Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಂಗಳ ಗೌರಿ ವ್ರತದ ಹಿನ್ನಲೆ

ಮಾರನೇ ದಿನ ಆ ಹುಡುಗ ಮತ್ತೆ ಭಿಕ್ಷೆ ಬೇಡುತ್ತಾ ಬಂದ, ರಾಣಿ ಅವನಿಗೆ ಭಿಕ್ಷೆ ನೀಡಲು ಬಂದಳು. ಆದರೆ ಹುಡುಗ ಅವಳ ಕೈಯಿಂದ ಆ ಭಿಕ್ಷೆ ತೆಗೆದುಕೊಳ್ಳಲಿಲ್ಲ. ಹುಡುಗನ ಆ ವರ್ತನೆ ನೋಡಿ ರಾಜನಿಗೆ ತುಂಬಾ ಕೋಪ ಬರುತ್ತದೆ. ಕೋಪದಿಂದ ಕೇಳುತ್ತಾನೆ ಏಕೆ ನೀನು ಹೀಗೆ ಮಾಡುತ್ತಿದ್ದೀಯ? ಎಂದು ಕೋಪದಿಂದ ಕೇಳುತ್ತಾನೆ. ಅದಕ್ಕೆ ಆ ಹುಡುಗ ನಿಮಗೆ ಮಕ್ಕಳಿಲ್ಲ, ಆದ್ದರಿಂದ ನೀವು ಅದೃಷ್ಟವಂತರಲ್ಲ ಎಂದು ಹೇಳುತ್ತಾನೆ.
ಇದನ್ನು ಕೇಳಿದ ರಾಜ ರಾಣಿಗೆ ಕೋಪ ಮತ್ತು ಬೇಸರವಾಗುತ್ತದೆ. ತುಂಬಾ ಕೋಪದಿಂದ ಹೇಳುತ್ತಾನೆ, "ಅದೃಷ್ಟವಿದೆಯೇ ಅಥವಾ ಇಲ್ಲವೇ ಎಂದು ಶಿವ ನಿರ್ಧರಿಸುತ್ತಾನೆ " ಎಂದು ಹೇಳುತ್ತಾನೆ, ಆ ಹುಡುಗ ಮಾಯವಾಗುತ್ತಾನೆ, ಆಗ ಈ ರಾಜ, ರಾಣಿಗೆ ಆ ಬಾಲಕ ಶಿವ ಅಂತ ಗೊತ್ತಾಗುತ್ತದೆ. ಶಿವನ ಮೇಲೆ ಕೋಪಗೊಂಡಿದ್ದಕ್ಕೆ ಕ್ಷಮೆ ಕೇಳಿ, ಪ್ರಾರ್ಥನೆ ಮಾಡುತ್ತಾರೆ. ಅವರಿಗೆ ಒಂದು ಗಂಡು ಮಗು ಆಗುತ್ತದೆ, ಆಗ ಶಿವ ಪ್ರತ್ಯಕ್ಷವಾಗಿ "ಇವನ ಆಯುಸ್ಸು 16 ವರ್ಷಗಳವರೆಗೆ ಮಾತ್ರ" ಎಂದು ಹೇಳಿ ಮಾಯವಾಗುತ್ತಾನೆ. ಆ ಮಗುವಿಗೆ ಚಂದ್ರ ಶೇಖರ ಎಂದು ಹೆಸರಿಡುತ್ತಾರೆ.
ಚಂದ್ರ ಶೇಖರ ರಾಜಕುಮಾರನಿಗೆ ತನ್ನ ಆಯುಸ್ಸು ಕುರಿತು ತಿಳಿದಿರುತ್ತದೆ. ಇವನು ಕೂಡ ತನಗೆ 15 ವರ್ಷ ಕಳೆದ ಕೂಡಲೇ ಕಾಶಿಗೆ ಹೋಗುತ್ತಾನೆ. ಹೀಗೆ ಕಾಶಿಗೆ ಹೋಗುವಾಗ ದಾರಿ ಮಧ್ಯೆಯಲ್ಲಿ ಒಬ್ಬ ರಾಜಕುಮಾರಿ ತನ್ನ ಸಂಗಡಿಗರ ಜೊತೆ ಕೂತು ಮಾತನಾಡುತ್ತಿರುವುದು ಕಾಣುತ್ತದೆ, ಇವನು ನಡೆದು ಅವಳ ಸಮೀಪ ಹೋದಾಗ "ನಾನು ಗೌರಿಯನ್ನು ಪೂಜೆ ಮಾಡುತ್ತಿದ್ದೇನೆ ಆದ್ದರಿಂದ ನನ್ನ ಮದುವೆಯಾದ ಗಂಡು ತುಂಬಾ ವರ್ಷ ಬದುಕುತ್ತಾನೆ " ಎಂದು ಅವಳು ಹೇಳುವುದು ಕೇಳುತ್ತದೆ.
