Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಅನಂತ ಚತುರ್ದಶಿಯಂದೇ ಗಣೇಶನ ವಿಸರ್ಜನೆ ಮಾಡುವುದೇಕೆ?
ಗಣೇಶ ಚತುರ್ಥಿಯೆಂದರೆ ತುಂಬಾ ದಿನಗಳ ಸಡಗರ-ಸಂಭ್ರಮ. ಕೆಲವು ಕಡೆ 3 ಅಥವಾ 7 ದಿನಗಳಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು, ಆದರೆ ಹೆಚ್ಚಿನ ಕಡೆ ಅನಂತ ಚತುರ್ದಶಿಯಂದು ಗಣೇಶನ ವಿಸರ್ಜನೆ ಮಾಡಲಾಗುವುದು. ಅನಂತ ಚತುರ್ದಶಿಯಂದೇ ಗಣೇಶನ ವಿಸರ್ಜನೆ ಏಕೆ ಮಾಡಲಾಗುವುದು ಎಂದು ನೋಡೋಣ ಬನ್ನಿ:

ಈ ವರ್ಷ ಸೆಪ್ಟೆಂಬರ್ 28ಕ್ಕೆ ಅನಂತ ಚತುರ್ದಶಿ, ಇದೇ ದಿನ ಗಣೇಶನನ್ನು ವಿಸರ್ಜನೆ ಮಾಡಲಾಗುವುದು. ಗಣೇಶ ವಿಸರ್ಜನೆ ಅನಂತ ಚತುರ್ದಶಿಯಂದು ಬರುತ್ತದೆ, ಭಾದ್ರಪದ ಮಾಸದ ಶುಕ್ಲ ಪಕ್ಷದ 14ನೇ ದಿನ ಚತುರ್ದಶಿ ತಿಥಿ ಬರುತ್ತದೆ, ಇದೇ ದಿನ ಅನಂತ ಚತುರ್ದಶಿ ಆಚರಿಸಲಾಗುವುದು. ಈ ದಿನ ಗಣೇಶೋತ್ಸವ ಮುಕ್ತಾಯವಾಗುವುದು.
ಅನಂತ ಚತುರ್ದಶಿ ತುಂಬಾ ಶುಭ ದಿನ
ಅನಂತ ಚತುರ್ದಶಿಯನ್ನು ತುಂಬಾ ಶುಭ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಗಣೇಶನ ವಿಸರ್ಜನೆ ಮಾಡಲಾಗುವುದು, ಏಕೆಂದರೆ ಈ ದಿನ ತುಂಬಾ ಶುಭವಾಗಿರುವುದರಿಂದ ಯಾವುದೇ ವಿಶೇಷ ಪೂಜೆಯ ಅವಶ್ಯಕತೆ ಇರುವುದಿಲ್ಲ, ಆದ್ದರಿಂದ ಗಣೇಶನ ವಿಸರ್ಜನೆಗೆ ಈ ದಿನ ತುಂಬಾ ಶ್ರೇಷ್ಠವಾಗಿದೆ.
