Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಶಿವಾಲಯಕ್ಕೆ ಹೋದಾಗ ಚಂಡಿ ಪ್ರದಕ್ಷಿಣೆ ಮಾತ್ರ ಮಾಡಬೇಕು , ಏಕೆ?
ದೇವಾಲಯಕ್ಕೆ ಹೋದಾಗ ದೇವಾಲಯದ ಸುತ್ತ ಪ್ರದಕ್ಷಿಣೆ ಬರುತ್ತೇವೆ, ದೇವಾಲಯದ ಸುತ್ತ ಸುತ್ತು ಬರುವುದರಿಂದ ಒಂಥರಾ ಭಕ್ತಿ ಭಾವನೆ ಮನಸ್ಸಿನಲ್ಲಿ ಮೂಡುವುದು. ಆದರೆ ನೀವು ಶಿವ ದೇವಾಲಯಕ್ಕೆ ಹೋದಾಗ ನೀವು ಪ್ರದಕ್ಷಣೆ ಬರುವ ಬದಲಿಗೆ ಚಂಡಿ ಪ್ರದಕ್ಷಿಣೆ ಬರಬೇಕಾಗುತ್ತದೆ. ಈ ಚಂಡಿ ಪ್ರದಕ್ಷಿಣೆ ಹೇಗೆ ಮಾಡಬೇಕು? ಏಕೆ ಶಿವನಿಗೆ ಮಾತ್ರ ಚಂಡಿ ಪ್ರದಕ್ಷಿಣೆ ಮಾಡಲಾಗುವುದು ಎಂದು ನೋಡೋಣ ಬನ್ನಿ:

ಶಿವ ದೇವಾಲಯಕ್ಕೆ ಹೋದಾಗ ಈ ನಿಯಮಗಳನ್ನು ಮರೆಯಬಾರದು
ಶಿವನ ದೇವಾಲಯಕ್ಕೆ ಹೋದಾಗ ಸೋಮ ಸ್ತೋತ್ರವನ್ನು ದಾಟಬಾರದು ಎಂದು ಹೇಳಲಾಗುವುದು. ಅಂದರೆ ಶಿವನಿಗೆ ಅಭಿಷೇಕ ಮಾಡಿದಾಗ ಅಭಿಷೇಕಕ್ಕೆ ಬಳಸಿದ ನೀರು, ಹಾಲು ಹೀಗೆ ಪೂಜೆಗೆ ಬಳಸಿದ ವಸ್ತುಗಳು ಹರಿದು ಬಂದು ಬೀಳುವ ಸ್ಥಳವನ್ನು ದಾಟಬಾರದು ಎಂದು ಹೇಳಲಾಗುವುದು.
ಚಂಡಿ ಪ್ರದಕ್ಷಿಣೆ ಎಂದರೇನು?
ಶಿವಲಿಂಗದ ಅಭಿಷೇಕಕ್ಕೆ ಬಳಸಿದ ಸಾಮಗ್ರಿಗಳು ಹರಿದು ಬಂದು ಬೀಳುವ ಸ್ಥಳ ಅದಾಗಿದ್ದು ಅದನ್ನು ದಾಟಬಾರದು ಎಂದು ಹೇಳಲಾಗುವುದು.
ಚಂಡಿ ಪ್ರದಕ್ಷಿಣೆ ಹೇಗೆ ಮಾಡಬೇಕು?
ಧ್ವಜ ಸ್ತಂಭದ ಬಳಿ ನಿಂತು ಬಲ ಭಾಗಕ್ಕೆ ಚಂಡೀಶ್ವರ ಬಳಿ ಬಂದು ನಂತರ ಅಲ್ಲಿಂದ ಸೋಮಸೂತ್ರ ಬಳಿ ಹೋಗಬೇಕು, ನಂತರ ಚಂಡೀಶ್ವರ ಬಳಿ ಬಂದು ನಂತರ ಮತ್ತೆ ಸೋಮ ಸ್ತೋತ್ರ ಬಳಿ ಹೋಗಬೇಕು. ಚಂಡೀಶ್ವರ ಬಳಿ ಬಂದು ನಂತರ ಧ್ವಜ ಸ್ತಂಭದ ಬಳಿಗೆ, ಧ್ವಜ ಸ್ತಂಭದಿಂದ ಚಂಡೀಶ್ವರ ಬಳಿಗೆ 3 ಬಾರಿ ಹೋಗಬೇಕು.
ಎಷ್ಟು ಬಾರಿ ಚಂಡಿಪ್ರದಕ್ಷಿಣೆ ಮಾಡಬೇಕು?
1 ಅಥವಾ 3 ಬಾರಿ ಚಂಡಿ ಪ್ರದಕ್ಷಿಣೆ ಮಾಡಬಹುದು. ಯಾವುದೇ ಕಾರಣಕ್ಕೆ ಸೋಮ ಸ್ತೋತ್ರ ದಾಟಬಾರದು. ಈ ಸೋಮ ಸ್ತೋತ್ರ ತುಂಬಾನೇ ಪವಿತ್ರವಾದದ್ದು. ನೀವು ಎಷ್ಟೇ ಚಿಕ್ಕ ಶಿವಲಿಂಗ ಖರೀದಿಸಿದರೂ ಅದರಲ್ಲಿ ಚಂಡೀಶ್ವರ ಇರುತ್ತದೆ. ಇದನ್ನು ದಾಟಬಾರದು.
ಚಂಡಿ ಪ್ರದಕ್ಷಿಣೆ ಪ್ರಯೋಜನಗಳೇನು?
ಚಂಡ ಪ್ರದಕ್ಷಿಣೆ ಮಾಡುವುದರಿಂದ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು.
ಶಿವನ ನೋಡುವ ಮೊದಲಿಗೆ ನಂದಿಗೆ ನಮಸ್ಕರಿಸಬೇಕು?
ನೀವು ಶಿವಾಲಯಕ್ಕೆ ಹೋದಾಗ ಅಲ್ಲೊಂದು ಘಂಟೆ ಇರುತ್ತದೆ. ಅದನ್ನು ಒಂದು ಬಾರಿ ಮಾತ್ರ ಬಡಿಯಬೇಕು, ಅದರಿಂದ ಬರುವ ಶಬ್ದ ಓಂಕಾರದಂತೆ ಕೇಳಿಸುತ್ತದೆ. ನಂತರ ನಂದಿಗೆ ನಮಸ್ಕರಿಸಿ ಶಿವನ ಮೂರ್ತಿ ಬಳಿ ಹೋಗಿ ನಮಸ್ಕರಿಸಬೇಕು. ನಂದಿ ಕಿವಿಗೆ ಇಷ್ಟಾರ್ಥಗಳನ್ನು ಹೇಳಿದರೆ ಶಿವನಿಗೆ ಅದು ಕೇಳಿಸುತ್ತದೆ, ಶಿವ ನಿಮ್ಮ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು.



Click it and Unblock the Notifications