Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ನಾಗರಪಂಚಮಿ : ಅಚ್ಚ ಕನ್ನಡ ಅಣ್ಣ-ತಂಗಿಯರ ಹಬ್ಬ

ನಾಗರ ಪಂಚಮಿಯ ಹೆಸರೇ ಹೇಳುವಂತೆ ನಾಗನನ್ನು ಪೂಜಿಸುವ ದಿನ. ಪಂಚಮಿಯ ದಿನ ಅಂದರೆ ಶ್ರಾವಣ ಮಾಸದ ಐದನೇ ದಿನ ನಾಗರಕಲ್ಲಿಗೆ, ಹಾವಿನ ಹುತ್ತಕ್ಕೆ ಅಕ್ಕಿ ಹಿಟ್ಟಿನಿಂದ ಮಾಡಿದ ನಾಗರ ಹಾವಿನ ಚಿತ್ರಕ್ಕೆ ಶ್ರದ್ಧಾಭಕ್ತಿಗಳಿಂದ ಹಾಲೆರೆಯಲಾಗುವುದು.
ಈ ಸಮಯದಲ್ಲಿ ಶುದ್ಧ ಸಸ್ಯಾಹಾರ ಅದರಲ್ಲೂ ಸಾತ್ವಿಕ ಆಹಾರಗಳನ್ನು ಮಾಡಿ ತಯಾರಿಸಲಾಗುವುದು. ಈ ಸಮಯದಲ್ಲಿ ಉದ್ದಿನ ಕಡುಬು, ಸಿಹಿ ಕಡುಬು, ತಂಬಿಟ್ಟು ಮುಂತಾದ ಸಾತ್ವಿಕ ಆಹಾರಗಳನ್ನು ತಯಾರಿಸಲಾಗುವುದು. ಸಾತ್ವಿಕ ಅಹಾರವನ್ನು ತಿಂದರೆ ದೇಹದ ಆರೋಗ್ಯ ಹೆಚ್ಚಾಗುವುದು.
ನಾಗರ ಪಂಚಚಮಿಯನ್ನು ಸೋದರರ ಹಬ್ಬ ಎಂದೂ ಕರೆಯಲಾಗುವುದು. ಈ ಸಮಯದಲ್ಲಿ ಸೋದರಿಯು ಸೋದರನಿಗೆ ಹುತ್ತಕ್ಕೆ ಎರೆದ ಹಾಲನ್ನು ತಂದು ಸೋದರನ ಬೆನ್ನಿಗೆ ವೀಳ್ಯದೆಲೆಯಿಂದ 3 ಸಲ ಹಾಲು ಮತ್ತು 3 ಸಲ ನೀರು ಎರಚಿ ತವರು ತಂಪಾಗಿರಲಿ ಎಂದು ಹಾರೈಸಿದರೆ, ಸಹೋದರರು ಪ್ರೀತಿಯ ಅಕ್ಕ ತಂಗಿಯರಿಗೆ ಉಡುಗೊರೆ ಕೊಟ್ಟು ಸಂಭ್ರಮಿಸುತ್ತಾರೆ. ಅಣ್ಣ-ತಂಗಿಯರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿ ಎಂಬುದು ಈ ಹಬ್ಬದ ಆಶಯವಾಗಿದೆ.
ದಕ್ಷಿಣ ಕನ್ನಡದಲ್ಲಿ ಈ ಹಬ್ಬವನ್ನು ನಾಗರ ಪಂಚಮಿ ಎಂದು ಕರೆದರೆ ಉತ್ತರ ಕರ್ನಾಟಕದ ಕಡೆಗೆ ಜೋಕಾಲಿ ಹಬ್ಬವೆಂದೇ ಜನಜನಿತವಾಗಿದೆ. ಈ ಸಂಭ್ರಮದಲ್ಲಿ ಮನೆಯಲ್ಲಿ ಜೋಕಾಲಿ ಕಟ್ಟಿ ಆಡುವುದು ಈ ಕಡೆಯ ವಿಶೇಷ ವಿಶಿಷ್ಟ. ಇಂದು ಪ್ರತಿ ಮನೆಯಲ್ಲಿ ಜೋಕಾಲಿಯನ್ನು ಕಾಣಬಹುದು.
ಈ ಹಬ್ಬಕ್ಕೆ ವಿಶೇಷವಾಗಿ ವಿವಿಧ ರೀತಿಯ ಉಂಡೆಗಳನ್ನು ಮಾಡಲಾಗುವುದು. ಮಕ್ಕಳಿಗೆ ಹೊಸ ಬಟ್ಟೆ ತೊಡಿಸಲಾಗುವುದು. ಶೇಂಗಾ ಉಂಡೆ, ಎಳ್ಳುಂಡೆ, ಕಡಲೆ ಉಂಡೆ, ತಂಬಿಟ್ಟು, ಬೇಳೆ ಕಡುಬು, ಬೂಂದಿ ಉಂಡೆ ಹೀಗೆ ಬಗೆಬಗೆಯ ರುಚಿಕರ ತಿಂಡಿ ತಿನಿಸುಗಳು ತಯಾರಿಸಿ ಸವಿದು ಸಂಭ್ರಮಿಸಲಾಗುವುದು.
ಸಮಸ್ತ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ನಾಗರ ಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications
