Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಜನ್ಮಾಷ್ಟಮಿ 2019: ದುಷ್ಟ ಶಿಕ್ಷಕ, ಶಿಷ್ಟ ರಕ್ಷಕ ಗೋಪಾಲ
ಹಿಂದೂಗಳ ಪವಿತ್ರ ಹಬ್ಬ ಕೃಷ್ಣ ಜನ್ಮಾಷ್ಟಮಿ ಈ ಸಾಲಿನಲ್ಲಿ ಶ್ರಾವಣ ಶನಿವಾರ 24ರಂದು ಆಚರಿಸಲಾಗುತ್ತಿದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

ಶ್ರೀ ಕೃಷ್ಣ ನೀ ಬೇಗನೆ ಬಾರೋ
ಜನನವು ನೀನೆ, ಮರಣವು ನೀನೆ, ನನ್ನೆದೆ ಧ್ಯಾನವು ನೀನೆ, ಧ್ಯಾನದ ಪ್ರಣತಿಯು ನಾನೇ
ಬೆಳಗುವೆ ದೀಪ, ತೋರಿಸೋ ರೂಪ, ಎಂದಿಗೆ ಬರುವೆಯೋ ನೀನು, ಎನ್ನುತ ಕಾಯುವೆ ನಾನು
ಗೋಪಾಲ ಗೋಪಿ ಕೃಷ್ಣ, ಮಾಯಾವಿ ಮಾಯ ಕೃಷ್ಣ
ನೀನಿರದೆ ನಾನಿಲ್ಲ, ನೀ ಬರದೆ ಬಾಳಿಲ್ಲ
ಕೇಶವ ಜನಾರ್ಧನ ಬಾ..... ಬೇಗ ಬಾ.....ನೀ ಬೇಗ ಬಾ....
ಕೃಷ್ಣಾ ನೀ ಬೇಗನೆ ಬಾರೋ
ಶ್ರೀ ಕೃಷ್ಣ ನೀ ಬೇಗನೆ ಬಾರೋ
ಎಂದು ಇಂದು ನಾವು ಕೃಷ್ಣ ಜನ್ಮಾಷ್ಣಮಿಯನ್ನು ಕೊಂಡಾಡುತ್ತೇವೆ.
ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ಕೃಷ್ಣ ವಿಷ್ಣುವಿನ ಅವತಾರಗಳಲ್ಲಿ ಒಬ್ಬ. ದೇವಕಿ ಮತ್ತು ವಸುದೇವ ದಂಪತಿಗಳ ಪುತ್ರ. ತನ್ನ ರಾಕ್ಷಸ ಸೋದರಮಾವನಾದ ಕಂಸನನ್ನು ಕೊಲ್ಲಲು ಬಂದ ಅವತಾರ ಪುರುಷ.
ಮಹಾಭಾರತದಲ್ಲಿ ಕಥೆಯಲ್ಲಿ ಪ್ರಮುಖ ಸೂತ್ರಧಾರಿ ಕೃಷ್ಣ. ಕೃಷ್ಣಾವತಾರದ ಕಥೆ ಮಹಾಭಾರತದ ಉದ್ದಕ್ಕೂ ಕಂಡುಬರುತ್ತದೆ. ಕಂಸ, ಶಿಶುಪಾಲ ಮುಂತಾದ ದುಷ್ಟರನ್ನು ಕೊಲ್ಲುವ ಕೃಷ್ಣ, ದ್ರೌಪದಿಯ ವಸ್ತ್ರಾಪಹರಣ ಸಮಯದಲ್ಲಿ ದ್ರೌಪದಿ ಕೃಷ್ಣನನ್ನು ಕೂಗಿದಾಗ ಬಂದು ದ್ರೌಪದಿಯ ಮಾನ ಕಾಪಾಡುತ್ತಾನೆ. ಕೃಷ್ಣ ಮಹಾಭಾರತ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ನಿಂತು ಪಾಂಡವರ ಗೆಲುವಿಗೆ ಕಾರಣವಾಗುತ್ತಾನೆ. ಮಹಾಭಾರತ ಯುದ್ಧದ ಸಂದರ್ಭದಲ್ಲಿ ಯುದ್ಧ ಬೇಡವೆಂದು ನಿರಾಕರಿಸುವ ಅರ್ಜುನನಿಗೆ ಕೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
ಈ ಕೃಷ್ಣ ಜನ್ಮಾಷ್ಟಮಿಯಂದು ದುಷ್ಟರ ಸಂಹಾರ ಮಾಡಿ, ಶಿಷ್ಟರ ರಕ್ಷಣೆ ಮಾಡುವ ಕೃಷ್ಣನನ್ನು ಮತ್ತೊಮ್ಮೆ ಅವತಾರ ಎತ್ತಿ ಬಾ ಕೃಷ್ಣ, ಬಂದು ದುಷ್ಟರ ಸಂಹಾರ ಮಾಡು. ದ್ರೌಪದಿಯಗೆ ಆದಂತೆ ಇವತ್ತಿಗೂ ಅನೇಕ ಅಬಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ ಈ ಅಕ್ರಮಗಳನ್ನು ತಡೆಯಲು ಮತ್ತೊಮ್ಮೆ ಅವತರಿಸು, ದುಷ್ಟರನ್ನು ಸಂಹರಿಸು ಎಂದು ನಾವೆಲ್ಲಾ ಪ್ರಾರ್ಥಿಸೋಣ.
ಆತ್ಮೀಯ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.



Click it and Unblock the Notifications











