Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಬೆಸ ಸಂಖ್ಯೆಯಲ್ಲಿ ಅರ್ಪಿಸುವುದೇಕೆ?
ಗಣೇಶನ ಪೂಜೆಗೆ ನೀವು ಏನೇ ಅರ್ಪಿಸಿ, ಆದರೆ ಗರಿಕೆ ಅರ್ಪಿಸಲಿಲ್ಲ ಎಂದರೆ ಗಣೇಶನ ಪೂಜೆ ಕಂಪ್ಲೀಟ್ ಆಗುವುದಿಲ್ಲ ಎಂದು ಹೇಳಲಾಗುವುದು. ಗಣೇಶನ ಆರಾಧನೆಯಲ್ಲಿ ಗರಿಕೆಗೆ ಏಕಿಷ್ಟು ಮಹತ್ವ? ಎಂದು ನೋಡೋಣ ಬನ್ನಿ:
ಪುರಾಣದ ಪ್ರಕಾರ ಗಣೇಶನಿಗೆ ಗರಿಕೆ ಏಕೆ ಪ್ರಿಯ?
ದೇವಲೋಕದ ಹಾಡುಗಾರ್ತಿ ಶ್ರೀ ಗಣಪತಿಯನ್ನು ಮದುವೆಯಾಗಲು ಬಯಸುತ್ತಾಳೆ, ಆದರೆ ಗಣಪತಿ ಅದನ್ನು ತಿರಸ್ಕರಿಸುತ್ತಾನೆ. ಇದರಿಂದ ಕೋಪಗೊಂಡ ಅವಳು ಗಣೇಶನಿಗೆ ಶಾಪ ನೀಡುತ್ತಾಳೆ. ಇದರಿಂದ ಗಣೇಶನ ಮೈಯೆಲ್ಲಾ ಉರಿ-ಉರಿಯಾಗುತ್ತದೆ. ಈ ಉರಿಯನ್ನು ಸಹಿಸಲಾಗದೆ ಒದ್ದಾಡುತ್ತಿರುವಾಗ ಗರಿಕೆಯನ್ನು ಗಣಪತಿಯ ತಲೆಗೆ ಮೇಲೆ ಇಟ್ಟಾಗ ಉರಿಯೆಲ್ಲಾ ಕಡಿಮೆಯಾಗುವುದು. ಅಂದಿನಿಂದ ಗಣಪತಿಗೆ ಗರಿಕೆಯೆಂದರೆ ತುಂಬಾನೇ ಇಷ್ಟ.

ಆಯುರ್ವೇದಲ್ಲಿ ಗರಿಕೆಯ ಮಹತ್ವದ ಕುರಿತು ಈ ರೀತಿ ಹೇಳಲಾಗಿದೆ
ದೇಹ ಉರಿ-ಉರಿಯಾಗುತ್ತಿದ್ದರೆ ಗರಿಕೆಯ ಜ್ಯೂಸ್ ಕುಡಿದರೆ ಕಡಿಮೆಯಾಗುವುದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಧಾರ್ಮಿಕ ಕಾರಣ
ಗರಿಕೆಯನ್ನು ಗಣಪನ ಮೂರ್ತಿ ಬಳಿ ಇಟ್ಟಾಗ ಆ ಮೂರ್ತಿಯ ದೈವ ಚೈತನ್ಯ ಹೆಚ್ಚಾಗುವುದು ಎಂದು ಹೇಳಲಾಗುವುದು . ನಾವು ಆರಾಧಿಸುವ ದೇವರ ಮೂರ್ತಿಗೆ ದೇವತ್ವವು ಹೆಚ್ಚಾಗಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದ್ದರಿಂದ ದೇವರಿಗೆ ದೇವತೆಗಳ ತತ್ತ್ವವನ್ನು ಹೆಚ್ಚಿಸುವ ವಸ್ತುಗಳನ್ನು ಅರ್ಪಿಸಲಾಗುವುದು. ಗರಿಕೆಯಲ್ಲಿ ಗಣೇಶ ತತ್ತ್ವವನ್ನು ಹೆಚ್ಚಿಸುವ ಆಕರ್ಷಿಸುವ ಅಂಶವಿರುವುದರಿಂದ ಗರಿಕೆಯನ್ನು ಅರ್ಪಿಸಲಾಗುವುದು.
ಎಂಥ ಗರಿಕೆಯನ್ನು ಗಣಪತಿಗೆ ಅರ್ಪಿಸಬೇಕು?
