Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಮಲೇರಿಯಾಕ್ಕೆ ಬಲಿಯಾದ ಪ್ರಮುಖ 5 ವ್ಯಕ್ತಿಗಳು
ಮಲೇರಿಯಾ, ಡೆಂಗ್ಯೂ ಈ ಕಾಯಿಲೆಗಳು ಬಂದರೆ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಹೆಚ್ಚು. ಕಳೆದ ಒಂದು ಶತಕದಿಂದ 150-300 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ. ಮಲೇರಿಯಾ ಕಾಯಿಲೆಗೆ ಸೊಳ್ಳೆಗಳು ಕಾರಣವಾಗಿವೆ. ಅದರಲ್ಲೂ ಹೆಣ್ಣು ಸೊಳ್ಳೆಗಳು ಮಲೇರಿಯಾ ಕಾಯಿಲೆ ಹರಡಲು ಪ್ರಮುಖ ಕಾರಣವಾಗಿವೆ. ಹೆಣ್ಣು ಸೊಳ್ಳೆ 2 ತಿಂಗಳ ಕಾಲ ಬದುಕಿದರೆ, ಗಂಡು ಸೊಳ್ಳೆ 14 ದಿನಗಳ ಕಾಲ ಮಾತ್ರ ಬದುಕುತ್ತದೆ.
ಸೊಳ್ಳೆಗಳು ಕೊಳಚೆ ಪ್ರದೇಶದಲ್ಲಿ ಮೊಟ್ಟೆ ಹಾಕಿ ಮರಿ ಮಾಡುತ್ತವೆ. ಈ ರೀತಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿ ಸಂಜೆ ಹೊತ್ತಿನಲ್ಲಿ ಹೆಚ್ಚಿನ ಚಟುವಟಿಕೆಯಿಂದ ಇರುತ್ತವೆ. ಈ ಸೊಳ್ಳೆ ಮನುಷ್ಯನ್ನು ಕಚ್ಚಿದಾಗ ಮಲೇರಿಯಾ, ಡೆಂಗ್ಯೂ ಎಂಬ ಅಪಾಯಕಾರಿ ಕಾಯಿಲೆಗಳು ಬರುತ್ತವೆ. ಈಗೆಲ್ಲಾ ಈ ಕಾಯಿಲೆಗೆ ಔಷಧಿ ದೊರೆಯುತ್ತಿದ್ದು ಬದುಕಿ ಉಳಿಯುವ ಸಾಧ್ಯತೆ ಇದೆ, ಕೆಲವರಷ್ಟೆ ಸಾವನ್ನಪ್ಪುತ್ತಾರೆ . ಹಿಂದೆ ಈ ಕಾಯಿಲೆಗೆ ಅನೇಕ ಜನರು ಬಲಿಯಾಗಿದ್ದಾರೆ. ಇಲ್ಲಿ ನಾವು ಮಲೇರಿಯಾ ಕಾಯಿಲೆಯಿಂದ ಸಾವನ್ನಪ್ಪಿದ ಪ್ರಮುಖ ವ್ಯಕ್ತಿಗಳ ಬಗ್ಗೆ ಚಿತ್ರ ಮಾಹಿತಿ ನೀಡಿದ್ದೇವೆ ನೋಡಿ:

ಅಲೆಕ್ಸಾಂಡರ್:
ಅಲೆಕ್ಸಾಂಡರ್ ದಿ ಗ್ರೇಟ್ ಎಂದು ಪ್ರಸಿದ್ದವಾಗಿರುವ ಮಸೆಡೊನಿಯದ ಮುಮ್ಮುಡಿ ಅಲೆಕ್ಸಾಂಡರ್ ಗ್ರೀಸ್ ದೇಶದ ಒಬ್ಬ ಮಹಾನ್ ದಂಡನಾಯಕ. ಇವನು ಬಹುದೊಡ್ಡ ಸಾಮ್ರಾಜ್ಯವನ್ನು ನಿರ್ಮಿಸಿದನು. ಅಲೆಕ್ಸಾಂಡರ್ ಸಾಯುವ ಹೊತ್ತಿಗೆ ಸಾಕಷ್ಟು ಪ್ರದೇಶವನ್ನು ವಶಪಡಿಸಿಕೊಂಡಿದ್ದು ಗ್ರೀಸ್ ನಿಂದ ಹಿಮಾಲಿಯದ ತಪ್ಪಲಿನವರೆಗೆ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿಕೊಂಡಿದ್ದನು.

ಕ್ಯಾರಾವಾಗ್ಗಿಯೋ:
ಈತ ಇಟಲಿಯ ಪ್ರಸಿದ್ಧ ಚಿತ್ರಕಾರನಾಗಿದ್ದ. ಈತನ ಚಿತ್ರಗಳು ವಾಸ್ತವಕ್ಕೆ ತುಂಬಾ ಹತ್ತಿರವಾಗಿದ್ದವು. ಬದುಕಿರುವಾಗ ತುಂಬಾ ಪ್ರಸಿದ್ಧಿಯನ್ನು ಪಡೆದಿದ್ದ ಈತ ಮಲೇರಿಯಾ ಕಾಯಿಲೆಯಿಂದ ಸಾವನ್ನಪ್ಪಿದನು.

ಲಾರ್ಡ್ ಬೈರೂನ್ :
ಬೈರೂನ್ ಇಂಗ್ಲೇಂಡ್ ನ ಪ್ರಸಿದ್ಧ ಕವಿಯಾಗಿದ್ದು ಅತೀ ಚಿಕ್ಕ ವಯಸ್ಸಿನಲ್ಲಿ ಮರಣವಪ್ಪಿದನು. ಈತ ಬರೆದ ರೊಮ್ಯಾಂಟಿಕ್ ಕವತೆಗಳು ಇಂದಿಗೂ ಜನಪ್ರಿಯತೆಯನ್ನು ಗಳಿಸಿದ್ದು 1824 ಏಪ್ರಿಲ್ 19 ರಂದು ಮಲೇರಿಯಾದಿಂದ ಇಹಲೋಕವನ್ನು ತ್ಯಜಿಸಿದರು.

ಅಮರೇಶ್ ಪುರಿ:
ಅಮರೇಶ್ ಪುರಿ ಭಾರತೀಯ ನಟ. ಹಿಂದಿ, ಕನ್ನಡ, ಹಾಲಿವುಡ್, ಪಂಜಾಬಿ, ಮಲೆಯಾಳ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಇವರು 2005ರಲ್ಲಿ ಮಲೇರಿಯಾ ಬಂದು ಚಿಕಿತ್ಸೆ ತೆಗೆದುಕೊಳ್ಳುತ್ತಿರುವಾಗ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಾವನ್ನಪ್ಪಿದರು.

ಓಲಿವರ್ ಕ್ರಾಂವೆಲ್:
ಇವರು ಇಂಗ್ಲೀಷ್ ಮಿಲಿಟರಿ ಹಾಗೂ ಬ್ರಿಟನ್ ನ ರಾಜಕೀಯ ನಾಯಕರಾಗಿದ್ದರು. ನಂತರ ಕಾಮನ್ ವೆಲ್ತ್ ಇಂಗ್ಲೇಂಡ್ ನ ಲಾರ್ಡ್ ಪ್ರೊಟೆಕ್ಟರ್ ಆಗಿದ್ದರು. 1658 ಸೆಪ್ಟಂಬರ್ 3 ರಂದು ಮಲೇರಿಯಾ ಕಾಯಿಲೆಯಿಂದ ಮೃತಪಟ್ಟರು.



Click it and Unblock the Notifications











