Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಮೇದೋಜೀರಕ ಗ್ರಂಥಿ ದಾನ ಮಾಡಿದ 2 ವರ್ಷದ ಬಾಲಕ..! ಸೆಲ್ಯೂಟ್ ಮಾಡಿದ ಸಿಬ್ಬಂದಿ..!!
ನಾವು ಮರಣ ಹೊಂದಿದ ಬಳಿಕವೂ ಜೀವಿಸಬೇಕು ಅಂದ್ರೆ ಅಂಗಾಂಗ ದಾನ ಮಾಡಬೇಕಾಗುತ್ತದೆ. ಅಂಗಾಂಗ ದಾನ ಮಾಡೋದ್ರಿಂದ ನಾವು ಮತ್ತೊಬ್ಬರಿಗೆ ಜೀವನ ನೀಡಿದಂತೆ. ಹಿಂದಿನಿಂದಲೂ ಅಂಗಾಂಗ ದಾನ ಮಾಡುವುದು ನಾವು ನೋಡಬಹುದು. ಇಡೀ ದೇಹವನ್ನೇ ದಾನ ಮಾಡುವವರು ಕೂಡ ಇದ್ದಾರೆ. ನಾವು ಮರಣ ಹೊಂದಿದ ಬಳಿಕ ನಮ್ಮ ಅಂಗಾಂಗಳು ಕೆಲಸಕ್ಕೆ ಬರುತ್ತವೆ. ಕಣ್ಣು, ಕಿಡ್ನಿ, ಹೃದಯ ಸೇರಿ ಹಲವು ಅಂಗಗಳನ್ನು ಬೇರೆಯವರಿಗೆ ಕಸಿ ಮಾಡುವ ಮೂಲಕ ಅವರ ಜೀವನ ಬೆಳಗಬಹುದು.
ಹಾಗೆ ಇಲ್ಲೊಬ್ಬ 2 ವರ್ಷದ ಬಾಲಕ ಈಗ ಮೇದೋಜೀರಕ ಗ್ರಂಥಿ ಸೇರಿ ತನ್ನ ಹಲವು ಅಂಗಗಳ ದಾನ ಮಾಡಿ ಹತ್ತಾರು ಜನರಿಗೆ ನೆರವಾಗಿರುವುದಿಲ್ಲದೆ ಮಾನವೀಯ ಕಾರ್ಯದ ಮೂಲಕ ಹೆಸರಾಗಿದ್ದಾರೆ. ಕೀನ್ಯಾದ ಬಾಲಕ ಭಾರತದಲ್ಲಿ ತನ್ನ ಅಂಗಾಂಗ ದಾನ ಮಾಡುವ ಮೂಲಕ ಈ ದೇಶದ ಮೊಟ್ಟ ಮೊದಲ ಪ್ರಕರಣ ಎಂಬುದಕ್ಕೂ ಹೆಸರಾಗಿದೆ.

2 ವರ್ಷದ ಕೀನ್ಯಾದ ಬಾಲಕ ಚಂಡೀಗಢದ PGIMER ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿದ್ದು ಮೇದೋಜೀರಕ ಗ್ರಂಥಿ ದಾನ ಮಾಡಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಕೀರ್ತಿಗೂ ಪಾತ್ರರಾದರು. ಆತ ಮನೆಯಲ್ಲಿ ಆಟವಾಡುವಾಗ ಕುಸಿದು ಬಿದ್ದು ಬ್ರೈನ್ ಡೆಡ್ ಆಗಿತ್ತು. ಬರೋಬ್ಬರಿ 10 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದಾಗ ಬ್ರೈನ್ ಡೆಡ್ ಎಂದು ಘೋಷಿಸಲಾಗಿತ್ತು.
ಈಗ ಆತನಿಂದ ಮೇದೋಜೀರಕ ಗ್ರಂಥಿ, ಕಣ್ಣು, ಕಿಡ್ನಿಗಳನ್ನೂ ಪಡೆಯಲಾಗಿದೆ. ಲುಂಡಾ ಕಯುಂಬಾ ಎಂಬ 2 ವರ್ಷದ ಬಾಲಕ ಭಾರತದಲ್ಲಿ ಕುಟುಂಬಸ್ಥರೊಂದಿಗೆ ನೆಲಸಿದ್ದ ಆದ್ರೆ ಆಟವಾಡುವಾಗ ಬಿದ್ದು ಗಾಯಗೊಂಡಿದ್ದ. ಆಸ್ಪತ್ರೆಗೆ ಕರೆತಂದಾಗ ಬ್ರೈನ್ ಡೆಡ್ ಎಂದು ಘೋಷಿಸಲಾಗಿತ್ತು. ಆದ್ರೆ ಕುಟುಂಬಸ್ಥರು ಆತನ ದೇಹದ ಅಂಗಾಂಗಳ ದಾನ ಮಾಡುವ ನಿರ್ಧಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.
ವಿದೇಶಿ ಬಾಲಕನೊಬ್ಬ ಮೊಟ್ಟ ಮೊದಲ ಬಾರಿಗೆ ತನ್ನ ಅಂಗಾಂಗ ದಾನ ಮಾಡಿದ ಪ್ರಕರಣ ಇದಾಗಿದೆ. ಆತನಿಂದ ಪಡೆದ ಅಂಗಾಂಗಳನ್ನು ಒಟ್ಟು ನಾಲ್ಕು ಜನರಿಗೆ ಕಸಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಲುಂಡಾ ಕಯುಂಬಾ ಆತನನ್ನು ಪ್ರೀತಿಯಿಂದ ಪ್ರಾಸ್ಟರ್ ಎಂದು ಕರೆಯಲಾಗುತ್ತಿತ್ತು. ಆತ ಅಕ್ಟೋಬರ್ 17 ರಂದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಪ್ರಾಸ್ಪರ್ನ ಕಾರ್ನಿಯಾಗಳ ಕಸಿ ಮಾಡುವಿಕೆಯು ಈ ಹಿಂದೆ ಕಾರ್ನಿಯಲ್ ಕುರುಡರಾಗಿದ್ದ ಇಬ್ಬರು ವ್ಯಕ್ತಿಗಳಿಗೆ ತಮ್ಮ ದೃಷ್ಟಿಯನ್ನು ಮರಳಿ ಪಡೆಯಲು ಸಹಾಯ ಮಾಡಿದೆ.
ಸಾವಿನಲ್ಲೂ ಸಾರ್ಥಕತೆ ಕಂಡ ಕುಟುಂಬಸ್ಥರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಹಾಗೆ ಅವರ ಕಾರ್ಯ ಇನ್ನೊಂದಿಷ್ಟು ಜನರಿಗೆ ಸ್ಪೂರ್ತಿಯಾಗಲಿದೆ ಎಂದು ಹೇಳಲಾಗಿದೆ. 2 ವರ್ಷದ ಬಾಲಕನಂತೆ ಉಳಿದ ಮಂದಿ ಕೂಡ ಅಂಗಾಂಗ ದಾನ, ದೇಹದಾನ, ರಕ್ತದಾನದಂತಹ ಮಹತ್ ಕಾರ್ಯಗಳ ಮಾಡುವುದಕ್ಕೆ ಪ್ರೇರೇಪಿಸಲಾಗುತ್ತಿದೆ.



Click it and Unblock the Notifications