ನೀವು ಗಣಪತಿಗೆ ಗರಿಗೆಯನ್ನು ಅರ್ಪಿಸುವಾಗ 3, 5 ಅಥವಾ 7, 21 ಗರಿಕೆಯನ್ನು ಅರ್ಪಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು. ನೀವು ಎಳೆ ಗರಿಕೆಯನ್ನು ಗಣಪನಿಗೆ ಅರ್ಪಿಸಬೇಕು, ಬಲಿತಿರುವ ಗರಿಕೆ ಹುಲ್ಲಿನಂತೆ ಇರುತ್ತದೆ, ಆದ್ದರಿಂದ ಗಿಡ್ಡವಾದ, ಎಳೆ ಗರಿಕೆಯನ್ನು ಬಳಸಲಾಗುವುದು. ಗರಿಕೆಯನ್ನು ಒಟ್ಟಿಗೆ ಕಟ್ಟಿ ದೇವರಿಗೆ ಅರ್ಪಿಸಲಾಗುವುದು. ದೂರ್ವೆಗಳನ್ನು ಒಟ್ಟಿಗೆ ಕಟ್ಟುವುದರಿಂದ ಗರಿಕೆಯ ಸುಗಂಧ ತುಂಬಾ ಸಮಯ ಉಳಿಯುತ್ತದೆ. ನೀವು ಗರಿಕೆ ತುಂಬಾ ಸಮಯ ತಾಜಾವಾಗಿರಲು ನೀರಿನಲ್ಲಿ ಅದ್ದಿ ಬಳಸಿದರೆ ಒಳ್ಳೆಯದು.
ಗಣಪತಿಗೆ ಗರಿಕೆಯನ್ನು ಹೇಗೆ ಅರ್ಪಿಸಬೇಕು?
ನೀವು ಗಣಪತಿಯ ಮುಖ ಬಿಟ್ಟು ಇಡೀ ಮೈಯನ್ನು ಗರಿಕೆಯಿಂದ ಅಲಂಕರಿಸಬಹುದು. ಗರಿಕೆಯ ಸುವಾಸನೆ ಮೂರ್ತಿಯ ಸುತ್ತಲೂ ಹರಡುವುದು. ನೀವು ಗಣಪತಿಗೆ ಗರಿಕೆಯನ್ನು ಅರ್ಪಿಸಿದರೆ ದಿನಾ ಬದಲಾಯಿಸುವ ಅಗ್ಯತವಿಲ್ಲ, 3 ದಿನಕ್ಕೊಮ್ಮೆ ಬದಲಾಯಿಸಿದರೆ ಸಾಕು.
ಗಣೇಶನಿಗೆ ಗರಿಕೆಯನ್ನು ಬೆಸ ಸಂಖ್ಯೆಯಲ್ಲಿ ಬಳಸಲು ಕಾರಣವೇನು?
ಬೆಸ ಸಂಖ್ಯೆಗಳಲ್ಲಿ ಶಕ್ತಿ ಹೆಚ್ಚು ಎಂದು ಹೇಳಲಾಗುವುದು. ಬೆಸ ಸಂಖ್ಯೆಯಲ್ಲಿ ಗರಿಕೆಯನ್ನು ಅರ್ಪಿಸುವುದರಿಂದ ಮೂರ್ತಿಯಲ್ಲಿ ಶಕ್ತಿ ಹೆಚ್ಚಾಗುವುದು. ಗಣಪನಿಗೆ ಹೆಚ್ಚಾಗಿ 21 ಗರಿಕೆಗಳನ್ನು ಅರ್ಪಿಸಲಾಗುವುದು. 21 ಅಂದರೆ ಸಂಖ್ಯಾಶಾಸ್ತ್ರ ಪ್ರಕಾರ ನೋಡುವುದಾದರೆ 2+1=3 ಸಂಖ್ಯೆ ಬರುತ್ತದೆ. ಗಣಪತಿಯು 3 ಸಂಖ್ಯೆ ಸಂಬಂಧಿಸಿದ್ದಾಗಿದೆ, ಆದ್ದರಿಂದ ಬೆಸ ಸಂಖ್ಯೆಯಲ್ಲಿ ಗಣಪನಿಗೆ ಗರಿಕೆಯನ್ನು ಅರ್ಪಿಸಲಾಗುವುದು.



Click it and Unblock the Notifications