Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಕೊಡಗಿನಲ್ಲಿಂದು ಹುತ್ತರಿ ಹಬ್ಬದ ಸಡಗರ
ಇಂದು ಕೊಡಗಿನಲ್ಲಿ ಹುತ್ತರಿ/ಪುತ್ತರಿ ಹಬ್ಬ. ಕೊಡವ ಭಾಷೆಯಲ್ಲಿ ‘ಪುದಿಯ ಅರಿ' ಎಂದರೆ ಹೊಸ ಅಕ್ಕಿ ಎಂದರ್ಥ. ಈ ದಿನ ರಾತ್ರಿ ಗದ್ದೆಯಿಂದ ಕದಿರು ತಂದು ಆ ಹೊಸ ಅಕ್ಕಿಯಿಂದ ತಂಬಿಟ್ಟು, ಪಾಯಸವನ್ನು ತಯಾರಿಸಲಾಗುವುದು. ರೋಹಿಣಿ ನಕ್ಷತ್ರವಿರುವ ಹುಣ್ಣಿಮೆಯ ರಾತ್ರಿಯೆಂದು ಈ ಹಬ್ಬವನ್ನು ಆಚರಿಸಲಾಗುವುದು. ಈ ಸಮಯ ಕದಿರು ತರಲು ಸೂಕ್ತ ಕಾಲವೆಂದು ಭಾವಿಸಲಾಗಿದೆ. ಹುಣ್ಣಿಮೆಯಂದು ರೋಹಿಣಿ ನಕ್ಷತ್ರ ಬಾರದಿದ್ದರೆ ಕೃತಿಕೆಯೆಂದು ಈ ಹಬ್ಬವನ್ನು ಆಚರಿಸುತ್ತಾರೆ.
ಕದಿರು ತೆಗೆಯಲು ತೀರ್ಮಾನಿಸಿದ ದಿನ ಮನೆಮಂದಿಯೆಲ್ಲಾ ಗದ್ದೆಗೆ ಬರುತ್ತಾರೆ. ಕೊಡವರಲ್ಲಿ ಐನ್ ಮನೆ ಅಂತ ಇರುತ್ತದೆ. ಕುಟುಂಬದ ಪ್ರತಿ ಸದಸ್ಯನೂ ಈ ಹಬ್ಬದಂದು ಐನ್ ಮನೆಗೆ ಬರಲೇಬೇಕು. ದೂರ ಮೇಯಲು ಬಿಟ್ಟ ದನ-ಕರುಗಳು ಕೂಡ ಮನೆಯಲ್ಲಿರಬೇಕೆಂಬ ಕಟ್ಟಳೆ ಇದೆ.

ಈ ಹಬ್ಬದಲ್ಲಿ ಮೊದಲು ಇಗ್ಗುತ್ತತ್ತಪ್ಪ ದೇವಾಸ್ಥಾನದ ಗದ್ದೆಯಲ್ಲಿ 7.45ಕ್ಕೆ ಪೂಜೆಯನ್ನು ಪ್ರಾರಂಭಿಸುತ್ತಾರೆ. ಈ ಸಮಯಕ್ಕೆ ಮನೆಮಂದಿಯೆಲ್ಲಾ ಸೇರಿಕೊಂಡು ತಮ್ಮ ಗದ್ದೆಗೆ ಬರುತ್ತಾರೆ. ಮನೆಯವರಲ್ಲಿ ಒಬ್ಬ ಒಬ್ಬ ಕುತ್ತಿ ಮತ್ತೊಬ್ಬ ಕೋವಿ ಹಿಡಿದಿರುತ್ತಾನೆ. ಅವರಲ್ಲಿ ಕುತ್ತಿ ತೆಗೆದವನು ಬೆಳೆಯನ್ನು ಪೂಜಿಸಿ "ಪೊಲಿ ಪೊಲಿ ದೇವಾ!" ಎಂದು ಗಟ್ಟಿಯಾಗಿ ಪ್ರಾರ್ಥಿಸುತ್ತಾನೆ. ಆಗ ಕೋವಿಯನ್ನೆತ್ತಿಕೊಂಡವನು ಅದನ್ನು ಆಕಾಶಕ್ಕೆ ಹಿಡಿದು ಗುಂಡು ಹಾರಿಸುವನು. ಆಗ ಗದ್ದೆಯಲ್ಲಿ ನೆರೆದವರೆಲ್ಲರೂ "ಪೊಲಿ ಪೊಲಿ ದೇವಾ!" ಎಂದು ಉಚ್ಚ ಕಂಠದಲ್ಲಿ ಹೇಳುತ್ತಾರೆ.
