗಣೇಶನ ಮೂರ್ತಿಯನ್ನು ಮನೆಯಲ್ಲಿರಿಸಿ, ಆದರೆ ಗಣೇಶ ಬೆನ್ನು ಯಾರಿಗೆ ಕಾಣುವಂತೆ ಇರಬಾರದು. ಕೂತಿರುವ ಗಣೇಶನ ಮೂರ್ತಿಯ ಮನೆಯಲ್ಲಿದ್ದರೆ ವಾಸ್ತುದೋಷ ನಿವಾರಣೆಗೆ ಉತ್ತಮ ಪರಿಹಾರ ಎಂದು ಹೇಳಲಾಗುವುದು.
ಮದುವೆಯಾಗಲು ಅಡೆತಡೆಯಿದ್ದರೆ
ಮದುವೆಯಾಗಲು ಅಡೆತಡೆ ಇದ್ದರೆ ಈ ಸಂಕಷ್ಠಿಯಂದು ನೀವು 21 ಲಡ್ಡುಗಳನ್ನು ಅರ್ಪಿಸಿ ಪೂಜಿಸಿ.
ವ್ಯಾಪಾರದಲ್ಲಿ ಪ್ರಗತಿಗಾಗಿ
ವಿಭುವನ ಸಂಕಷ್ಠಿ ಚತುರ್ಥಿಯಂದು ಗಣೇಶನ ವಿಗ್ರಹವನ್ನು ಮನೆಗೆ ತಂದು ಆರಾಧಿಸಿ. ಅರಿಶಿಣದಿಂದ 5 ಲಡ್ಡು ಮಾಡಿ ಲಂಬೋದರನಿಗೆ ಅರ್ಪಿಸಿ.
ಮನೆಯಲ್ಲಿ ಹಣದ ಸಮಸ್ಯೆ ಹೋಗಲಾಡಿಸಲು
ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದರೆ ಈ ದಿನದಂದು ಮನೆಗೆ ಗಣೇಶ ಯಂತ್ರವನ್ನು ತಂದು ಸ್ಥಾಪಿಸಿ. ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವುದು.
ಈ ಮಂತ್ರಗಳನ್ನು ಪಠಿಸಿ
ಓಂ ಶ್ರೀ ಗಣೇಶಾಯ ನಮಃ
ಓಂ ಏಕದಂತಾಯ ನಮಃ
ಓಂ ಸುಮುಖಾಯ ನಮಃ
ಓಂ ಕ್ಷಿಪ್ರ ಪ್ರಸಾದಾಯ ನಮಃ
ಓಂ ಬಾಲಚಂದ್ರಾಯ ನಮಃ
ಓಂ ಗಣಾಧ್ಯಕ್ಷಾಯ ನಮಃ
ಓಂ ವಿನಾಯಕಾಯ ನಮಃ
ಓಂ ವಿಘ್ನನಾಶಾಯ ನಮಃ
ಓಂ ಲಂಬೋಧರಾಯ ನಮಃ
ಓಂ ಗಜಕರ್ಣಿಕಾಯ ನಮಃ
ಓಂ ಕಪಿಲಾಯ ನಮಃ
ಓಂ ವಿಕ್ತ್ರಾಯ ನಮಃ



Click it and Unblock the Notifications