Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ನಾಗರಪಂಚಮಿ : ಅಚ್ಚ ಕನ್ನಡ ಅಣ್ಣ-ತಂಗಿಯರ ಹಬ್ಬ

ನಾಗರ ಪಂಚಮಿಯ ಹೆಸರೇ ಹೇಳುವಂತೆ ನಾಗನನ್ನು ಪೂಜಿಸುವ ದಿನ. ಪಂಚಮಿಯ ದಿನ ಅಂದರೆ ಶ್ರಾವಣ ಮಾಸದ ಐದನೇ ದಿನ ನಾಗರಕಲ್ಲಿಗೆ, ಹಾವಿನ ಹುತ್ತಕ್ಕೆ ಅಕ್ಕಿ ಹಿಟ್ಟಿನಿಂದ ಮಾಡಿದ ನಾಗರ ಹಾವಿನ ಚಿತ್ರಕ್ಕೆ ಶ್ರದ್ಧಾಭಕ್ತಿಗಳಿಂದ ಹಾಲೆರೆಯಲಾಗುವುದು.
ಈ ಸಮಯದಲ್ಲಿ ಶುದ್ಧ ಸಸ್ಯಾಹಾರ ಅದರಲ್ಲೂ ಸಾತ್ವಿಕ ಆಹಾರಗಳನ್ನು ಮಾಡಿ ತಯಾರಿಸಲಾಗುವುದು. ಈ ಸಮಯದಲ್ಲಿ ಉದ್ದಿನ ಕಡುಬು, ಸಿಹಿ ಕಡುಬು, ತಂಬಿಟ್ಟು ಮುಂತಾದ ಸಾತ್ವಿಕ ಆಹಾರಗಳನ್ನು ತಯಾರಿಸಲಾಗುವುದು. ಸಾತ್ವಿಕ ಅಹಾರವನ್ನು ತಿಂದರೆ ದೇಹದ ಆರೋಗ್ಯ ಹೆಚ್ಚಾಗುವುದು.
ನಾಗರ ಪಂಚಚಮಿಯನ್ನು ಸೋದರರ ಹಬ್ಬ ಎಂದೂ ಕರೆಯಲಾಗುವುದು. ಈ ಸಮಯದಲ್ಲಿ ಸೋದರಿಯು ಸೋದರನಿಗೆ ಹುತ್ತಕ್ಕೆ ಎರೆದ ಹಾಲನ್ನು ತಂದು ಸೋದರನ ಬೆನ್ನಿಗೆ ವೀಳ್ಯದೆಲೆಯಿಂದ 3 ಸಲ ಹಾಲು ಮತ್ತು 3 ಸಲ ನೀರು ಎರಚಿ ತವರು ತಂಪಾಗಿರಲಿ ಎಂದು ಹಾರೈಸಿದರೆ, ಸಹೋದರರು ಪ್ರೀತಿಯ ಅಕ್ಕ ತಂಗಿಯರಿಗೆ ಉಡುಗೊರೆ ಕೊಟ್ಟು ಸಂಭ್ರಮಿಸುತ್ತಾರೆ. ಅಣ್ಣ-ತಂಗಿಯರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿ ಎಂಬುದು ಈ ಹಬ್ಬದ ಆಶಯವಾಗಿದೆ.
ದಕ್ಷಿಣ ಕನ್ನಡದಲ್ಲಿ ಈ ಹಬ್ಬವನ್ನು ನಾಗರ ಪಂಚಮಿ ಎಂದು ಕರೆದರೆ ಉತ್ತರ ಕರ್ನಾಟಕದ ಕಡೆಗೆ ಜೋಕಾಲಿ ಹಬ್ಬವೆಂದೇ ಜನಜನಿತವಾಗಿದೆ. ಈ ಸಂಭ್ರಮದಲ್ಲಿ ಮನೆಯಲ್ಲಿ ಜೋಕಾಲಿ ಕಟ್ಟಿ ಆಡುವುದು ಈ ಕಡೆಯ ವಿಶೇಷ ವಿಶಿಷ್ಟ. ಇಂದು ಪ್ರತಿ ಮನೆಯಲ್ಲಿ ಜೋಕಾಲಿಯನ್ನು ಕಾಣಬಹುದು.
ಈ ಹಬ್ಬಕ್ಕೆ ವಿಶೇಷವಾಗಿ ವಿವಿಧ ರೀತಿಯ ಉಂಡೆಗಳನ್ನು ಮಾಡಲಾಗುವುದು. ಮಕ್ಕಳಿಗೆ ಹೊಸ ಬಟ್ಟೆ ತೊಡಿಸಲಾಗುವುದು. ಶೇಂಗಾ ಉಂಡೆ, ಎಳ್ಳುಂಡೆ, ಕಡಲೆ ಉಂಡೆ, ತಂಬಿಟ್ಟು, ಬೇಳೆ ಕಡುಬು, ಬೂಂದಿ ಉಂಡೆ ಹೀಗೆ ಬಗೆಬಗೆಯ ರುಚಿಕರ ತಿಂಡಿ ತಿನಿಸುಗಳು ತಯಾರಿಸಿ ಸವಿದು ಸಂಭ್ರಮಿಸಲಾಗುವುದು.
ಸಮಸ್ತ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ನಾಗರ ಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು.



Click it and Unblock the Notifications