ಈ ರಾಜಕುಮಾರ ಅವಳನ್ನು ಮದುವೆಯಾಗಲು ತೀರ್ಮಾನಿಸಿ ಅವಳ ತಂದೆಯ ಹತ್ತಿರ ಹೋಗುತ್ತಾನೆ. ಆ ರಾಜಕುಮಾರಿಯ ತಂದೆ ಕಾಯಿಲೆ ಬಿದ್ದಿರುತ್ತಾನೆ, ತನ್ನ ಮಗಳನ್ನು ಕೇಳಿ ಬಂದ ಈ ರಾಜಕುಮಾರನಿಗೆ ತನ್ನ ಮಗಳನ್ನು ಮದುವೆ ಮಾಡಿಕೊಡಲು ಸಂತೋಷದಿಂದ ಒಪ್ಪುತ್ತಾನೆ. ಅವರ ಮದುವೆಯಾಗುತ್ತದೆ, ಅವತ್ತಿಗೆ ಅವನಿಗೆ 16 ವರ್ಷ ತುಂಬುತ್ತದೆ. ಅವನು ತನ್ನ ಕಥೆಯನ್ನು ರಾಜಕುಮಾರಿಗೆ ಹೇಳುತ್ತಾನೆ, ರಾತ್ರಿ ಅವನು ಮಲಗಿದ್ದಾಗ ಅವನ ಬಳಿ ಹಾವು ಬರುತ್ತಿರುವುದು ಕಾಣುತ್ತದೆ, ರಾಜಕುಮಾರಿ ಮಂಗಳ ಗೌರಿಗೆ ಪೂಜೆ ಮಾಡಿದ್ದ ಅಕ್ಕಿಯನ್ನು ಹಾವಿಗೆ ಎರಚುತ್ತಾಳೆ, ಹಾವು ಸತ್ತು ಹೋಗುತ್ತದೆ, ಸತ್ತ ಹಾವನ್ನು ಪೂಜೆಗೆ ಇಟ್ಟ ಕಲಶದಲ್ಲಿ ಹಾಕಿಡುತ್ತಾಳೆ.
ಮಾರನೆ ದಿನ ಬೆಳಗ್ಗೆ ರಾಜಕುಮಾರಿ ಏಳುವ ಮೊದಲು ಚಂದ್ರಶೇಖರ ತನ್ನ ಮದುವೆಯ ಉಂಗುರ ಬಿಚ್ಚಿಟ್ಟು ಕಾಶಿಗೆ ಹೋಗುತ್ತಾನೆ. ರಾಜಕುಮಾರಿಯನ್ನು ಮದುವೆಯಾಗಲು ಬೇರೆ ರಾಜಕುಮಾರರು ಮುಂದೆ ಬರುತ್ತಾರೆ, ಆದರೆ ಅವಳು ಒಪ್ಪುವುದಿಲ್ಲ. ಈ ರಾಜಕುಮಾರ ಕಾಶಿಗೆ ಹೋಗಿ ಒಂದು ವರ್ಷ ಕಳೆದರೂ ಸಾಯುವುದಿಲ್ಲ. ನಂತರ ಮರಳಿ ಬಂದು ರಾಜಕುಮಾರಿ ಜೊತೆ ಸುಖವಾಗಿ, ಸಂತೋಷದಿಂದ ಬಾಳ್ವೆ ನಡೆಸುತ್ತಾನೆ. ಮಂಗಳ ಗೌರಿ ಪೂಜೆ ಮಾಡಿದರೆ ಗಂಡನ ಆಯುಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯಲ್ಲಿ ಈ ವ್ರತ ಮಾಡಲಾಗುವುದು.



Click it and Unblock the Notifications