ಕುತ್ತಿಯವನು ಮೊದಲು ಪೈರನ್ನು ಕತ್ತರಿಸಿ ಪಕ್ಕದಲ್ಲಿರುವವನಿಗೆ ಕೊಡುತ್ತಾನೆ, ನಂತರ ಅಲ್ಲಿ ನೆರೆವರಿಗೆಲ್ಲಾ ಕೊಡುತ್ತಾರೆ. ಈ ಸಮಯದಲ್ಲಿ ಗುಂಡಿನ ಶಬ್ದ, ಪಟಾಕಿ ಶಬ್ದ, ಜನರು 'ಪೊಲಿ ಪೊಲಿ ದೇವಾ' ಎಂದು ಹೇಳುವುದು ಇವುಗಳಿಂದ ಹಬ್ಬದ ಸಡಗರ ಮತ್ತಷ್ಟು ಹೆಚ್ಚಾಗುತ್ತದೆ.
ನಂತರ ಹೊಸ ಅಕ್ಕಿಯ ಕಾಳುಗಳನ್ನು ಬಿಡಿಸಿ ಅದನ್ನು ಅಕ್ಕಿ ಪಾಯಸ ಮಾಡುವಾಗ ಹಾಕಿ ತಯಾರಿಸಲಾಗುವುದ. ಈ ಹಬ್ಬಕ್ಕೆ ಅಕ್ಕಿ ಪಾಯಸ, ತಂಬಿಟ್ಟು ಪ್ರಮುಖವಾದ ಅಡುಗೆಯಾಗಿದೆ. ಈ ಹಬ್ಬದಲ್ಲಿ ಕೆಲವರು ತಂಬಿಟ್ಟನ್ನು ಮನೆಯಿಂದ ಮಾಡಿ ತಂದು ಪಾಯಸವನ್ನು ಗದ್ದೆ ಬದಿಯಲ್ಲಿ ಬೆಂಕಿ ಹಾಕಿ ಪಾಯಸ ಮಾಡಿ ಅಲ್ಲಿದ್ದವರಿಗೆಲ್ಲಾ ಹಂಚುತ್ತಾರೆ.
ನಂತರ ಕಿತ್ತ ಪೈರನ್ನು ತಂದು ಪ್ರತಿಯೊಂದು ಮನೆಯ ಮುಂದೆ ಕಟ್ಟುತ್ತಾರೆ. ಈ ರೀತಿ ಕಟ್ಟಿದರೆ ಮನೆಯ ಐಶ್ವರ್ಯ ಹೆಚ್ಚಾಗುವುದು ಎಂಬ ನಂಬಿಕೆಯಿಂದ ಇಗ್ಗುತ್ತಪ್ಪ ಮತ್ತು ಕಾವೇರಿ ಮಾತೆಯನ್ನು ಪ್ರಾರ್ಥಿಸುತ್ತಾ ಇದನ್ನು ಕಟ್ಟುತ್ತಾರೆ.
ಈ ಹಬ್ಬದಲ್ಲಿ ಪಾಯಸ, ತಂಬಿಟ್ಟು, ಕಜ್ಜಾಯ ಈ ರೀತಿಯ ಅಡುಗೆಯ ಜೊತೆಗೆ ಹುತ್ತರಿ ಗೆಣಸು ಕೂಡ ಇರುತ್ತದೆ. ಈ ಹಬ್ಬದ ನಂತರವೇ ಬೇಳೆ ಕುಯ್ಯುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕುಯ್ದು ಮನೆಗೆ ತರುವ ಸಮಯವಾಯಿತು ಅನ್ನುವ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುವುದು.



Click it and Unblock the Notifications