Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ನಾಗರಪಂಚಮಿ : ಅಚ್ಚ ಕನ್ನಡ ಅಣ್ಣ-ತಂಗಿಯರ ಹಬ್ಬ

ನಾಗರ ಪಂಚಮಿಯ ಹೆಸರೇ ಹೇಳುವಂತೆ ನಾಗನನ್ನು ಪೂಜಿಸುವ ದಿನ. ಪಂಚಮಿಯ ದಿನ ಅಂದರೆ ಶ್ರಾವಣ ಮಾಸದ ಐದನೇ ದಿನ ನಾಗರಕಲ್ಲಿಗೆ, ಹಾವಿನ ಹುತ್ತಕ್ಕೆ ಅಕ್ಕಿ ಹಿಟ್ಟಿನಿಂದ ಮಾಡಿದ ನಾಗರ ಹಾವಿನ ಚಿತ್ರಕ್ಕೆ ಶ್ರದ್ಧಾಭಕ್ತಿಗಳಿಂದ ಹಾಲೆರೆಯಲಾಗುವುದು.
ಈ ಸಮಯದಲ್ಲಿ ಶುದ್ಧ ಸಸ್ಯಾಹಾರ ಅದರಲ್ಲೂ ಸಾತ್ವಿಕ ಆಹಾರಗಳನ್ನು ಮಾಡಿ ತಯಾರಿಸಲಾಗುವುದು. ಈ ಸಮಯದಲ್ಲಿ ಉದ್ದಿನ ಕಡುಬು, ಸಿಹಿ ಕಡುಬು, ತಂಬಿಟ್ಟು ಮುಂತಾದ ಸಾತ್ವಿಕ ಆಹಾರಗಳನ್ನು ತಯಾರಿಸಲಾಗುವುದು. ಸಾತ್ವಿಕ ಅಹಾರವನ್ನು ತಿಂದರೆ ದೇಹದ ಆರೋಗ್ಯ ಹೆಚ್ಚಾಗುವುದು.
ನಾಗರ ಪಂಚಚಮಿಯನ್ನು ಸೋದರರ ಹಬ್ಬ ಎಂದೂ ಕರೆಯಲಾಗುವುದು. ಈ ಸಮಯದಲ್ಲಿ ಸೋದರಿಯು ಸೋದರನಿಗೆ ಹುತ್ತಕ್ಕೆ ಎರೆದ ಹಾಲನ್ನು ತಂದು ಸೋದರನ ಬೆನ್ನಿಗೆ ವೀಳ್ಯದೆಲೆಯಿಂದ 3 ಸಲ ಹಾಲು ಮತ್ತು 3 ಸಲ ನೀರು ಎರಚಿ ತವರು ತಂಪಾಗಿರಲಿ ಎಂದು ಹಾರೈಸಿದರೆ, ಸಹೋದರರು ಪ್ರೀತಿಯ ಅಕ್ಕ ತಂಗಿಯರಿಗೆ ಉಡುಗೊರೆ ಕೊಟ್ಟು ಸಂಭ್ರಮಿಸುತ್ತಾರೆ. ಅಣ್ಣ-ತಂಗಿಯರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿ ಎಂಬುದು ಈ ಹಬ್ಬದ ಆಶಯವಾಗಿದೆ.
ದಕ್ಷಿಣ ಕನ್ನಡದಲ್ಲಿ ಈ ಹಬ್ಬವನ್ನು ನಾಗರ ಪಂಚಮಿ ಎಂದು ಕರೆದರೆ ಉತ್ತರ ಕರ್ನಾಟಕದ ಕಡೆಗೆ ಜೋಕಾಲಿ ಹಬ್ಬವೆಂದೇ ಜನಜನಿತವಾಗಿದೆ. ಈ ಸಂಭ್ರಮದಲ್ಲಿ ಮನೆಯಲ್ಲಿ ಜೋಕಾಲಿ ಕಟ್ಟಿ ಆಡುವುದು ಈ ಕಡೆಯ ವಿಶೇಷ ವಿಶಿಷ್ಟ. ಇಂದು ಪ್ರತಿ ಮನೆಯಲ್ಲಿ ಜೋಕಾಲಿಯನ್ನು ಕಾಣಬಹುದು.
ಈ ಹಬ್ಬಕ್ಕೆ ವಿಶೇಷವಾಗಿ ವಿವಿಧ ರೀತಿಯ ಉಂಡೆಗಳನ್ನು ಮಾಡಲಾಗುವುದು. ಮಕ್ಕಳಿಗೆ ಹೊಸ ಬಟ್ಟೆ ತೊಡಿಸಲಾಗುವುದು. ಶೇಂಗಾ ಉಂಡೆ, ಎಳ್ಳುಂಡೆ, ಕಡಲೆ ಉಂಡೆ, ತಂಬಿಟ್ಟು, ಬೇಳೆ ಕಡುಬು, ಬೂಂದಿ ಉಂಡೆ ಹೀಗೆ ಬಗೆಬಗೆಯ ರುಚಿಕರ ತಿಂಡಿ ತಿನಿಸುಗಳು ತಯಾರಿಸಿ ಸವಿದು ಸಂಭ್ರಮಿಸಲಾಗುವುದು.
ಸಮಸ್ತ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ನಾಗರ ಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications