Latest Updates
-
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ!
ಜನ್ಮಾಷ್ಟಮಿ 2019: ದುಷ್ಟ ಶಿಕ್ಷಕ, ಶಿಷ್ಟ ರಕ್ಷಕ ಗೋಪಾಲ
ಹಿಂದೂಗಳ ಪವಿತ್ರ ಹಬ್ಬ ಕೃಷ್ಣ ಜನ್ಮಾಷ್ಟಮಿ ಈ ಸಾಲಿನಲ್ಲಿ ಶ್ರಾವಣ ಶನಿವಾರ 24ರಂದು ಆಚರಿಸಲಾಗುತ್ತಿದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

ಶ್ರೀ ಕೃಷ್ಣ ನೀ ಬೇಗನೆ ಬಾರೋ
ಜನನವು ನೀನೆ, ಮರಣವು ನೀನೆ, ನನ್ನೆದೆ ಧ್ಯಾನವು ನೀನೆ, ಧ್ಯಾನದ ಪ್ರಣತಿಯು ನಾನೇ
ಬೆಳಗುವೆ ದೀಪ, ತೋರಿಸೋ ರೂಪ, ಎಂದಿಗೆ ಬರುವೆಯೋ ನೀನು, ಎನ್ನುತ ಕಾಯುವೆ ನಾನು
ಗೋಪಾಲ ಗೋಪಿ ಕೃಷ್ಣ, ಮಾಯಾವಿ ಮಾಯ ಕೃಷ್ಣ
ನೀನಿರದೆ ನಾನಿಲ್ಲ, ನೀ ಬರದೆ ಬಾಳಿಲ್ಲ
ಕೇಶವ ಜನಾರ್ಧನ ಬಾ..... ಬೇಗ ಬಾ.....ನೀ ಬೇಗ ಬಾ....
ಕೃಷ್ಣಾ ನೀ ಬೇಗನೆ ಬಾರೋ
ಶ್ರೀ ಕೃಷ್ಣ ನೀ ಬೇಗನೆ ಬಾರೋ
ಎಂದು ಇಂದು ನಾವು ಕೃಷ್ಣ ಜನ್ಮಾಷ್ಣಮಿಯನ್ನು ಕೊಂಡಾಡುತ್ತೇವೆ.
ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ಕೃಷ್ಣ ವಿಷ್ಣುವಿನ ಅವತಾರಗಳಲ್ಲಿ ಒಬ್ಬ. ದೇವಕಿ ಮತ್ತು ವಸುದೇವ ದಂಪತಿಗಳ ಪುತ್ರ. ತನ್ನ ರಾಕ್ಷಸ ಸೋದರಮಾವನಾದ ಕಂಸನನ್ನು ಕೊಲ್ಲಲು ಬಂದ ಅವತಾರ ಪುರುಷ.
ಮಹಾಭಾರತದಲ್ಲಿ ಕಥೆಯಲ್ಲಿ ಪ್ರಮುಖ ಸೂತ್ರಧಾರಿ ಕೃಷ್ಣ. ಕೃಷ್ಣಾವತಾರದ ಕಥೆ ಮಹಾಭಾರತದ ಉದ್ದಕ್ಕೂ ಕಂಡುಬರುತ್ತದೆ. ಕಂಸ, ಶಿಶುಪಾಲ ಮುಂತಾದ ದುಷ್ಟರನ್ನು ಕೊಲ್ಲುವ ಕೃಷ್ಣ, ದ್ರೌಪದಿಯ ವಸ್ತ್ರಾಪಹರಣ ಸಮಯದಲ್ಲಿ ದ್ರೌಪದಿ ಕೃಷ್ಣನನ್ನು ಕೂಗಿದಾಗ ಬಂದು ದ್ರೌಪದಿಯ ಮಾನ ಕಾಪಾಡುತ್ತಾನೆ. ಕೃಷ್ಣ ಮಹಾಭಾರತ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ನಿಂತು ಪಾಂಡವರ ಗೆಲುವಿಗೆ ಕಾರಣವಾಗುತ್ತಾನೆ. ಮಹಾಭಾರತ ಯುದ್ಧದ ಸಂದರ್ಭದಲ್ಲಿ ಯುದ್ಧ ಬೇಡವೆಂದು ನಿರಾಕರಿಸುವ ಅರ್ಜುನನಿಗೆ ಕೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
ಈ ಕೃಷ್ಣ ಜನ್ಮಾಷ್ಟಮಿಯಂದು ದುಷ್ಟರ ಸಂಹಾರ ಮಾಡಿ, ಶಿಷ್ಟರ ರಕ್ಷಣೆ ಮಾಡುವ ಕೃಷ್ಣನನ್ನು ಮತ್ತೊಮ್ಮೆ ಅವತಾರ ಎತ್ತಿ ಬಾ ಕೃಷ್ಣ, ಬಂದು ದುಷ್ಟರ ಸಂಹಾರ ಮಾಡು. ದ್ರೌಪದಿಯಗೆ ಆದಂತೆ ಇವತ್ತಿಗೂ ಅನೇಕ ಅಬಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ ಈ ಅಕ್ರಮಗಳನ್ನು ತಡೆಯಲು ಮತ್ತೊಮ್ಮೆ ಅವತರಿಸು, ದುಷ್ಟರನ್ನು ಸಂಹರಿಸು ಎಂದು ನಾವೆಲ್ಲಾ ಪ್ರಾರ್ಥಿಸೋಣ.
ಆತ್ಮೀಯ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.



Click it and Unblock the Notifications
