Latest Updates
-
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ
ದೆಹಲಿಯಲ್ಲಿಯೂ ಇದೆ ಭೂತ ಸಂಚಾರದ 5 ಸ್ಥಳಗಳು!
ನಮ್ಮ ದೇಶದ ರಾಜಧಾನಿ ದೆಹಲಿ ಬಗ್ಗೆ ಹೇಳಬೇಕೆಂದರೆ ಅನೇಕ ಉತ್ತಮವಾದ ಹಾಗೂ ಅಚ್ಚರಿಯ ವಿಷಯಗಳಿವೆ. ದೇಶದಲ್ಲಿಯೇ ಅತ್ಯುತ್ತಮವಾದ ರಸ್ತೆ ದೆಹಲಿಯಲ್ಲಿದೆ. ಇದು ಆಹಾರ ಪ್ರಿಯರ ಸ್ವರ್ಗವಾಗಿದೆ. ಹೀಗೆ ಅನೇಕ ವಿಷಯಗಳಿವೆ. ಇಲ್ಲಿ ಸ್ವಲ್ಪ ಭಯಾನಕವಾದ ಅನೇಕ ಅಚ್ಚರಿಯ ವಿಷಯಗಳಿವೆ. ಈ ವಿಷಯಗಳು ತುಂಬಾ ಮಂದಿ ಡೆಲ್ಲಿ ನಿವಾಸಿಗಳಿಗೇ ಗೊತ್ತಿರುವುದಿಲ್ಲ!
ದೆಹಲಿ ಪುರಾತನ ನಗರವಾಗಿದೆ. ಮುಘಲ್ ರು, ಬ್ರಿಟಿಷರು ತಮ್ಮ ರಾಜಧಾನಿಯಾಗಿ ದೆಹಲಿಯನ್ನು ಮಾಡಿಕೊಂಡಿದ್ದರು. ದೆಹಲಿಯಲ್ಲಿರುವ ಪೌರಾಣಿಕ ಹೆರಿಟೇಜ್ (ಪಾರಂಪರಿಕ) ಕಟ್ಟಡವೇ ಒಂದು ಭಯಾನಕವಾದ ಸ್ಥಳ ಎಂದು ಹೇಳಲಾಗುತ್ತಿದೆ. ದೆಹಲಿಯ ಕೆಲವೊಂದು ಸ್ಥಳಗಳಲ್ಲಿ ಭೂತ ಇದೆ ಎಂಬ ವದಂತಿಗಳು ಕೂಡ ಕೇಳಿ ಬಂದಿದೆ. ದೆಹಲಿಯಲ್ಲಿ ಭೂತದ ಸಂಚಾರ ಇದೆ ಎಂದು ಜನರು ಅಲ್ಲಿಗೆ ಹೋಗಲು ಭಯಪಡುತ್ತಿರುವ ಆ ಸ್ಥಳಗಳಾವುವು ಎಂದು ನೋಡೋಣ ಬನ್ನಿ:

1. ಡೆಲ್ಲಿ ಕ್ಯಾಂಟ್
ಇದು ದೆಹಲಿಯಲ್ಲಿರುವ ತುಂಬಾ ಸುಂದರವಾದ ಸ್ಥಳವಾಗಿದೆ. ಈ ಸ್ಥಳ ಕುದುರೆ ಸವಾರಿಗೆ ತುಂಬಾ ಚೆನ್ನಾಗಿದೆ. ಅನೇಕ ಜನರು ಇಲ್ಲಿ ಬಿಳಿ ಡ್ರೆಸ್ ನಲ್ಲಿ ಒಂದು ಸ್ತ್ರೀ ದಾರಿ ಮೇಲೆ ನಿಂತು ಲಿಫ್ಟ್ ಕೇಳುತ್ತಾಳೆ. ನಾವು ಲಿಫ್ಟ್ ಕೊಟ್ಟರೆ ಅವಳು ಸ್ವಲ್ಪ ಸಮಯದಲ್ಲಿ ಮಾಯವಾಗುತ್ತಾಳೆ ಎಂದು ಹೇಳಿದ್ದಾರೆ. ಈ ಕತೆಯಿಂದಾಗಿ ಜನರು ಈ ಸ್ಥಳಕ್ಕೆ ಹೋಗಲು ಸ್ವಲ್ಪ ಭಯ ಪಡುತ್ತಾರೆ.

