Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಅನಂತ ಚತುರ್ದಶಿಯಂದೇ ಗಣೇಶನ ವಿಸರ್ಜನೆ ಮಾಡುವುದೇಕೆ?
ಗಣೇಶ ಚತುರ್ಥಿಯೆಂದರೆ ತುಂಬಾ ದಿನಗಳ ಸಡಗರ-ಸಂಭ್ರಮ. ಕೆಲವು ಕಡೆ 3 ಅಥವಾ 7 ದಿನಗಳಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು, ಆದರೆ ಹೆಚ್ಚಿನ ಕಡೆ ಅನಂತ ಚತುರ್ದಶಿಯಂದು ಗಣೇಶನ ವಿಸರ್ಜನೆ ಮಾಡಲಾಗುವುದು. ಅನಂತ ಚತುರ್ದಶಿಯಂದೇ ಗಣೇಶನ ವಿಸರ್ಜನೆ ಏಕೆ ಮಾಡಲಾಗುವುದು ಎಂದು ನೋಡೋಣ ಬನ್ನಿ:

ಈ ವರ್ಷ ಸೆಪ್ಟೆಂಬರ್ 28ಕ್ಕೆ ಅನಂತ ಚತುರ್ದಶಿ, ಇದೇ ದಿನ ಗಣೇಶನನ್ನು ವಿಸರ್ಜನೆ ಮಾಡಲಾಗುವುದು. ಗಣೇಶ ವಿಸರ್ಜನೆ ಅನಂತ ಚತುರ್ದಶಿಯಂದು ಬರುತ್ತದೆ, ಭಾದ್ರಪದ ಮಾಸದ ಶುಕ್ಲ ಪಕ್ಷದ 14ನೇ ದಿನ ಚತುರ್ದಶಿ ತಿಥಿ ಬರುತ್ತದೆ, ಇದೇ ದಿನ ಅನಂತ ಚತುರ್ದಶಿ ಆಚರಿಸಲಾಗುವುದು. ಈ ದಿನ ಗಣೇಶೋತ್ಸವ ಮುಕ್ತಾಯವಾಗುವುದು.
ಅನಂತ ಚತುರ್ದಶಿ ತುಂಬಾ ಶುಭ ದಿನ
ಅನಂತ ಚತುರ್ದಶಿಯನ್ನು ತುಂಬಾ ಶುಭ ದಿನವೆಂದು ಪರಿಗಣಿಸಲಾಗಿದೆ. ಈ ದಿನ ಗಣೇಶನ ವಿಸರ್ಜನೆ ಮಾಡಲಾಗುವುದು, ಏಕೆಂದರೆ ಈ ದಿನ ತುಂಬಾ ಶುಭವಾಗಿರುವುದರಿಂದ ಯಾವುದೇ ವಿಶೇಷ ಪೂಜೆಯ ಅವಶ್ಯಕತೆ ಇರುವುದಿಲ್ಲ, ಆದ್ದರಿಂದ ಗಣೇಶನ ವಿಸರ್ಜನೆಗೆ ಈ ದಿನ ತುಂಬಾ ಶ್ರೇಷ್ಠವಾಗಿದೆ.