ಗಣೇಶ ವಿಸರ್ಜನೆಯ ಸಂಪ್ರದಾಯ
ಗಣೇಶ ವಿಸರ್ಜನೆ ಮಾಡಿದಾಗ ಗಣೇಶೋತ್ಸವ ಮುಕ್ತಾಯವಾಗುವುದು. ಈ ದಿನ ಗಣೇಶನನ್ನು ನೀರಿನಲ್ಲಿ ಮುಳುಗಿಸಿ ವಿಸರ್ಜನೆ ಮಾಡಲಾಗುವುದು. ಗಣೇಶನನ್ನು ವಿಸರ್ಜನೆ ಮಾಡುವಾಗ ತುಂಬಾ ಸಡಗರ -ಸಂಭ್ರಮದಿಂದ ಬಿಡಲಾಗುವುದು. ಗಣೇಶನನ್ನು ನೀರಿನಲ್ಲಿ ಮುಳುಗಿಸಿದಾಗ ಸ್ವರ್ಗ ಲೋಕಕ್ಕೆ ಗಣೇಶ ಪ್ರಯಾಣ ಶುರು ಮಾಡುತ್ತಾನೆ ಎಂದು ಹೇಳಲಾಗುವುದು. 10 ದಿನ ಆರಾಧಿಸಿದ ಗಣೇಶನನ್ನು ನೀರಿನಲ್ಲಿ ಮುಳುಗಿಸುವಾಗ ಬೇಸರವಾದರೂ ಗಣೇಶನ ಕೃಪೆ ಸದಾ ನಮ್ಮ ಮೇಲಿರುತ್ತದೆ ಎಂಬ ನಂಬಿಕೆಯಿಂದ ಗಣೇಶನನ್ನು ಕಳುಹಿಸಿ ಕೊಡಲಾಗುವುದು.
ಗಣೇಶ ವಿಸರ್ಜನೆಯ ಮಹತ್ವ
ಗಣೇಶ ಚತುರ್ಥಿ ಆಚರಣೆ ಮನುಷ್ಯನ ಬದುಕಿನ ಅರ್ಥವನ್ನು ತಿಳಿಸುತ್ತದೆ. ಗಣೇಶ ಪ್ರತಿಷ್ಠಾಪನೆ ಹುಟ್ಟು, ಪೂಜೆ ಜೀವನ, ವಿಸರ್ಜನೆ ಸಾವನ್ನು ಸೂಚಿಸುತ್ತದೆ.
ಅನಂತ ಚತುರ್ದಶಿ
ಅನಂತ ಚತುರ್ದಶಿಯಂದು ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು. ಈ ದಿನ ಶ್ರೀ ವಿಷ್ಣುವಿನ ಪೂಜೆಗೆ ತುಂಬಾನೇ ಶುಭ ದಿನ ಎಂದು ಪರಿಗಣಿಸಲಾಗುವುದು. ಈ ದಿನ ಅನಂತ ಸೂತ್ರವನ್ನು ಕಟ್ಟುವುದಕ್ಕೆ ತುಂಬಾನೇ ಮಹತ್ವವಿದೆ. ಈ ಸೂತ್ರದಲ್ಲಿ ಸಾಕ್ಷಾತ್ ಶ್ರೀ ವಿಷ್ಣು ನೆಲೆಸಿರುತ್ತಾನೆ ಎಂದು ನಂಬಲಾಗಿದೆ. ಈ ಅನಂತ ಸೂತ್ರವನ್ನು ಶ್ರೀ ವಿಷ್ಣುವಿನ ಪೂಜೆ ಬಳಿಕವಷ್ಟೇ ಕಟ್ಟಬೇಕು. ಈ ಅನಂತ ಸೂತ್ರವನ್ನು ಪುರುಷರು ಬಲಗೈಗೆ, ಮಹಿಳೆಯರಿಗೆ ಎಡಗೈಗೆ ಕಟ್ಟಲಾಗುವುದು. ಯಾರು ಈ ವ್ರತವನ್ನು ಮಾಡುತ್ತಾರೋ ಅವರ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು.
ಗಣೇಶನ ಬೀಳ್ಕೊಟ್ಟು ಬರುವಾಗ ಮನಸ್ಸಿಗೆ ಬೇಸರವಾಗುವುದು ಆದರೆ ಮನೆಗೆ ಹಿಂತಿರುಗಿ ಬಂದಾಗ ಶ್ರೀ ವಿಷ್ಣುವಿನ ಆರಾಧನೆ ಮಾಡುವುದರಿಂದ ಮತ್ತೆ ಮನೆಯಲ್ಲಿ ಸಡಗರ -ಸಂಭ್ರಮ ತುಂಬುವುದು.



Click it and Unblock the Notifications