Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕೊಡಗಿನಲ್ಲಿಂದು ಹುತ್ತರಿ ಹಬ್ಬದ ಸಡಗರ
ಇಂದು ಕೊಡಗಿನಲ್ಲಿ ಹುತ್ತರಿ/ಪುತ್ತರಿ ಹಬ್ಬ. ಕೊಡವ ಭಾಷೆಯಲ್ಲಿ ‘ಪುದಿಯ ಅರಿ' ಎಂದರೆ ಹೊಸ ಅಕ್ಕಿ ಎಂದರ್ಥ. ಈ ದಿನ ರಾತ್ರಿ ಗದ್ದೆಯಿಂದ ಕದಿರು ತಂದು ಆ ಹೊಸ ಅಕ್ಕಿಯಿಂದ ತಂಬಿಟ್ಟು, ಪಾಯಸವನ್ನು ತಯಾರಿಸಲಾಗುವುದು. ರೋಹಿಣಿ ನಕ್ಷತ್ರವಿರುವ ಹುಣ್ಣಿಮೆಯ ರಾತ್ರಿಯೆಂದು ಈ ಹಬ್ಬವನ್ನು ಆಚರಿಸಲಾಗುವುದು. ಈ ಸಮಯ ಕದಿರು ತರಲು ಸೂಕ್ತ ಕಾಲವೆಂದು ಭಾವಿಸಲಾಗಿದೆ. ಹುಣ್ಣಿಮೆಯಂದು ರೋಹಿಣಿ ನಕ್ಷತ್ರ ಬಾರದಿದ್ದರೆ ಕೃತಿಕೆಯೆಂದು ಈ ಹಬ್ಬವನ್ನು ಆಚರಿಸುತ್ತಾರೆ.
ಕದಿರು ತೆಗೆಯಲು ತೀರ್ಮಾನಿಸಿದ ದಿನ ಮನೆಮಂದಿಯೆಲ್ಲಾ ಗದ್ದೆಗೆ ಬರುತ್ತಾರೆ. ಕೊಡವರಲ್ಲಿ ಐನ್ ಮನೆ ಅಂತ ಇರುತ್ತದೆ. ಕುಟುಂಬದ ಪ್ರತಿ ಸದಸ್ಯನೂ ಈ ಹಬ್ಬದಂದು ಐನ್ ಮನೆಗೆ ಬರಲೇಬೇಕು. ದೂರ ಮೇಯಲು ಬಿಟ್ಟ ದನ-ಕರುಗಳು ಕೂಡ ಮನೆಯಲ್ಲಿರಬೇಕೆಂಬ ಕಟ್ಟಳೆ ಇದೆ.

ಈ ಹಬ್ಬದಲ್ಲಿ ಮೊದಲು ಇಗ್ಗುತ್ತತ್ತಪ್ಪ ದೇವಾಸ್ಥಾನದ ಗದ್ದೆಯಲ್ಲಿ 7.45ಕ್ಕೆ ಪೂಜೆಯನ್ನು ಪ್ರಾರಂಭಿಸುತ್ತಾರೆ. ಈ ಸಮಯಕ್ಕೆ ಮನೆಮಂದಿಯೆಲ್ಲಾ ಸೇರಿಕೊಂಡು ತಮ್ಮ ಗದ್ದೆಗೆ ಬರುತ್ತಾರೆ. ಮನೆಯವರಲ್ಲಿ ಒಬ್ಬ ಒಬ್ಬ ಕುತ್ತಿ ಮತ್ತೊಬ್ಬ ಕೋವಿ ಹಿಡಿದಿರುತ್ತಾನೆ. ಅವರಲ್ಲಿ ಕುತ್ತಿ ತೆಗೆದವನು ಬೆಳೆಯನ್ನು ಪೂಜಿಸಿ "ಪೊಲಿ ಪೊಲಿ ದೇವಾ!" ಎಂದು ಗಟ್ಟಿಯಾಗಿ ಪ್ರಾರ್ಥಿಸುತ್ತಾನೆ. ಆಗ ಕೋವಿಯನ್ನೆತ್ತಿಕೊಂಡವನು ಅದನ್ನು ಆಕಾಶಕ್ಕೆ ಹಿಡಿದು ಗುಂಡು ಹಾರಿಸುವನು. ಆಗ ಗದ್ದೆಯಲ್ಲಿ ನೆರೆದವರೆಲ್ಲರೂ "ಪೊಲಿ ಪೊಲಿ ದೇವಾ!" ಎಂದು ಉಚ್ಚ ಕಂಠದಲ್ಲಿ ಹೇಳುತ್ತಾರೆ.
