Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶಿವಾಲಯಕ್ಕೆ ಹೋದಾಗ ಚಂಡಿ ಪ್ರದಕ್ಷಿಣೆ ಮಾತ್ರ ಮಾಡಬೇಕು , ಏಕೆ?
ದೇವಾಲಯಕ್ಕೆ ಹೋದಾಗ ದೇವಾಲಯದ ಸುತ್ತ ಪ್ರದಕ್ಷಿಣೆ ಬರುತ್ತೇವೆ, ದೇವಾಲಯದ ಸುತ್ತ ಸುತ್ತು ಬರುವುದರಿಂದ ಒಂಥರಾ ಭಕ್ತಿ ಭಾವನೆ ಮನಸ್ಸಿನಲ್ಲಿ ಮೂಡುವುದು. ಆದರೆ ನೀವು ಶಿವ ದೇವಾಲಯಕ್ಕೆ ಹೋದಾಗ ನೀವು ಪ್ರದಕ್ಷಣೆ ಬರುವ ಬದಲಿಗೆ ಚಂಡಿ ಪ್ರದಕ್ಷಿಣೆ ಬರಬೇಕಾಗುತ್ತದೆ. ಈ ಚಂಡಿ ಪ್ರದಕ್ಷಿಣೆ ಹೇಗೆ ಮಾಡಬೇಕು? ಏಕೆ ಶಿವನಿಗೆ ಮಾತ್ರ ಚಂಡಿ ಪ್ರದಕ್ಷಿಣೆ ಮಾಡಲಾಗುವುದು ಎಂದು ನೋಡೋಣ ಬನ್ನಿ:

ಶಿವ ದೇವಾಲಯಕ್ಕೆ ಹೋದಾಗ ಈ ನಿಯಮಗಳನ್ನು ಮರೆಯಬಾರದು
ಶಿವನ ದೇವಾಲಯಕ್ಕೆ ಹೋದಾಗ ಸೋಮ ಸ್ತೋತ್ರವನ್ನು ದಾಟಬಾರದು ಎಂದು ಹೇಳಲಾಗುವುದು. ಅಂದರೆ ಶಿವನಿಗೆ ಅಭಿಷೇಕ ಮಾಡಿದಾಗ ಅಭಿಷೇಕಕ್ಕೆ ಬಳಸಿದ ನೀರು, ಹಾಲು ಹೀಗೆ ಪೂಜೆಗೆ ಬಳಸಿದ ವಸ್ತುಗಳು ಹರಿದು ಬಂದು ಬೀಳುವ ಸ್ಥಳವನ್ನು ದಾಟಬಾರದು ಎಂದು ಹೇಳಲಾಗುವುದು.
ಚಂಡಿ ಪ್ರದಕ್ಷಿಣೆ ಎಂದರೇನು?
ಶಿವಲಿಂಗದ ಅಭಿಷೇಕಕ್ಕೆ ಬಳಸಿದ ಸಾಮಗ್ರಿಗಳು ಹರಿದು ಬಂದು ಬೀಳುವ ಸ್ಥಳ ಅದಾಗಿದ್ದು ಅದನ್ನು ದಾಟಬಾರದು ಎಂದು ಹೇಳಲಾಗುವುದು.
ಚಂಡಿ ಪ್ರದಕ್ಷಿಣೆ ಹೇಗೆ ಮಾಡಬೇಕು?
ಧ್ವಜ ಸ್ತಂಭದ ಬಳಿ ನಿಂತು ಬಲ ಭಾಗಕ್ಕೆ ಚಂಡೀಶ್ವರ ಬಳಿ ಬಂದು ನಂತರ ಅಲ್ಲಿಂದ ಸೋಮಸೂತ್ರ ಬಳಿ ಹೋಗಬೇಕು, ನಂತರ ಚಂಡೀಶ್ವರ ಬಳಿ ಬಂದು ನಂತರ ಮತ್ತೆ ಸೋಮ ಸ್ತೋತ್ರ ಬಳಿ ಹೋಗಬೇಕು. ಚಂಡೀಶ್ವರ ಬಳಿ ಬಂದು ನಂತರ ಧ್ವಜ ಸ್ತಂಭದ ಬಳಿಗೆ, ಧ್ವಜ ಸ್ತಂಭದಿಂದ ಚಂಡೀಶ್ವರ ಬಳಿಗೆ 3 ಬಾರಿ ಹೋಗಬೇಕು.
ಎಷ್ಟು ಬಾರಿ ಚಂಡಿಪ್ರದಕ್ಷಿಣೆ ಮಾಡಬೇಕು?
1 ಅಥವಾ 3 ಬಾರಿ ಚಂಡಿ ಪ್ರದಕ್ಷಿಣೆ ಮಾಡಬಹುದು. ಯಾವುದೇ ಕಾರಣಕ್ಕೆ ಸೋಮ ಸ್ತೋತ್ರ ದಾಟಬಾರದು. ಈ ಸೋಮ ಸ್ತೋತ್ರ ತುಂಬಾನೇ ಪವಿತ್ರವಾದದ್ದು. ನೀವು ಎಷ್ಟೇ ಚಿಕ್ಕ ಶಿವಲಿಂಗ ಖರೀದಿಸಿದರೂ ಅದರಲ್ಲಿ ಚಂಡೀಶ್ವರ ಇರುತ್ತದೆ. ಇದನ್ನು ದಾಟಬಾರದು.
ಚಂಡಿ ಪ್ರದಕ್ಷಿಣೆ ಪ್ರಯೋಜನಗಳೇನು?
ಚಂಡ ಪ್ರದಕ್ಷಿಣೆ ಮಾಡುವುದರಿಂದ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು.
ಶಿವನ ನೋಡುವ ಮೊದಲಿಗೆ ನಂದಿಗೆ ನಮಸ್ಕರಿಸಬೇಕು?
ನೀವು ಶಿವಾಲಯಕ್ಕೆ ಹೋದಾಗ ಅಲ್ಲೊಂದು ಘಂಟೆ ಇರುತ್ತದೆ. ಅದನ್ನು ಒಂದು ಬಾರಿ ಮಾತ್ರ ಬಡಿಯಬೇಕು, ಅದರಿಂದ ಬರುವ ಶಬ್ದ ಓಂಕಾರದಂತೆ ಕೇಳಿಸುತ್ತದೆ. ನಂತರ ನಂದಿಗೆ ನಮಸ್ಕರಿಸಿ ಶಿವನ ಮೂರ್ತಿ ಬಳಿ ಹೋಗಿ ನಮಸ್ಕರಿಸಬೇಕು. ನಂದಿ ಕಿವಿಗೆ ಇಷ್ಟಾರ್ಥಗಳನ್ನು ಹೇಳಿದರೆ ಶಿವನಿಗೆ ಅದು ಕೇಳಿಸುತ್ತದೆ, ಶಿವ ನಿಮ್ಮ ಇಷ್ಟಾರ್ಥಗಳು ನೆರವೇರುವುದು ಎಂದು ಹೇಳಲಾಗುವುದು.



Click it and Unblock the Notifications