Latest Updates
-
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ
ಅನಂತ ಚತುರ್ದಶಿಯಂದೇ ಗಣೇಶನ ವಿಸರ್ಜನೆ ಮಾಡುವುದೇಕೆ?
ಗಣೇಶ ಚತುರ್ಥಿಯೆಂದರೆ ತುಂಬಾ ದಿನಗಳ ಸಡಗರ-ಸಂಭ್ರಮ. ಕೆಲವು ಕಡೆ 3 ಅಥವಾ 7 ದಿನಗಳಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು, ಆದರೆ ಹೆಚ್ಚಿನ ಕಡೆ ಅನಂತ ಚತುರ್ದಶಿಯಂದು ಗಣೇಶನ ವಿಸರ್ಜನೆ ಮಾಡಲಾಗುವುದು. ಅನಂತ ಚತುರ್ದಶಿಯಂದೇ ಗಣೇಶನ ವಿಸರ್ಜನೆ ಏಕೆ ಮಾಡಲಾಗುವುದು ಎಂದು ನೋಡೋಣ ಬನ್ನಿ:

ಈ ವರ್ಷ ಸೆಪ್ಟೆಂಬರ್ 28ಕ್ಕೆ ಅನಂತ ಚತುರ್ದಶಿ, ಇದೇ ದಿನ ಗಣೇಶನನ್ನು ವಿಸರ್ಜನೆ ಮಾಡಲಾಗುವುದು. ಗಣೇಶ ವಿಸರ್ಜನೆ ಅನಂತ ಚತುರ್ದಶಿಯಂದು ಬರುತ್ತದೆ, ಭಾದ್ರಪದ ಮಾಸದ ಶುಕ್ಲ ಪಕ್ಷದ 14ನೇ ದಿನ ಚತುರ್ದಶಿ ತಿಥಿ ಬರುತ್ತದೆ, ಇದೇ ದಿನ ಅನಂತ ಚತುರ್ದಶಿ ಆಚರಿಸಲಾಗುವುದು. ಈ ದಿನ ಗಣೇಶೋತ್ಸವ ಮುಕ್ತಾಯವಾಗುವುದು.
ಅನಂತ ಚತುರ್ದಶಿ ತುಂಬಾ ಶುಭ ದಿನ
ಅನಂತ ಚತುರ್ದಶಿಯನ್ನು ತುಂಬಾ ಶುಭ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಗಣೇಶನ ವಿಸರ್ಜನೆ ಮಾಡಲಾಗುವುದು, ಏಕೆಂದರೆ ಈ ದಿನ ತುಂಬಾ ಶುಭವಾಗಿರುವುದರಿಂದ ಯಾವುದೇ ವಿಶೇಷ ಪೂಜೆಯ ಅವಶ್ಯಕತೆ ಇರುವುದಿಲ್ಲ, ಆದ್ದರಿಂದ ಗಣೇಶನ ವಿಸರ್ಜನೆಗೆ ಈ ದಿನ ತುಂಬಾ ಶ್ರೇಷ್ಠವಾಗಿದೆ.
