Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ದೆಹಲಿಯಲ್ಲಿಯೂ ಇದೆ ಭೂತ ಸಂಚಾರದ 5 ಸ್ಥಳಗಳು!
ನಮ್ಮ ದೇಶದ ರಾಜಧಾನಿ ದೆಹಲಿ ಬಗ್ಗೆ ಹೇಳಬೇಕೆಂದರೆ ಅನೇಕ ಉತ್ತಮವಾದ ಹಾಗೂ ಅಚ್ಚರಿಯ ವಿಷಯಗಳಿವೆ. ದೇಶದಲ್ಲಿಯೇ ಅತ್ಯುತ್ತಮವಾದ ರಸ್ತೆ ದೆಹಲಿಯಲ್ಲಿದೆ. ಇದು ಆಹಾರ ಪ್ರಿಯರ ಸ್ವರ್ಗವಾಗಿದೆ. ಹೀಗೆ ಅನೇಕ ವಿಷಯಗಳಿವೆ. ಇಲ್ಲಿ ಸ್ವಲ್ಪ ಭಯಾನಕವಾದ ಅನೇಕ ಅಚ್ಚರಿಯ ವಿಷಯಗಳಿವೆ. ಈ ವಿಷಯಗಳು ತುಂಬಾ ಮಂದಿ ಡೆಲ್ಲಿ ನಿವಾಸಿಗಳಿಗೇ ಗೊತ್ತಿರುವುದಿಲ್ಲ!
ದೆಹಲಿ ಪುರಾತನ ನಗರವಾಗಿದೆ. ಮುಘಲ್ ರು, ಬ್ರಿಟಿಷರು ತಮ್ಮ ರಾಜಧಾನಿಯಾಗಿ ದೆಹಲಿಯನ್ನು ಮಾಡಿಕೊಂಡಿದ್ದರು. ದೆಹಲಿಯಲ್ಲಿರುವ ಪೌರಾಣಿಕ ಹೆರಿಟೇಜ್ (ಪಾರಂಪರಿಕ) ಕಟ್ಟಡವೇ ಒಂದು ಭಯಾನಕವಾದ ಸ್ಥಳ ಎಂದು ಹೇಳಲಾಗುತ್ತಿದೆ. ದೆಹಲಿಯ ಕೆಲವೊಂದು ಸ್ಥಳಗಳಲ್ಲಿ ಭೂತ ಇದೆ ಎಂಬ ವದಂತಿಗಳು ಕೂಡ ಕೇಳಿ ಬಂದಿದೆ. ದೆಹಲಿಯಲ್ಲಿ ಭೂತದ ಸಂಚಾರ ಇದೆ ಎಂದು ಜನರು ಅಲ್ಲಿಗೆ ಹೋಗಲು ಭಯಪಡುತ್ತಿರುವ ಆ ಸ್ಥಳಗಳಾವುವು ಎಂದು ನೋಡೋಣ ಬನ್ನಿ:

1. ಡೆಲ್ಲಿ ಕ್ಯಾಂಟ್
ಇದು ದೆಹಲಿಯಲ್ಲಿರುವ ತುಂಬಾ ಸುಂದರವಾದ ಸ್ಥಳವಾಗಿದೆ. ಈ ಸ್ಥಳ ಕುದುರೆ ಸವಾರಿಗೆ ತುಂಬಾ ಚೆನ್ನಾಗಿದೆ. ಅನೇಕ ಜನರು ಇಲ್ಲಿ ಬಿಳಿ ಡ್ರೆಸ್ ನಲ್ಲಿ ಒಂದು ಸ್ತ್ರೀ ದಾರಿ ಮೇಲೆ ನಿಂತು ಲಿಫ್ಟ್ ಕೇಳುತ್ತಾಳೆ. ನಾವು ಲಿಫ್ಟ್ ಕೊಟ್ಟರೆ ಅವಳು ಸ್ವಲ್ಪ ಸಮಯದಲ್ಲಿ ಮಾಯವಾಗುತ್ತಾಳೆ ಎಂದು ಹೇಳಿದ್ದಾರೆ. ಈ ಕತೆಯಿಂದಾಗಿ ಜನರು ಈ ಸ್ಥಳಕ್ಕೆ ಹೋಗಲು ಸ್ವಲ್ಪ ಭಯ ಪಡುತ್ತಾರೆ.

