Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್!
ದೆಹಲಿಯಲ್ಲಿಯೂ ಇದೆ ಭೂತ ಸಂಚಾರದ 5 ಸ್ಥಳಗಳು!
ನಮ್ಮ ದೇಶದ ರಾಜಧಾನಿ ದೆಹಲಿ ಬಗ್ಗೆ ಹೇಳಬೇಕೆಂದರೆ ಅನೇಕ ಉತ್ತಮವಾದ ಹಾಗೂ ಅಚ್ಚರಿಯ ವಿಷಯಗಳಿವೆ. ದೇಶದಲ್ಲಿಯೇ ಅತ್ಯುತ್ತಮವಾದ ರಸ್ತೆ ದೆಹಲಿಯಲ್ಲಿದೆ. ಇದು ಆಹಾರ ಪ್ರಿಯರ ಸ್ವರ್ಗವಾಗಿದೆ. ಹೀಗೆ ಅನೇಕ ವಿಷಯಗಳಿವೆ. ಇಲ್ಲಿ ಸ್ವಲ್ಪ ಭಯಾನಕವಾದ ಅನೇಕ ಅಚ್ಚರಿಯ ವಿಷಯಗಳಿವೆ. ಈ ವಿಷಯಗಳು ತುಂಬಾ ಮಂದಿ ಡೆಲ್ಲಿ ನಿವಾಸಿಗಳಿಗೇ ಗೊತ್ತಿರುವುದಿಲ್ಲ!
ದೆಹಲಿ ಪುರಾತನ ನಗರವಾಗಿದೆ. ಮುಘಲ್ ರು, ಬ್ರಿಟಿಷರು ತಮ್ಮ ರಾಜಧಾನಿಯಾಗಿ ದೆಹಲಿಯನ್ನು ಮಾಡಿಕೊಂಡಿದ್ದರು. ದೆಹಲಿಯಲ್ಲಿರುವ ಪೌರಾಣಿಕ ಹೆರಿಟೇಜ್ (ಪಾರಂಪರಿಕ) ಕಟ್ಟಡವೇ ಒಂದು ಭಯಾನಕವಾದ ಸ್ಥಳ ಎಂದು ಹೇಳಲಾಗುತ್ತಿದೆ. ದೆಹಲಿಯ ಕೆಲವೊಂದು ಸ್ಥಳಗಳಲ್ಲಿ ಭೂತ ಇದೆ ಎಂಬ ವದಂತಿಗಳು ಕೂಡ ಕೇಳಿ ಬಂದಿದೆ. ದೆಹಲಿಯಲ್ಲಿ ಭೂತದ ಸಂಚಾರ ಇದೆ ಎಂದು ಜನರು ಅಲ್ಲಿಗೆ ಹೋಗಲು ಭಯಪಡುತ್ತಿರುವ ಆ ಸ್ಥಳಗಳಾವುವು ಎಂದು ನೋಡೋಣ ಬನ್ನಿ:

1. ಡೆಲ್ಲಿ ಕ್ಯಾಂಟ್
ಇದು ದೆಹಲಿಯಲ್ಲಿರುವ ತುಂಬಾ ಸುಂದರವಾದ ಸ್ಥಳವಾಗಿದೆ. ಈ ಸ್ಥಳ ಕುದುರೆ ಸವಾರಿಗೆ ತುಂಬಾ ಚೆನ್ನಾಗಿದೆ. ಅನೇಕ ಜನರು ಇಲ್ಲಿ ಬಿಳಿ ಡ್ರೆಸ್ ನಲ್ಲಿ ಒಂದು ಸ್ತ್ರೀ ದಾರಿ ಮೇಲೆ ನಿಂತು ಲಿಫ್ಟ್ ಕೇಳುತ್ತಾಳೆ. ನಾವು ಲಿಫ್ಟ್ ಕೊಟ್ಟರೆ ಅವಳು ಸ್ವಲ್ಪ ಸಮಯದಲ್ಲಿ ಮಾಯವಾಗುತ್ತಾಳೆ ಎಂದು ಹೇಳಿದ್ದಾರೆ. ಈ ಕತೆಯಿಂದಾಗಿ ಜನರು ಈ ಸ್ಥಳಕ್ಕೆ ಹೋಗಲು ಸ್ವಲ್ಪ ಭಯ ಪಡುತ್ತಾರೆ.