2.ಖೂನಿ ದರ್ವಾಜಾ
ಇದು ದೆಹಲಿಯಲ್ಲಿರುವ ಮೊಘಲ್ ಸ್ಮಾರಕವಾಗಿದೆ. ಬ್ರಿಟಿಷರು ಬಹದೂರ್ ಷಾ ಜಫರ್ ನ 3 ಗಂಡು ಮಕ್ಕಳನ್ನು ಕೊಂದರು. ಈ ಮಕ್ಕಳು ದೆವ್ವವಾಗಿ ಬ್ರಿಟಿಷರ ವಿರುದ್ಧ ಸೇಡು ತೀರಿಸಿಕೊಳ್ಳಲು ಬಾಗಿಲ ಬಳಿ ಕಾಯುತ್ತಿದೆ. ಇಲ್ಲಿಗೆ ಬ್ರಿಟಿಷರು ಹೋದಾರೆ ಏನಾದರೂ ಸಂಭವಿಸುತ್ತದೆ ಎಂಬ ಅಂತೆ-ಕಂತೆಗಳು ಈ ಸ್ಮಾರಕದ ಬಗ್ಗೆ ಕೇಳಿ ಬರುತ್ತದೆ.

3. ಜಮಾಲಿ-ಕಮಾಲಿ ಮಸ್ಜೀದ್
ಇದು ದೆವ್ವಗಳ ಹೆಸರಲ್ಲ. ಇಲ್ಲಿ ಹೆಸರಾಂತ ಇಬ್ಬರು ಸಂತರನ್ನು ಸಮಾಧಿ ಮಾಡಲಾಗಿದೆ. ಆದರೆ ಇಲ್ಲಿ ಭೂತದ ಓಡಾಟ ಇದೆ ಎಂದು ಹೇಳಲಾಗುತ್ತಿದೆ. ಈ ಸ್ಥಳಕ್ಕೆ ಭೇಟಿ ಕೊಟ್ಟರೆ ನಿಮ್ಮನ್ನು ಯಾರೋ ಹಿಡಿದು ಎಳೆದಂತೆ, ಕೆನ್ನೆಗೆ ಬಡೆದಂತೆ ಭಾಸವಾಗುವುದು ಎಂದು ಇಲ್ಲಿಗೆ ಹೋದವರು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ.

4. ಸಂಜಯ್ ವನ
ದೆಹಲಿಯಲ್ಲಿರುವ ಈ ಕಾಡು ಅರಳಿ ಮರಕ್ಕೆ ಪ್ರಸಿದ್ಧಿಯನ್ನು ಪಡೆದಿದೆ. ಈ ಕಾಡಿನಲ್ಲಿ ಬಿಳಿ ವಸ್ತ್ರ ಧರಿಸಿದ ಸ್ತ್ರೀ ಕಾಣ ಸಿಗುತ್ತಾಳೆ, ನೋಡುತ್ತಿದ್ದಂತೆಯೇ ತಕ್ಷಣ ಮಾಯವಾಗುತ್ತಾಳೆ ಎಂದು ಸಾಕಷ್ಟು ಜನರು ಹೇಳಿದ್ದಾರೆ. ಆದರೆ ಅದು ನಿಜವೇ? ಸುಳ್ಳೇ? ಅನ್ನುವುದನ್ನು ಸ್ವ ಅನುಭವದಿಂದ ತಿಳಿದುಬೇಕಷ್ಟೆ. ಯಾಕೆ ಎಲ್ಲಾ ಕಡೆ ಬರೀ ಹೆಣ್ಣು ದೆವ್ವವೇ ಕಾಣಸಿಗುತ್ತದೆ?

5. ಲೂದಿಯಾನ ಸಮಾಧಿ
ಇಲ್ಲಿ ಕ್ರಿಶ. 1700ರಲ್ಲಿ ಕ್ರೈಸ್ತ ಧರ್ಮ ಗುರುವನ್ನು ಸಮಾಧಿ ಮಾಡಲಾದ ಸ್ಥಳವಾಗಿದೆ. ಆದರೆ ಇಲ್ಲಿ ಮುಂಡವಿಲ್ಲದ ದೆವ್ವ ಓಡಾಡುತ್ತದೆ ಎಂದು ಹೇಳಾಗುತ್ತದೆ. ಈ ದೆವ್ವ ಹಿಂದೆ ಸೈನಿಕನಾಗಿದ್ದ, ತನ್ನ ಪ್ರೇಯಸಿಯಿಂದ ಮೋಸ ಹೋಗಿ ತನ್ನ ತಲೆಯನ್ನು ಕತ್ತರಿಸಿ ಸತ್ತ. ಅಮಾವಾಸ್ಯೆಯಲ್ಲಿ ಮುಂಡವಿಲ್ಲದ ರುಂಡವನ್ನು ಕಾಣಬಹುದು ಎಂಬ ಗಾಳಿ ಸುದ್ಧಿ ಇದೆ. ಇದು ಎಷ್ಟರ ಮಟ್ಟಿಗೆ ಸರಿ ಅನ್ನುವುದು ಆ ದೇವರಿಗೇ ಗೊತ್ತು?



Click it and Unblock the Notifications











