Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಕೊಡಗಿನಲ್ಲಿಂದು ಹುತ್ತರಿ ಹಬ್ಬದ ಸಡಗರ
ಇಂದು ಕೊಡಗಿನಲ್ಲಿ ಹುತ್ತರಿ/ಪುತ್ತರಿ ಹಬ್ಬ. ಕೊಡವ ಭಾಷೆಯಲ್ಲಿ ‘ಪುದಿಯ ಅರಿ' ಎಂದರೆ ಹೊಸ ಅಕ್ಕಿ ಎಂದರ್ಥ. ಈ ದಿನ ರಾತ್ರಿ ಗದ್ದೆಯಿಂದ ಕದಿರು ತಂದು ಆ ಹೊಸ ಅಕ್ಕಿಯಿಂದ ತಂಬಿಟ್ಟು, ಪಾಯಸವನ್ನು ತಯಾರಿಸಲಾಗುವುದು. ರೋಹಿಣಿ ನಕ್ಷತ್ರವಿರುವ ಹುಣ್ಣಿಮೆಯ ರಾತ್ರಿಯೆಂದು ಈ ಹಬ್ಬವನ್ನು ಆಚರಿಸಲಾಗುವುದು. ಈ ಸಮಯ ಕದಿರು ತರಲು ಸೂಕ್ತ ಕಾಲವೆಂದು ಭಾವಿಸಲಾಗಿದೆ. ಹುಣ್ಣಿಮೆಯಂದು ರೋಹಿಣಿ ನಕ್ಷತ್ರ ಬಾರದಿದ್ದರೆ ಕೃತಿಕೆಯೆಂದು ಈ ಹಬ್ಬವನ್ನು ಆಚರಿಸುತ್ತಾರೆ.
ಕದಿರು ತೆಗೆಯಲು ತೀರ್ಮಾನಿಸಿದ ದಿನ ಮನೆಮಂದಿಯೆಲ್ಲಾ ಗದ್ದೆಗೆ ಬರುತ್ತಾರೆ. ಕೊಡವರಲ್ಲಿ ಐನ್ ಮನೆ ಅಂತ ಇರುತ್ತದೆ. ಕುಟುಂಬದ ಪ್ರತಿ ಸದಸ್ಯನೂ ಈ ಹಬ್ಬದಂದು ಐನ್ ಮನೆಗೆ ಬರಲೇಬೇಕು. ದೂರ ಮೇಯಲು ಬಿಟ್ಟ ದನ-ಕರುಗಳು ಕೂಡ ಮನೆಯಲ್ಲಿರಬೇಕೆಂಬ ಕಟ್ಟಳೆ ಇದೆ.

ಈ ಹಬ್ಬದಲ್ಲಿ ಮೊದಲು ಇಗ್ಗುತ್ತತ್ತಪ್ಪ ದೇವಾಸ್ಥಾನದ ಗದ್ದೆಯಲ್ಲಿ 7.45ಕ್ಕೆ ಪೂಜೆಯನ್ನು ಪ್ರಾರಂಭಿಸುತ್ತಾರೆ. ಈ ಸಮಯಕ್ಕೆ ಮನೆಮಂದಿಯೆಲ್ಲಾ ಸೇರಿಕೊಂಡು ತಮ್ಮ ಗದ್ದೆಗೆ ಬರುತ್ತಾರೆ. ಮನೆಯವರಲ್ಲಿ ಒಬ್ಬ ಒಬ್ಬ ಕುತ್ತಿ ಮತ್ತೊಬ್ಬ ಕೋವಿ ಹಿಡಿದಿರುತ್ತಾನೆ. ಅವರಲ್ಲಿ ಕುತ್ತಿ ತೆಗೆದವನು ಬೆಳೆಯನ್ನು ಪೂಜಿಸಿ "ಪೊಲಿ ಪೊಲಿ ದೇವಾ!" ಎಂದು ಗಟ್ಟಿಯಾಗಿ ಪ್ರಾರ್ಥಿಸುತ್ತಾನೆ. ಆಗ ಕೋವಿಯನ್ನೆತ್ತಿಕೊಂಡವನು ಅದನ್ನು ಆಕಾಶಕ್ಕೆ ಹಿಡಿದು ಗುಂಡು ಹಾರಿಸುವನು. ಆಗ ಗದ್ದೆಯಲ್ಲಿ ನೆರೆದವರೆಲ್ಲರೂ "ಪೊಲಿ ಪೊಲಿ ದೇವಾ!" ಎಂದು ಉಚ್ಚ ಕಂಠದಲ್ಲಿ ಹೇಳುತ್ತಾರೆ.
