Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಜನ್ಮಾಷ್ಟಮಿ 2019: ದುಷ್ಟ ಶಿಕ್ಷಕ, ಶಿಷ್ಟ ರಕ್ಷಕ ಗೋಪಾಲ
ಹಿಂದೂಗಳ ಪವಿತ್ರ ಹಬ್ಬ ಕೃಷ್ಣ ಜನ್ಮಾಷ್ಟಮಿ ಈ ಸಾಲಿನಲ್ಲಿ ಶ್ರಾವಣ ಶನಿವಾರ 24ರಂದು ಆಚರಿಸಲಾಗುತ್ತಿದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

ಶ್ರೀ ಕೃಷ್ಣ ನೀ ಬೇಗನೆ ಬಾರೋ
ಜನನವು ನೀನೆ, ಮರಣವು ನೀನೆ, ನನ್ನೆದೆ ಧ್ಯಾನವು ನೀನೆ, ಧ್ಯಾನದ ಪ್ರಣತಿಯು ನಾನೇ
ಬೆಳಗುವೆ ದೀಪ, ತೋರಿಸೋ ರೂಪ, ಎಂದಿಗೆ ಬರುವೆಯೋ ನೀನು, ಎನ್ನುತ ಕಾಯುವೆ ನಾನು
ಗೋಪಾಲ ಗೋಪಿ ಕೃಷ್ಣ, ಮಾಯಾವಿ ಮಾಯ ಕೃಷ್ಣ
ನೀನಿರದೆ ನಾನಿಲ್ಲ, ನೀ ಬರದೆ ಬಾಳಿಲ್ಲ
ಕೇಶವ ಜನಾರ್ಧನ ಬಾ..... ಬೇಗ ಬಾ.....ನೀ ಬೇಗ ಬಾ....
ಕೃಷ್ಣಾ ನೀ ಬೇಗನೆ ಬಾರೋ
ಶ್ರೀ ಕೃಷ್ಣ ನೀ ಬೇಗನೆ ಬಾರೋ
ಎಂದು ಇಂದು ನಾವು ಕೃಷ್ಣ ಜನ್ಮಾಷ್ಣಮಿಯನ್ನು ಕೊಂಡಾಡುತ್ತೇವೆ.
ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ಕೃಷ್ಣ ವಿಷ್ಣುವಿನ ಅವತಾರಗಳಲ್ಲಿ ಒಬ್ಬ. ದೇವಕಿ ಮತ್ತು ವಸುದೇವ ದಂಪತಿಗಳ ಪುತ್ರ. ತನ್ನ ರಾಕ್ಷಸ ಸೋದರಮಾವನಾದ ಕಂಸನನ್ನು ಕೊಲ್ಲಲು ಬಂದ ಅವತಾರ ಪುರುಷ.
ಮಹಾಭಾರತದಲ್ಲಿ ಕಥೆಯಲ್ಲಿ ಪ್ರಮುಖ ಸೂತ್ರಧಾರಿ ಕೃಷ್ಣ. ಕೃಷ್ಣಾವತಾರದ ಕಥೆ ಮಹಾಭಾರತದ ಉದ್ದಕ್ಕೂ ಕಂಡುಬರುತ್ತದೆ. ಕಂಸ, ಶಿಶುಪಾಲ ಮುಂತಾದ ದುಷ್ಟರನ್ನು ಕೊಲ್ಲುವ ಕೃಷ್ಣ, ದ್ರೌಪದಿಯ ವಸ್ತ್ರಾಪಹರಣ ಸಮಯದಲ್ಲಿ ದ್ರೌಪದಿ ಕೃಷ್ಣನನ್ನು ಕೂಗಿದಾಗ ಬಂದು ದ್ರೌಪದಿಯ ಮಾನ ಕಾಪಾಡುತ್ತಾನೆ. ಕೃಷ್ಣ ಮಹಾಭಾರತ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ನಿಂತು ಪಾಂಡವರ ಗೆಲುವಿಗೆ ಕಾರಣವಾಗುತ್ತಾನೆ. ಮಹಾಭಾರತ ಯುದ್ಧದ ಸಂದರ್ಭದಲ್ಲಿ ಯುದ್ಧ ಬೇಡವೆಂದು ನಿರಾಕರಿಸುವ ಅರ್ಜುನನಿಗೆ ಕೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
ಈ ಕೃಷ್ಣ ಜನ್ಮಾಷ್ಟಮಿಯಂದು ದುಷ್ಟರ ಸಂಹಾರ ಮಾಡಿ, ಶಿಷ್ಟರ ರಕ್ಷಣೆ ಮಾಡುವ ಕೃಷ್ಣನನ್ನು ಮತ್ತೊಮ್ಮೆ ಅವತಾರ ಎತ್ತಿ ಬಾ ಕೃಷ್ಣ, ಬಂದು ದುಷ್ಟರ ಸಂಹಾರ ಮಾಡು. ದ್ರೌಪದಿಯಗೆ ಆದಂತೆ ಇವತ್ತಿಗೂ ಅನೇಕ ಅಬಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ ಈ ಅಕ್ರಮಗಳನ್ನು ತಡೆಯಲು ಮತ್ತೊಮ್ಮೆ ಅವತರಿಸು, ದುಷ್ಟರನ್ನು ಸಂಹರಿಸು ಎಂದು ನಾವೆಲ್ಲಾ ಪ್ರಾರ್ಥಿಸೋಣ.
ಆತ್ಮೀಯ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.



Click it and Unblock the Notifications