Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಗಣೇಶನಿಗೆ ಎಷ್ಟು ಗರಿಕೆ ಅರ್ಪಿಸಬೇಕು? ಬೆಸ ಸಂಖ್ಯೆಯಲ್ಲಿ ಅರ್ಪಿಸುವುದೇಕೆ?
ಗಣೇಶನ ಪೂಜೆಗೆ ನೀವು ಏನೇ ಅರ್ಪಿಸಿ, ಆದರೆ ಗರಿಕೆ ಅರ್ಪಿಸಲಿಲ್ಲ ಎಂದರೆ ಗಣೇಶನ ಪೂಜೆ ಕಂಪ್ಲೀಟ್ ಆಗುವುದಿಲ್ಲ ಎಂದು ಹೇಳಲಾಗುವುದು. ಗಣೇಶನ ಆರಾಧನೆಯಲ್ಲಿ ಗರಿಕೆಗೆ ಏಕಿಷ್ಟು ಮಹತ್ವ? ಎಂದು ನೋಡೋಣ ಬನ್ನಿ:
ಪುರಾಣದ ಪ್ರಕಾರ ಗಣೇಶನಿಗೆ ಗರಿಕೆ ಏಕೆ ಪ್ರಿಯ?
ದೇವಲೋಕದ ಹಾಡುಗಾರ್ತಿ ಶ್ರೀ ಗಣಪತಿಯನ್ನು ಮದುವೆಯಾಗಲು ಬಯಸುತ್ತಾಳೆ, ಆದರೆ ಗಣಪತಿ ಅದನ್ನು ತಿರಸ್ಕರಿಸುತ್ತಾನೆ. ಇದರಿಂದ ಕೋಪಗೊಂಡ ಅವಳು ಗಣೇಶನಿಗೆ ಶಾಪ ನೀಡುತ್ತಾಳೆ. ಇದರಿಂದ ಗಣೇಶನ ಮೈಯೆಲ್ಲಾ ಉರಿ-ಉರಿಯಾಗುತ್ತದೆ. ಈ ಉರಿಯನ್ನು ಸಹಿಸಲಾಗದೆ ಒದ್ದಾಡುತ್ತಿರುವಾಗ ಗರಿಕೆಯನ್ನು ಗಣಪತಿಯ ತಲೆಗೆ ಮೇಲೆ ಇಟ್ಟಾಗ ಉರಿಯೆಲ್ಲಾ ಕಡಿಮೆಯಾಗುವುದು. ಅಂದಿನಿಂದ ಗಣಪತಿಗೆ ಗರಿಕೆಯೆಂದರೆ ತುಂಬಾನೇ ಇಷ್ಟ.

ಆಯುರ್ವೇದಲ್ಲಿ ಗರಿಕೆಯ ಮಹತ್ವದ ಕುರಿತು ಈ ರೀತಿ ಹೇಳಲಾಗಿದೆ
ದೇಹ ಉರಿ-ಉರಿಯಾಗುತ್ತಿದ್ದರೆ ಗರಿಕೆಯ ಜ್ಯೂಸ್ ಕುಡಿದರೆ ಕಡಿಮೆಯಾಗುವುದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಧಾರ್ಮಿಕ ಕಾರಣ
ಗರಿಕೆಯನ್ನು ಗಣಪನ ಮೂರ್ತಿ ಬಳಿ ಇಟ್ಟಾಗ ಆ ಮೂರ್ತಿಯ ದೈವ ಚೈತನ್ಯ ಹೆಚ್ಚಾಗುವುದು ಎಂದು ಹೇಳಲಾಗುವುದು . ನಾವು ಆರಾಧಿಸುವ ದೇವರ ಮೂರ್ತಿಗೆ ದೇವತ್ವವು ಹೆಚ್ಚಾಗಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದ್ದರಿಂದ ದೇವರಿಗೆ ದೇವತೆಗಳ ತತ್ತ್ವವನ್ನು ಹೆಚ್ಚಿಸುವ ವಸ್ತುಗಳನ್ನು ಅರ್ಪಿಸಲಾಗುವುದು. ಗರಿಕೆಯಲ್ಲಿ ಗಣೇಶ ತತ್ತ್ವವನ್ನು ಹೆಚ್ಚಿಸುವ ಆಕರ್ಷಿಸುವ ಅಂಶವಿರುವುದರಿಂದ ಗರಿಕೆಯನ್ನು ಅರ್ಪಿಸಲಾಗುವುದು.
