Latest Updates
-
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ!
ಜನ್ಮಾಷ್ಟಮಿ 2019: ದುಷ್ಟ ಶಿಕ್ಷಕ, ಶಿಷ್ಟ ರಕ್ಷಕ ಗೋಪಾಲ
ಹಿಂದೂಗಳ ಪವಿತ್ರ ಹಬ್ಬ ಕೃಷ್ಣ ಜನ್ಮಾಷ್ಟಮಿ ಈ ಸಾಲಿನಲ್ಲಿ ಶ್ರಾವಣ ಶನಿವಾರ 24ರಂದು ಆಚರಿಸಲಾಗುತ್ತಿದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

ಶ್ರೀ ಕೃಷ್ಣ ನೀ ಬೇಗನೆ ಬಾರೋ
ಜನನವು ನೀನೆ, ಮರಣವು ನೀನೆ, ನನ್ನೆದೆ ಧ್ಯಾನವು ನೀನೆ, ಧ್ಯಾನದ ಪ್ರಣತಿಯು ನಾನೇ
ಬೆಳಗುವೆ ದೀಪ, ತೋರಿಸೋ ರೂಪ, ಎಂದಿಗೆ ಬರುವೆಯೋ ನೀನು, ಎನ್ನುತ ಕಾಯುವೆ ನಾನು
ಗೋಪಾಲ ಗೋಪಿ ಕೃಷ್ಣ, ಮಾಯಾವಿ ಮಾಯ ಕೃಷ್ಣ
ನೀನಿರದೆ ನಾನಿಲ್ಲ, ನೀ ಬರದೆ ಬಾಳಿಲ್ಲ
ಕೇಶವ ಜನಾರ್ಧನ ಬಾ..... ಬೇಗ ಬಾ.....ನೀ ಬೇಗ ಬಾ....
ಕೃಷ್ಣಾ ನೀ ಬೇಗನೆ ಬಾರೋ
ಶ್ರೀ ಕೃಷ್ಣ ನೀ ಬೇಗನೆ ಬಾರೋ
ಎಂದು ಇಂದು ನಾವು ಕೃಷ್ಣ ಜನ್ಮಾಷ್ಣಮಿಯನ್ನು ಕೊಂಡಾಡುತ್ತೇವೆ.
ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ಕೃಷ್ಣ ವಿಷ್ಣುವಿನ ಅವತಾರಗಳಲ್ಲಿ ಒಬ್ಬ. ದೇವಕಿ ಮತ್ತು ವಸುದೇವ ದಂಪತಿಗಳ ಪುತ್ರ. ತನ್ನ ರಾಕ್ಷಸ ಸೋದರಮಾವನಾದ ಕಂಸನನ್ನು ಕೊಲ್ಲಲು ಬಂದ ಅವತಾರ ಪುರುಷ.
ಮಹಾಭಾರತದಲ್ಲಿ ಕಥೆಯಲ್ಲಿ ಪ್ರಮುಖ ಸೂತ್ರಧಾರಿ ಕೃಷ್ಣ. ಕೃಷ್ಣಾವತಾರದ ಕಥೆ ಮಹಾಭಾರತದ ಉದ್ದಕ್ಕೂ ಕಂಡುಬರುತ್ತದೆ. ಕಂಸ, ಶಿಶುಪಾಲ ಮುಂತಾದ ದುಷ್ಟರನ್ನು ಕೊಲ್ಲುವ ಕೃಷ್ಣ, ದ್ರೌಪದಿಯ ವಸ್ತ್ರಾಪಹರಣ ಸಮಯದಲ್ಲಿ ದ್ರೌಪದಿ ಕೃಷ್ಣನನ್ನು ಕೂಗಿದಾಗ ಬಂದು ದ್ರೌಪದಿಯ ಮಾನ ಕಾಪಾಡುತ್ತಾನೆ. ಕೃಷ್ಣ ಮಹಾಭಾರತ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ನಿಂತು ಪಾಂಡವರ ಗೆಲುವಿಗೆ ಕಾರಣವಾಗುತ್ತಾನೆ. ಮಹಾಭಾರತ ಯುದ್ಧದ ಸಂದರ್ಭದಲ್ಲಿ ಯುದ್ಧ ಬೇಡವೆಂದು ನಿರಾಕರಿಸುವ ಅರ್ಜುನನಿಗೆ ಕೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
ಈ ಕೃಷ್ಣ ಜನ್ಮಾಷ್ಟಮಿಯಂದು ದುಷ್ಟರ ಸಂಹಾರ ಮಾಡಿ, ಶಿಷ್ಟರ ರಕ್ಷಣೆ ಮಾಡುವ ಕೃಷ್ಣನನ್ನು ಮತ್ತೊಮ್ಮೆ ಅವತಾರ ಎತ್ತಿ ಬಾ ಕೃಷ್ಣ, ಬಂದು ದುಷ್ಟರ ಸಂಹಾರ ಮಾಡು. ದ್ರೌಪದಿಯಗೆ ಆದಂತೆ ಇವತ್ತಿಗೂ ಅನೇಕ ಅಬಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಯುತ್ತಿದೆ ಈ ಅಕ್ರಮಗಳನ್ನು ತಡೆಯಲು ಮತ್ತೊಮ್ಮೆ ಅವತರಿಸು, ದುಷ್ಟರನ್ನು ಸಂಹರಿಸು ಎಂದು ನಾವೆಲ್ಲಾ ಪ್ರಾರ್ಥಿಸೋಣ.
ಆತ್ಮೀಯ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು.



Click it and Unblock the Notifications