Latest Updates
-
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ?
ಕೊಡಗಿನಲ್ಲಿಂದು ಹುತ್ತರಿ ಹಬ್ಬದ ಸಡಗರ
ಇಂದು ಕೊಡಗಿನಲ್ಲಿ ಹುತ್ತರಿ/ಪುತ್ತರಿ ಹಬ್ಬ. ಕೊಡವ ಭಾಷೆಯಲ್ಲಿ ‘ಪುದಿಯ ಅರಿ' ಎಂದರೆ ಹೊಸ ಅಕ್ಕಿ ಎಂದರ್ಥ. ಈ ದಿನ ರಾತ್ರಿ ಗದ್ದೆಯಿಂದ ಕದಿರು ತಂದು ಆ ಹೊಸ ಅಕ್ಕಿಯಿಂದ ತಂಬಿಟ್ಟು, ಪಾಯಸವನ್ನು ತಯಾರಿಸಲಾಗುವುದು. ರೋಹಿಣಿ ನಕ್ಷತ್ರವಿರುವ ಹುಣ್ಣಿಮೆಯ ರಾತ್ರಿಯೆಂದು ಈ ಹಬ್ಬವನ್ನು ಆಚರಿಸಲಾಗುವುದು. ಈ ಸಮಯ ಕದಿರು ತರಲು ಸೂಕ್ತ ಕಾಲವೆಂದು ಭಾವಿಸಲಾಗಿದೆ. ಹುಣ್ಣಿಮೆಯಂದು ರೋಹಿಣಿ ನಕ್ಷತ್ರ ಬಾರದಿದ್ದರೆ ಕೃತಿಕೆಯೆಂದು ಈ ಹಬ್ಬವನ್ನು ಆಚರಿಸುತ್ತಾರೆ.
ಕದಿರು ತೆಗೆಯಲು ತೀರ್ಮಾನಿಸಿದ ದಿನ ಮನೆಮಂದಿಯೆಲ್ಲಾ ಗದ್ದೆಗೆ ಬರುತ್ತಾರೆ. ಕೊಡವರಲ್ಲಿ ಐನ್ ಮನೆ ಅಂತ ಇರುತ್ತದೆ. ಕುಟುಂಬದ ಪ್ರತಿ ಸದಸ್ಯನೂ ಈ ಹಬ್ಬದಂದು ಐನ್ ಮನೆಗೆ ಬರಲೇಬೇಕು. ದೂರ ಮೇಯಲು ಬಿಟ್ಟ ದನ-ಕರುಗಳು ಕೂಡ ಮನೆಯಲ್ಲಿರಬೇಕೆಂಬ ಕಟ್ಟಳೆ ಇದೆ.

ಈ ಹಬ್ಬದಲ್ಲಿ ಮೊದಲು ಇಗ್ಗುತ್ತತ್ತಪ್ಪ ದೇವಾಸ್ಥಾನದ ಗದ್ದೆಯಲ್ಲಿ 7.45ಕ್ಕೆ ಪೂಜೆಯನ್ನು ಪ್ರಾರಂಭಿಸುತ್ತಾರೆ. ಈ ಸಮಯಕ್ಕೆ ಮನೆಮಂದಿಯೆಲ್ಲಾ ಸೇರಿಕೊಂಡು ತಮ್ಮ ಗದ್ದೆಗೆ ಬರುತ್ತಾರೆ. ಮನೆಯವರಲ್ಲಿ ಒಬ್ಬ ಒಬ್ಬ ಕುತ್ತಿ ಮತ್ತೊಬ್ಬ ಕೋವಿ ಹಿಡಿದಿರುತ್ತಾನೆ. ಅವರಲ್ಲಿ ಕುತ್ತಿ ತೆಗೆದವನು ಬೆಳೆಯನ್ನು ಪೂಜಿಸಿ "ಪೊಲಿ ಪೊಲಿ ದೇವಾ!" ಎಂದು ಗಟ್ಟಿಯಾಗಿ ಪ್ರಾರ್ಥಿಸುತ್ತಾನೆ. ಆಗ ಕೋವಿಯನ್ನೆತ್ತಿಕೊಂಡವನು ಅದನ್ನು ಆಕಾಶಕ್ಕೆ ಹಿಡಿದು ಗುಂಡು ಹಾರಿಸುವನು. ಆಗ ಗದ್ದೆಯಲ್ಲಿ ನೆರೆದವರೆಲ್ಲರೂ "ಪೊಲಿ ಪೊಲಿ ದೇವಾ!" ಎಂದು ಉಚ್ಚ ಕಂಠದಲ್ಲಿ ಹೇಳುತ್ತಾರೆ.