2.ಖೂನಿ ದರ್ವಾಜಾ
ಇದು ದೆಹಲಿಯಲ್ಲಿರುವ ಮೊಘಲ್ ಸ್ಮಾರಕವಾಗಿದೆ. ಬ್ರಿಟಿಷರು ಬಹದೂರ್ ಷಾ ಜಫರ್ ನ 3 ಗಂಡು ಮಕ್ಕಳನ್ನು ಕೊಂದರು. ಈ ಮಕ್ಕಳು ದೆವ್ವವಾಗಿ ಬ್ರಿಟಿಷರ ವಿರುದ್ಧ ಸೇಡು ತೀರಿಸಿಕೊಳ್ಳಲು ಬಾಗಿಲ ಬಳಿ ಕಾಯುತ್ತಿದೆ. ಇಲ್ಲಿಗೆ ಬ್ರಿಟಿಷರು ಹೋದಾರೆ ಏನಾದರೂ ಸಂಭವಿಸುತ್ತದೆ ಎಂಬ ಅಂತೆ-ಕಂತೆಗಳು ಈ ಸ್ಮಾರಕದ ಬಗ್ಗೆ ಕೇಳಿ ಬರುತ್ತದೆ.

3. ಜಮಾಲಿ-ಕಮಾಲಿ ಮಸ್ಜೀದ್
ಇದು ದೆವ್ವಗಳ ಹೆಸರಲ್ಲ. ಇಲ್ಲಿ ಹೆಸರಾಂತ ಇಬ್ಬರು ಸಂತರನ್ನು ಸಮಾಧಿ ಮಾಡಲಾಗಿದೆ. ಆದರೆ ಇಲ್ಲಿ ಭೂತದ ಓಡಾಟ ಇದೆ ಎಂದು ಹೇಳಲಾಗುತ್ತಿದೆ. ಈ ಸ್ಥಳಕ್ಕೆ ಭೇಟಿ ಕೊಟ್ಟರೆ ನಿಮ್ಮನ್ನು ಯಾರೋ ಹಿಡಿದು ಎಳೆದಂತೆ, ಕೆನ್ನೆಗೆ ಬಡೆದಂತೆ ಭಾಸವಾಗುವುದು ಎಂದು ಇಲ್ಲಿಗೆ ಹೋದವರು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ.

4. ಸಂಜಯ್ ವನ
ದೆಹಲಿಯಲ್ಲಿರುವ ಈ ಕಾಡು ಅರಳಿ ಮರಕ್ಕೆ ಪ್ರಸಿದ್ಧಿಯನ್ನು ಪಡೆದಿದೆ. ಈ ಕಾಡಿನಲ್ಲಿ ಬಿಳಿ ವಸ್ತ್ರ ಧರಿಸಿದ ಸ್ತ್ರೀ ಕಾಣ ಸಿಗುತ್ತಾಳೆ, ನೋಡುತ್ತಿದ್ದಂತೆಯೇ ತಕ್ಷಣ ಮಾಯವಾಗುತ್ತಾಳೆ ಎಂದು ಸಾಕಷ್ಟು ಜನರು ಹೇಳಿದ್ದಾರೆ. ಆದರೆ ಅದು ನಿಜವೇ? ಸುಳ್ಳೇ? ಅನ್ನುವುದನ್ನು ಸ್ವ ಅನುಭವದಿಂದ ತಿಳಿದುಬೇಕಷ್ಟೆ. ಯಾಕೆ ಎಲ್ಲಾ ಕಡೆ ಬರೀ ಹೆಣ್ಣು ದೆವ್ವವೇ ಕಾಣಸಿಗುತ್ತದೆ?

5. ಲೂದಿಯಾನ ಸಮಾಧಿ
ಇಲ್ಲಿ ಕ್ರಿಶ. 1700ರಲ್ಲಿ ಕ್ರೈಸ್ತ ಧರ್ಮ ಗುರುವನ್ನು ಸಮಾಧಿ ಮಾಡಲಾದ ಸ್ಥಳವಾಗಿದೆ. ಆದರೆ ಇಲ್ಲಿ ಮುಂಡವಿಲ್ಲದ ದೆವ್ವ ಓಡಾಡುತ್ತದೆ ಎಂದು ಹೇಳಾಗುತ್ತದೆ. ಈ ದೆವ್ವ ಹಿಂದೆ ಸೈನಿಕನಾಗಿದ್ದ, ತನ್ನ ಪ್ರೇಯಸಿಯಿಂದ ಮೋಸ ಹೋಗಿ ತನ್ನ ತಲೆಯನ್ನು ಕತ್ತರಿಸಿ ಸತ್ತ. ಅಮಾವಾಸ್ಯೆಯಲ್ಲಿ ಮುಂಡವಿಲ್ಲದ ರುಂಡವನ್ನು ಕಾಣಬಹುದು ಎಂಬ ಗಾಳಿ ಸುದ್ಧಿ ಇದೆ. ಇದು ಎಷ್ಟರ ಮಟ್ಟಿಗೆ ಸರಿ ಅನ್ನುವುದು ಆ ದೇವರಿಗೇ ಗೊತ್ತು?



Click it and Unblock the Notifications