ಎಂಥ ಗರಿಕೆಯನ್ನು ಗಣಪತಿಗೆ ಅರ್ಪಿಸಬೇಕು?
ನೀವು ಗಣಪತಿಗೆ ಗರಿಗೆಯನ್ನು ಅರ್ಪಿಸುವಾಗ 3, 5 ಅಥವಾ 7, 21 ಗರಿಕೆಯನ್ನು ಅರ್ಪಿಸಿದರೆ ಒಳ್ಳೆಯದು ಎಂದು ಹೇಳಲಾಗುವುದು. ನೀವು ಎಳೆ ಗರಿಕೆಯನ್ನು ಗಣಪನಿಗೆ ಅರ್ಪಿಸಬೇಕು, ಬಲಿತಿರುವ ಗರಿಕೆ ಹುಲ್ಲಿನಂತೆ ಇರುತ್ತದೆ, ಆದ್ದರಿಂದ ಗಿಡ್ಡವಾದ, ಎಳೆ ಗರಿಕೆಯನ್ನು ಬಳಸಲಾಗುವುದು. ಗರಿಕೆಯನ್ನು ಒಟ್ಟಿಗೆ ಕಟ್ಟಿ ದೇವರಿಗೆ ಅರ್ಪಿಸಲಾಗುವುದು. ದೂರ್ವೆಗಳನ್ನು ಒಟ್ಟಿಗೆ ಕಟ್ಟುವುದರಿಂದ ಗರಿಕೆಯ ಸುಗಂಧ ತುಂಬಾ ಸಮಯ ಉಳಿಯುತ್ತದೆ. ನೀವು ಗರಿಕೆ ತುಂಬಾ ಸಮಯ ತಾಜಾವಾಗಿರಲು ನೀರಿನಲ್ಲಿ ಅದ್ದಿ ಬಳಸಿದರೆ ಒಳ್ಳೆಯದು.
ಗಣಪತಿಗೆ ಗರಿಕೆಯನ್ನು ಹೇಗೆ ಅರ್ಪಿಸಬೇಕು?
ನೀವು ಗಣಪತಿಯ ಮುಖ ಬಿಟ್ಟು ಇಡೀ ಮೈಯನ್ನು ಗರಿಕೆಯಿಂದ ಅಲಂಕರಿಸಬಹುದು. ಗರಿಕೆಯ ಸುವಾಸನೆ ಮೂರ್ತಿಯ ಸುತ್ತಲೂ ಹರಡುವುದು. ನೀವು ಗಣಪತಿಗೆ ಗರಿಕೆಯನ್ನು ಅರ್ಪಿಸಿದರೆ ದಿನಾ ಬದಲಾಯಿಸುವ ಅಗ್ಯತವಿಲ್ಲ, 3 ದಿನಕ್ಕೊಮ್ಮೆ ಬದಲಾಯಿಸಿದರೆ ಸಾಕು.
ಗಣೇಶನಿಗೆ ಗರಿಕೆಯನ್ನು ಬೆಸ ಸಂಖ್ಯೆಯಲ್ಲಿ ಬಳಸಲು ಕಾರಣವೇನು?
ಬೆಸ ಸಂಖ್ಯೆಗಳಲ್ಲಿ ಶಕ್ತಿ ಹೆಚ್ಚು ಎಂದು ಹೇಳಲಾಗುವುದು. ಬೆಸ ಸಂಖ್ಯೆಯಲ್ಲಿ ಗರಿಕೆಯನ್ನು ಅರ್ಪಿಸುವುದರಿಂದ ಮೂರ್ತಿಯಲ್ಲಿ ಶಕ್ತಿ ಹೆಚ್ಚಾಗುವುದು. ಗಣಪನಿಗೆ ಹೆಚ್ಚಾಗಿ 21 ಗರಿಕೆಗಳನ್ನು ಅರ್ಪಿಸಲಾಗುವುದು. 21 ಅಂದರೆ ಸಂಖ್ಯಾಶಾಸ್ತ್ರ ಪ್ರಕಾರ ನೋಡುವುದಾದರೆ 2+1=3 ಸಂಖ್ಯೆ ಬರುತ್ತದೆ. ಗಣಪತಿಯು 3 ಸಂಖ್ಯೆ ಸಂಬಂಧಿಸಿದ್ದಾಗಿದೆ, ಆದ್ದರಿಂದ ಬೆಸ ಸಂಖ್ಯೆಯಲ್ಲಿ ಗಣಪನಿಗೆ ಗರಿಕೆಯನ್ನು ಅರ್ಪಿಸಲಾಗುವುದು.



Click it and Unblock the Notifications