ಕುತ್ತಿಯವನು ಮೊದಲು ಪೈರನ್ನು ಕತ್ತರಿಸಿ ಪಕ್ಕದಲ್ಲಿರುವವನಿಗೆ ಕೊಡುತ್ತಾನೆ, ನಂತರ ಅಲ್ಲಿ ನೆರೆವರಿಗೆಲ್ಲಾ ಕೊಡುತ್ತಾರೆ. ಈ ಸಮಯದಲ್ಲಿ ಗುಂಡಿನ ಶಬ್ದ, ಪಟಾಕಿ ಶಬ್ದ, ಜನರು 'ಪೊಲಿ ಪೊಲಿ ದೇವಾ' ಎಂದು ಹೇಳುವುದು ಇವುಗಳಿಂದ ಹಬ್ಬದ ಸಡಗರ ಮತ್ತಷ್ಟು ಹೆಚ್ಚಾಗುತ್ತದೆ.
ನಂತರ ಹೊಸ ಅಕ್ಕಿಯ ಕಾಳುಗಳನ್ನು ಬಿಡಿಸಿ ಅದನ್ನು ಅಕ್ಕಿ ಪಾಯಸ ಮಾಡುವಾಗ ಹಾಕಿ ತಯಾರಿಸಲಾಗುವುದ. ಈ ಹಬ್ಬಕ್ಕೆ ಅಕ್ಕಿ ಪಾಯಸ, ತಂಬಿಟ್ಟು ಪ್ರಮುಖವಾದ ಅಡುಗೆಯಾಗಿದೆ. ಈ ಹಬ್ಬದಲ್ಲಿ ಕೆಲವರು ತಂಬಿಟ್ಟನ್ನು ಮನೆಯಿಂದ ಮಾಡಿ ತಂದು ಪಾಯಸವನ್ನು ಗದ್ದೆ ಬದಿಯಲ್ಲಿ ಬೆಂಕಿ ಹಾಕಿ ಪಾಯಸ ಮಾಡಿ ಅಲ್ಲಿದ್ದವರಿಗೆಲ್ಲಾ ಹಂಚುತ್ತಾರೆ.
ನಂತರ ಕಿತ್ತ ಪೈರನ್ನು ತಂದು ಪ್ರತಿಯೊಂದು ಮನೆಯ ಮುಂದೆ ಕಟ್ಟುತ್ತಾರೆ. ಈ ರೀತಿ ಕಟ್ಟಿದರೆ ಮನೆಯ ಐಶ್ವರ್ಯ ಹೆಚ್ಚಾಗುವುದು ಎಂಬ ನಂಬಿಕೆಯಿಂದ ಇಗ್ಗುತ್ತಪ್ಪ ಮತ್ತು ಕಾವೇರಿ ಮಾತೆಯನ್ನು ಪ್ರಾರ್ಥಿಸುತ್ತಾ ಇದನ್ನು ಕಟ್ಟುತ್ತಾರೆ.
ಈ ಹಬ್ಬದಲ್ಲಿ ಪಾಯಸ, ತಂಬಿಟ್ಟು, ಕಜ್ಜಾಯ ಈ ರೀತಿಯ ಅಡುಗೆಯ ಜೊತೆಗೆ ಹುತ್ತರಿ ಗೆಣಸು ಕೂಡ ಇರುತ್ತದೆ. ಈ ಹಬ್ಬದ ನಂತರವೇ ಬೇಳೆ ಕುಯ್ಯುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕುಯ್ದು ಮನೆಗೆ ತರುವ ಸಮಯವಾಯಿತು ಅನ್ನುವ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುವುದು.



Click it and Unblock the Notifications