ಕುತ್ತಿಯವನು ಮೊದಲು ಪೈರನ್ನು ಕತ್ತರಿಸಿ ಪಕ್ಕದಲ್ಲಿರುವವನಿಗೆ ಕೊಡುತ್ತಾನೆ, ನಂತರ ಅಲ್ಲಿ ನೆರೆವರಿಗೆಲ್ಲಾ ಕೊಡುತ್ತಾರೆ. ಈ ಸಮಯದಲ್ಲಿ ಗುಂಡಿನ ಶಬ್ದ, ಪಟಾಕಿ ಶಬ್ದ, ಜನರು 'ಪೊಲಿ ಪೊಲಿ ದೇವಾ' ಎಂದು ಹೇಳುವುದು ಇವುಗಳಿಂದ ಹಬ್ಬದ ಸಡಗರ ಮತ್ತಷ್ಟು ಹೆಚ್ಚಾಗುತ್ತದೆ.
ನಂತರ ಹೊಸ ಅಕ್ಕಿಯ ಕಾಳುಗಳನ್ನು ಬಿಡಿಸಿ ಅದನ್ನು ಅಕ್ಕಿ ಪಾಯಸ ಮಾಡುವಾಗ ಹಾಕಿ ತಯಾರಿಸಲಾಗುವುದ. ಈ ಹಬ್ಬಕ್ಕೆ ಅಕ್ಕಿ ಪಾಯಸ, ತಂಬಿಟ್ಟು ಪ್ರಮುಖವಾದ ಅಡುಗೆಯಾಗಿದೆ. ಈ ಹಬ್ಬದಲ್ಲಿ ಕೆಲವರು ತಂಬಿಟ್ಟನ್ನು ಮನೆಯಿಂದ ಮಾಡಿ ತಂದು ಪಾಯಸವನ್ನು ಗದ್ದೆ ಬದಿಯಲ್ಲಿ ಬೆಂಕಿ ಹಾಕಿ ಪಾಯಸ ಮಾಡಿ ಅಲ್ಲಿದ್ದವರಿಗೆಲ್ಲಾ ಹಂಚುತ್ತಾರೆ.
ನಂತರ ಕಿತ್ತ ಪೈರನ್ನು ತಂದು ಪ್ರತಿಯೊಂದು ಮನೆಯ ಮುಂದೆ ಕಟ್ಟುತ್ತಾರೆ. ಈ ರೀತಿ ಕಟ್ಟಿದರೆ ಮನೆಯ ಐಶ್ವರ್ಯ ಹೆಚ್ಚಾಗುವುದು ಎಂಬ ನಂಬಿಕೆಯಿಂದ ಇಗ್ಗುತ್ತಪ್ಪ ಮತ್ತು ಕಾವೇರಿ ಮಾತೆಯನ್ನು ಪ್ರಾರ್ಥಿಸುತ್ತಾ ಇದನ್ನು ಕಟ್ಟುತ್ತಾರೆ.
ಈ ಹಬ್ಬದಲ್ಲಿ ಪಾಯಸ, ತಂಬಿಟ್ಟು, ಕಜ್ಜಾಯ ಈ ರೀತಿಯ ಅಡುಗೆಯ ಜೊತೆಗೆ ಹುತ್ತರಿ ಗೆಣಸು ಕೂಡ ಇರುತ್ತದೆ. ಈ ಹಬ್ಬದ ನಂತರವೇ ಬೇಳೆ ಕುಯ್ಯುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕುಯ್ದು ಮನೆಗೆ ತರುವ ಸಮಯವಾಯಿತು ಅನ್ನುವ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುವುದು.



Click it and Unblock the Notifications