2.ಖೂನಿ ದರ್ವಾಜಾ
ಇದು ದೆಹಲಿಯಲ್ಲಿರುವ ಮೊಘಲ್ ಸ್ಮಾರಕವಾಗಿದೆ. ಬ್ರಿಟಿಷರು ಬಹದೂರ್ ಷಾ ಜಫರ್ ನ 3 ಗಂಡು ಮಕ್ಕಳನ್ನು ಕೊಂದರು. ಈ ಮಕ್ಕಳು ದೆವ್ವವಾಗಿ ಬ್ರಿಟಿಷರ ವಿರುದ್ಧ ಸೇಡು ತೀರಿಸಿಕೊಳ್ಳಲು ಬಾಗಿಲ ಬಳಿ ಕಾಯುತ್ತಿದೆ. ಇಲ್ಲಿಗೆ ಬ್ರಿಟಿಷರು ಹೋದಾರೆ ಏನಾದರೂ ಸಂಭವಿಸುತ್ತದೆ ಎಂಬ ಅಂತೆ-ಕಂತೆಗಳು ಈ ಸ್ಮಾರಕದ ಬಗ್ಗೆ ಕೇಳಿ ಬರುತ್ತದೆ.

3. ಜಮಾಲಿ-ಕಮಾಲಿ ಮಸ್ಜೀದ್
ಇದು ದೆವ್ವಗಳ ಹೆಸರಲ್ಲ. ಇಲ್ಲಿ ಹೆಸರಾಂತ ಇಬ್ಬರು ಸಂತರನ್ನು ಸಮಾಧಿ ಮಾಡಲಾಗಿದೆ. ಆದರೆ ಇಲ್ಲಿ ಭೂತದ ಓಡಾಟ ಇದೆ ಎಂದು ಹೇಳಲಾಗುತ್ತಿದೆ. ಈ ಸ್ಥಳಕ್ಕೆ ಭೇಟಿ ಕೊಟ್ಟರೆ ನಿಮ್ಮನ್ನು ಯಾರೋ ಹಿಡಿದು ಎಳೆದಂತೆ, ಕೆನ್ನೆಗೆ ಬಡೆದಂತೆ ಭಾಸವಾಗುವುದು ಎಂದು ಇಲ್ಲಿಗೆ ಹೋದವರು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ.

4. ಸಂಜಯ್ ವನ
ದೆಹಲಿಯಲ್ಲಿರುವ ಈ ಕಾಡು ಅರಳಿ ಮರಕ್ಕೆ ಪ್ರಸಿದ್ಧಿಯನ್ನು ಪಡೆದಿದೆ. ಈ ಕಾಡಿನಲ್ಲಿ ಬಿಳಿ ವಸ್ತ್ರ ಧರಿಸಿದ ಸ್ತ್ರೀ ಕಾಣ ಸಿಗುತ್ತಾಳೆ, ನೋಡುತ್ತಿದ್ದಂತೆಯೇ ತಕ್ಷಣ ಮಾಯವಾಗುತ್ತಾಳೆ ಎಂದು ಸಾಕಷ್ಟು ಜನರು ಹೇಳಿದ್ದಾರೆ. ಆದರೆ ಅದು ನಿಜವೇ? ಸುಳ್ಳೇ? ಅನ್ನುವುದನ್ನು ಸ್ವ ಅನುಭವದಿಂದ ತಿಳಿದುಬೇಕಷ್ಟೆ. ಯಾಕೆ ಎಲ್ಲಾ ಕಡೆ ಬರೀ ಹೆಣ್ಣು ದೆವ್ವವೇ ಕಾಣಸಿಗುತ್ತದೆ?

5. ಲೂದಿಯಾನ ಸಮಾಧಿ
ಇಲ್ಲಿ ಕ್ರಿಶ. 1700ರಲ್ಲಿ ಕ್ರೈಸ್ತ ಧರ್ಮ ಗುರುವನ್ನು ಸಮಾಧಿ ಮಾಡಲಾದ ಸ್ಥಳವಾಗಿದೆ. ಆದರೆ ಇಲ್ಲಿ ಮುಂಡವಿಲ್ಲದ ದೆವ್ವ ಓಡಾಡುತ್ತದೆ ಎಂದು ಹೇಳಾಗುತ್ತದೆ. ಈ ದೆವ್ವ ಹಿಂದೆ ಸೈನಿಕನಾಗಿದ್ದ, ತನ್ನ ಪ್ರೇಯಸಿಯಿಂದ ಮೋಸ ಹೋಗಿ ತನ್ನ ತಲೆಯನ್ನು ಕತ್ತರಿಸಿ ಸತ್ತ. ಅಮಾವಾಸ್ಯೆಯಲ್ಲಿ ಮುಂಡವಿಲ್ಲದ ರುಂಡವನ್ನು ಕಾಣಬಹುದು ಎಂಬ ಗಾಳಿ ಸುದ್ಧಿ ಇದೆ. ಇದು ಎಷ್ಟರ ಮಟ್ಟಿಗೆ ಸರಿ ಅನ್ನುವುದು ಆ ದೇವರಿಗೇ ಗೊತ್ತು?



Click it and Unblock the Notifications