Latest Updates
-
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ!
ಜನ್ಮಾಷ್ಟಮಿ 2019: ದುಷ್ಟ ಶಿಕ್ಷಕ, ಶಿಷ್ಟ ರಕ್ಷಕ ಗೋಪಾಲ
ಹಿಂದೂಗಳ ಪವಿತ್ರ ಹಬ್ಬ ಕೃಷ್ಣ ಜನ್ಮಾಷ್ಟಮಿ ಈ ಸಾಲಿನಲ್ಲಿ ಶ್ರಾವಣ ಶನಿವಾರ 24ರಂದು ಆಚರಿಸಲಾಗುತ್ತಿದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

ಶ್ರೀ ಕೃಷ್ಣ ನೀ ಬೇಗನೆ ಬಾರೋ
ಜನನವು ನೀನೆ, ಮರಣವು ನೀನೆ, ನನ್ನೆದೆ ಧ್ಯಾನವು ನೀನೆ, ಧ್ಯಾನದ ಪ್ರಣತಿಯು ನಾನೇ
ಬೆಳಗುವೆ ದೀಪ, ತೋರಿಸೋ ರೂಪ, ಎಂದಿಗೆ ಬರುವೆಯೋ ನೀನು, ಎನ್ನುತ ಕಾಯುವೆ ನಾನು
ಗೋಪಾಲ ಗೋಪಿ ಕೃಷ್ಣ, ಮಾಯಾವಿ ಮಾಯ ಕೃಷ್ಣ
ನೀನಿರದೆ ನಾನಿಲ್ಲ, ನೀ ಬರದೆ ಬಾಳಿಲ್ಲ
ಕೇಶವ ಜನಾರ್ಧನ ಬಾ..... ಬೇಗ ಬಾ.....ನೀ ಬೇಗ ಬಾ....
ಕೃಷ್ಣಾ ನೀ ಬೇಗನೆ ಬಾರೋ
ಶ್ರೀ ಕೃಷ್ಣ ನೀ ಬೇಗನೆ ಬಾರೋ
ಎಂದು ಇಂದು ನಾವು ಕೃಷ್ಣ ಜನ್ಮಾಷ್ಣಮಿಯನ್ನು ಕೊಂಡಾಡುತ್ತೇವೆ.
ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ಕೃಷ್ಣ ವಿಷ್ಣುವಿನ ಅವತಾರಗಳಲ್ಲಿ ಒಬ್ಬ. ದೇವಕಿ ಮತ್ತು ವಸುದೇವ ದಂಪತಿಗಳ ಪುತ್ರ. ತನ್ನ ರಾಕ್ಷಸ ಸೋದರಮಾವನಾದ ಕಂಸನನ್ನು ಕೊಲ್ಲಲು ಬಂದ ಅವತಾರ ಪುರುಷ.
ಮಹಾಭಾರತದಲ್ಲಿ ಕಥೆಯಲ್ಲಿ ಪ್ರಮುಖ ಸೂತ್ರಧಾರಿ ಕೃಷ್ಣ. ಕೃಷ್ಣಾವತಾರದ ಕಥೆ ಮಹಾಭಾರತದ ಉದ್ದಕ್ಕೂ ಕಂಡುಬರುತ್ತದೆ. ಕಂಸ, ಶಿಶುಪಾಲ ಮುಂತಾದ ದುಷ್ಟರನ್ನು ಕೊಲ್ಲುವ ಕೃಷ್ಣ, ದ್ರೌಪದಿಯ ವಸ್ತ್ರಾಪಹರಣ ಸಮಯದಲ್ಲಿ ದ್ರೌಪದಿ ಕೃಷ್ಣನನ್ನು ಕೂಗಿದಾಗ ಬಂದು ದ್ರೌಪದಿಯ ಮಾನ ಕಾಪಾಡುತ್ತಾನೆ. ಕೃಷ್ಣ ಮಹಾಭಾರತ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ನಿಂತು ಪಾಂಡವರ ಗೆಲುವಿಗೆ ಕಾರಣವಾಗುತ್ತಾನೆ. ಮಹಾಭಾರತ ಯುದ್ಧದ ಸಂದರ್ಭದಲ್ಲಿ ಯುದ್ಧ ಬೇಡವೆಂದು ನಿರಾಕರಿಸುವ ಅರ್ಜುನನಿಗೆ ಕೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
ಈ ಕೃಷ್ಣ ಜನ್ಮಾಷ್ಟಮಿಯಂದು ದುಷ್ಟರ ಸಂಹಾರ ಮಾಡಿ, ಶಿಷ್ಟರ ರಕ್ಷಣೆ ಮಾಡುವ ಕೃಷ್ಣನನ್ನು ಮತ್ತೊಮ್ಮೆ ಅವತಾರ ಎತ್ತಿ ಬಾ ಕೃಷ್ಣ, ಬಂದು ದುಷ್ಟರ ಸಂಹಾರ ಮಾಡು. ದ್ರೌಪದಿಯಗೆ ಆದಂತೆ ಇವತ್ತಿಗೂ ಅನೇಕ ಅಬಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ ಈ ಅಕ್ರಮಗಳನ್ನು ತಡೆಯಲು ಮತ್ತೊಮ್ಮೆ ಅವತರಿಸು, ದುಷ್ಟರನ್ನು ಸಂಹರಿಸು ಎಂದು ನಾವೆಲ್ಲಾ ಪ್ರಾರ್ಥಿಸೋಣ.
ಆತ್ಮೀಯ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.



Click it and Unblock the Notifications