ಗಣೇಶ ವಿಸರ್ಜನೆಯ ಸಂಪ್ರದಾಯ
ಗಣೇಶ ವಿಸರ್ಜನೆ ಮಾಡಿದಾಗ ಗಣೇಶೋತ್ಸವ ಮುಕ್ತಾಯವಾಗುವುದು. ಈ ದಿನ ಗಣೇಶನನ್ನು ನೀರಿನಲ್ಲಿ ಮುಳುಗಿಸಿ ವಿಸರ್ಜನೆ ಮಾಡಲಾಗುವುದು. ಗಣೇಶನನ್ನು ವಿಸರ್ಜನೆ ಮಾಡುವಾಗ ತುಂಬಾ ಸಡಗರ -ಸಂಭ್ರಮದಿಂದ ಬಿಡಲಾಗುವುದು. ಗಣೇಶನನ್ನು ನೀರಿನಲ್ಲಿ ಮುಳುಗಿಸಿದಾಗ ಸ್ವರ್ಗ ಲೋಕಕ್ಕೆ ಗಣೇಶ ಪ್ರಯಾಣ ಶುರು ಮಾಡುತ್ತಾನೆ ಎಂದು ಹೇಳಲಾಗುವುದು. 10 ದಿನ ಆರಾಧಿಸಿದ ಗಣೇಶನನ್ನು ನೀರಿನಲ್ಲಿ ಮುಳುಗಿಸುವಾಗ ಬೇಸರವಾದರೂ ಗಣೇಶನ ಕೃಪೆ ಸದಾ ನಮ್ಮ ಮೇಲಿರುತ್ತದೆ ಎಂಬ ನಂಬಿಕೆಯಿಂದ ಗಣೇಶನನ್ನು ಕಳುಹಿಸಿ ಕೊಡಲಾಗುವುದು.
ಗಣೇಶ ವಿಸರ್ಜನೆಯ ಮಹತ್ವ
ಗಣೇಶ ಚತುರ್ಥಿ ಆಚರಣೆ ಮನುಷ್ಯನ ಬದುಕಿನ ಅರ್ಥವನ್ನು ತಿಳಿಸುತ್ತದೆ. ಗಣೇಶ ಪ್ರತಿಷ್ಠಾಪನೆ ಹುಟ್ಟು, ಪೂಜೆ ಜೀವನ, ವಿಸರ್ಜನೆ ಸಾವನ್ನು ಸೂಚಿಸುತ್ತದೆ.
ಅನಂತ ಚತುರ್ದಶಿ
ಅನಂತ ಚತುರ್ದಶಿಯಂದು ಶ್ರೀ ವಿಷ್ಣುವನ್ನು ಆರಾಧಿಸಲಾಗುವುದು. ಈ ದಿನ ಶ್ರೀ ವಿಷ್ಣುವಿನ ಪೂಜೆಗೆ ತುಂಬಾನೇ ಶುಭ ದಿನ ಎಂದು ಪರಿಗಣಿಸಲಾಗುವುದು. ಈ ದಿನ ಅನಂತ ಸೂತ್ರವನ್ನು ಕಟ್ಟುವುದಕ್ಕೆ ತುಂಬಾನೇ ಮಹತ್ವವಿದೆ. ಈ ಸೂತ್ರದಲ್ಲಿ ಸಾಕ್ಷಾತ್ ಶ್ರೀ ವಿಷ್ಣು ನೆಲೆಸಿರುತ್ತಾನೆ ಎಂದು ನಂಬಲಾಗಿದೆ. ಈ ಅನಂತ ಸೂತ್ರವನ್ನು ಶ್ರೀ ವಿಷ್ಣುವಿನ ಪೂಜೆ ಬಳಿಕವಷ್ಟೇ ಕಟ್ಟಬೇಕು. ಈ ಅನಂತ ಸೂತ್ರವನ್ನು ಪುರುಷರು ಬಲಗೈಗೆ, ಮಹಿಳೆಯರಿಗೆ ಎಡಗೈಗೆ ಕಟ್ಟಲಾಗುವುದು. ಯಾರು ಈ ವ್ರತವನ್ನು ಮಾಡುತ್ತಾರೋ ಅವರ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು.
ಗಣೇಶನ ಬೀಳ್ಕೊಟ್ಟು ಬರುವಾಗ ಮನಸ್ಸಿಗೆ ಬೇಸರವಾಗುವುದು ಆದರೆ ಮನೆಗೆ ಹಿಂತಿರುಗಿ ಬಂದಾಗ ಶ್ರೀ ವಿಷ್ಣುವಿನ ಆರಾಧನೆ ಮಾಡುವುದರಿಂದ ಮತ್ತೆ ಮನೆಯಲ್ಲಿ ಸಡಗರ -ಸಂಭ್ರಮ ತುಂಬುವುದು.



Click it and Unblock the Notifications