ಗಣೇಶ ವಿಸರ್ಜನೆಯ ಸಂಪ್ರದಾಯ
ಗಣೇಶ ವಿಸರ್ಜನೆ ಮಾಡಿದಾಗ ಗಣೇಶೋತ್ಸವ ಮುಕ್ತಾಯವಾಗುವುದು. ಈ ದಿನ ಗಣೇಶನನ್ನು ನೀರಿನಲ್ಲಿ ಮುಳುಗಿಸಿ ವಿಸರ್ಜನೆ ಮಾಡಲಾಗುವುದು. ಗಣೇಶನನ್ನು ವಿಸರ್ಜನೆ ಮಾಡುವಾಗ ತುಂಬಾ ಸಡಗರ -ಸಂಭ್ರಮದಿಂದ ಬಿಡಲಾಗುವುದು. ಗಣೇಶನನ್ನು ನೀರಿನಲ್ಲಿ ಮುಳುಗಿಸಿದಾಗ ಸ್ವರ್ಗ ಲೋಕಕ್ಕೆ ಗಣೇಶ ಪ್ರಯಾಣ ಶುರು ಮಾಡುತ್ತಾನೆ ಎಂದು ಹೇಳಲಾಗುವುದು. 10 ದಿನ ಆರಾಧಿಸಿದ ಗಣೇಶನನ್ನು ನೀರಿನಲ್ಲಿ ಮುಳುಗಿಸುವಾಗ ಬೇಸರವಾದರೂ ಗಣೇಶನ ಕೃಪೆ ಸದಾ ನಮ್ಮ ಮೇಲಿರುತ್ತದೆ ಎಂಬ ನಂಬಿಕೆಯಿಂದ ಗಣೇಶನನ್ನು ಕಳುಹಿಸಿ ಕೊಡಲಾಗುವುದು.
ಗಣೇಶ ವಿಸರ್ಜನೆಯ ಮಹತ್ವ
ಗಣೇಶ ಚತುರ್ಥಿ ಆಚರಣೆ ಮನುಷ್ಯನ ಬದುಕಿನ ಅರ್ಥವನ್ನು ತಿಳಿಸುತ್ತದೆ. ಗಣೇಶ ಪ್ರತಿಷ್ಠಾಪನೆ ಹುಟ್ಟು, ಪೂಜೆ ಜೀವನ, ವಿಸರ್ಜನೆ ಸಾವನ್ನು ಸೂಚಿಸುತ್ತದೆ.
ಅನಂತ ಚತುರ್ದಶಿ
ಅನಂತ ಚತುರ್ದಶಿಯಂದು ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು. ಈ ದಿನ ಶ್ರೀ ವಿಷ್ಣುವಿನ ಪೂಜೆಗೆ ತುಂಬಾನೇ ಶುಭ ದಿನ ಎಂದು ಪರಿಗಣಿಸಲಾಗುವುದು. ಈ ದಿನ ಅನಂತ ಸೂತ್ರವನ್ನು ಕಟ್ಟುವುದಕ್ಕೆ ತುಂಬಾನೇ ಮಹತ್ವವಿದೆ. ಈ ಸೂತ್ರದಲ್ಲಿ ಸಾಕ್ಷಾತ್ ಶ್ರೀ ವಿಷ್ಣು ನೆಲೆಸಿರುತ್ತಾನೆ ಎಂದು ನಂಬಲಾಗಿದೆ. ಈ ಅನಂತ ಸೂತ್ರವನ್ನು ಶ್ರೀ ವಿಷ್ಣುವಿನ ಪೂಜೆ ಬಳಿಕವಷ್ಟೇ ಕಟ್ಟಬೇಕು. ಈ ಅನಂತ ಸೂತ್ರವನ್ನು ಪುರುಷರು ಬಲಗೈಗೆ, ಮಹಿಳೆಯರಿಗೆ ಎಡಗೈಗೆ ಕಟ್ಟಲಾಗುವುದು. ಯಾರು ಈ ವ್ರತವನ್ನು ಮಾಡುತ್ತಾರೋ ಅವರ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು.
ಗಣೇಶನ ಬೀಳ್ಕೊಟ್ಟು ಬರುವಾಗ ಮನಸ್ಸಿಗೆ ಬೇಸರವಾಗುವುದು ಆದರೆ ಮನೆಗೆ ಹಿಂತಿರುಗಿ ಬಂದಾಗ ಶ್ರೀ ವಿಷ್ಣುವಿನ ಆರಾಧನೆ ಮಾಡುವುದರಿಂದ ಮತ್ತೆ ಮನೆಯಲ್ಲಿ ಸಡಗರ -ಸಂಭ್ರಮ ತುಂಬುವುದು.



Click it and Unblock the Notifications