ಕುತ್ತಿಯವನು ಮೊದಲು ಪೈರನ್ನು ಕತ್ತರಿಸಿ ಪಕ್ಕದಲ್ಲಿರುವವನಿಗೆ ಕೊಡುತ್ತಾನೆ, ನಂತರ ಅಲ್ಲಿ ನೆರೆವರಿಗೆಲ್ಲಾ ಕೊಡುತ್ತಾರೆ. ಈ ಸಮಯದಲ್ಲಿ ಗುಂಡಿನ ಶಬ್ದ, ಪಟಾಕಿ ಶಬ್ದ, ಜನರು 'ಪೊಲಿ ಪೊಲಿ ದೇವಾ' ಎಂದು ಹೇಳುವುದು ಇವುಗಳಿಂದ ಹಬ್ಬದ ಸಡಗರ ಮತ್ತಷ್ಟು ಹೆಚ್ಚಾಗುತ್ತದೆ.
ನಂತರ ಹೊಸ ಅಕ್ಕಿಯ ಕಾಳುಗಳನ್ನು ಬಿಡಿಸಿ ಅದನ್ನು ಅಕ್ಕಿ ಪಾಯಸ ಮಾಡುವಾಗ ಹಾಕಿ ತಯಾರಿಸಲಾಗುವುದ. ಈ ಹಬ್ಬಕ್ಕೆ ಅಕ್ಕಿ ಪಾಯಸ, ತಂಬಿಟ್ಟು ಪ್ರಮುಖವಾದ ಅಡುಗೆಯಾಗಿದೆ. ಈ ಹಬ್ಬದಲ್ಲಿ ಕೆಲವರು ತಂಬಿಟ್ಟನ್ನು ಮನೆಯಿಂದ ಮಾಡಿ ತಂದು ಪಾಯಸವನ್ನು ಗದ್ದೆ ಬದಿಯಲ್ಲಿ ಬೆಂಕಿ ಹಾಕಿ ಪಾಯಸ ಮಾಡಿ ಅಲ್ಲಿದ್ದವರಿಗೆಲ್ಲಾ ಹಂಚುತ್ತಾರೆ.
ನಂತರ ಕಿತ್ತ ಪೈರನ್ನು ತಂದು ಪ್ರತಿಯೊಂದು ಮನೆಯ ಮುಂದೆ ಕಟ್ಟುತ್ತಾರೆ. ಈ ರೀತಿ ಕಟ್ಟಿದರೆ ಮನೆಯ ಐಶ್ವರ್ಯ ಹೆಚ್ಚಾಗುವುದು ಎಂಬ ನಂಬಿಕೆಯಿಂದ ಇಗ್ಗುತ್ತಪ್ಪ ಮತ್ತು ಕಾವೇರಿ ಮಾತೆಯನ್ನು ಪ್ರಾರ್ಥಿಸುತ್ತಾ ಇದನ್ನು ಕಟ್ಟುತ್ತಾರೆ.
ಈ ಹಬ್ಬದಲ್ಲಿ ಪಾಯಸ, ತಂಬಿಟ್ಟು, ಕಜ್ಜಾಯ ಈ ರೀತಿಯ ಅಡುಗೆಯ ಜೊತೆಗೆ ಹುತ್ತರಿ ಗೆಣಸು ಕೂಡ ಇರುತ್ತದೆ. ಈ ಹಬ್ಬದ ನಂತರವೇ ಬೇಳೆ ಕುಯ್ಯುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕುಯ್ದು ಮನೆಗೆ ತರುವ ಸಮಯವಾಯಿತು ಅನ್ನುವ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುವುದು.



Click it and Unblock the Notifications
