Just In
- 1 hr ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 2 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 15 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 15 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
Don't Miss
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Movies ನಟಿ ಪ್ರೀತಿ ಜಿಂಟಾ ಮದುವೆ ಮುನ್ನವೇ 34 ಮಕ್ಕಳಿಗೆ ತಾಯಿ ಪ್ರೀತಿ ನೀಡಿದ ವಿಷಯ ನಿಮಗೆ ಗೊತ್ತೇ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗರಪಂಚಮಿ : ಅಚ್ಚ ಕನ್ನಡ ಅಣ್ಣ-ತಂಗಿಯರ ಹಬ್ಬ
ನಾಗರ ಪಂಚಮಿಯ ಹೆಸರೇ ಹೇಳುವಂತೆ ನಾಗನನ್ನು ಪೂಜಿಸುವ ದಿನ. ಪಂಚಮಿಯ ದಿನ ಅಂದರೆ ಶ್ರಾವಣ ಮಾಸದ ಐದನೇ ದಿನ ನಾಗರಕಲ್ಲಿಗೆ, ಹಾವಿನ ಹುತ್ತಕ್ಕೆ ಅಕ್ಕಿ ಹಿಟ್ಟಿನಿಂದ ಮಾಡಿದ ನಾಗರ ಹಾವಿನ ಚಿತ್ರಕ್ಕೆ ಶ್ರದ್ಧಾಭಕ್ತಿಗಳಿಂದ ಹಾಲೆರೆಯಲಾಗುವುದು.
ಈ ಸಮಯದಲ್ಲಿ ಶುದ್ಧ ಸಸ್ಯಾಹಾರ ಅದರಲ್ಲೂ ಸಾತ್ವಿಕ ಆಹಾರಗಳನ್ನು ಮಾಡಿ ತಯಾರಿಸಲಾಗುವುದು. ಈ ಸಮಯದಲ್ಲಿ ಉದ್ದಿನ ಕಡುಬು, ಸಿಹಿ ಕಡುಬು, ತಂಬಿಟ್ಟು ಮುಂತಾದ ಸಾತ್ವಿಕ ಆಹಾರಗಳನ್ನು ತಯಾರಿಸಲಾಗುವುದು. ಸಾತ್ವಿಕ ಅಹಾರವನ್ನು ತಿಂದರೆ ದೇಹದ ಆರೋಗ್ಯ ಹೆಚ್ಚಾಗುವುದು.
ನಾಗರ ಪಂಚಚಮಿಯನ್ನು ಸೋದರರ ಹಬ್ಬ ಎಂದೂ ಕರೆಯಲಾಗುವುದು. ಈ ಸಮಯದಲ್ಲಿ ಸೋದರಿಯು ಸೋದರನಿಗೆ ಹುತ್ತಕ್ಕೆ ಎರೆದ ಹಾಲನ್ನು ತಂದು ಸೋದರನ ಬೆನ್ನಿಗೆ ವೀಳ್ಯದೆಲೆಯಿಂದ 3 ಸಲ ಹಾಲು ಮತ್ತು 3 ಸಲ ನೀರು ಎರಚಿ ತವರು ತಂಪಾಗಿರಲಿ ಎಂದು ಹಾರೈಸಿದರೆ, ಸಹೋದರರು ಪ್ರೀತಿಯ ಅಕ್ಕ ತಂಗಿಯರಿಗೆ ಉಡುಗೊರೆ ಕೊಟ್ಟು ಸಂಭ್ರಮಿಸುತ್ತಾರೆ. ಅಣ್ಣ-ತಂಗಿಯರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿ ಎಂಬುದು ಈ ಹಬ್ಬದ ಆಶಯವಾಗಿದೆ.
ದಕ್ಷಿಣ ಕನ್ನಡದಲ್ಲಿ ಈ ಹಬ್ಬವನ್ನು ನಾಗರ ಪಂಚಮಿ ಎಂದು ಕರೆದರೆ ಉತ್ತರ ಕರ್ನಾಟಕದ ಕಡೆಗೆ ಜೋಕಾಲಿ ಹಬ್ಬವೆಂದೇ ಜನಜನಿತವಾಗಿದೆ. ಈ ಸಂಭ್ರಮದಲ್ಲಿ ಮನೆಯಲ್ಲಿ ಜೋಕಾಲಿ ಕಟ್ಟಿ ಆಡುವುದು ಈ ಕಡೆಯ ವಿಶೇಷ ವಿಶಿಷ್ಟ. ಇಂದು ಪ್ರತಿ ಮನೆಯಲ್ಲಿ ಜೋಕಾಲಿಯನ್ನು ಕಾಣಬಹುದು.
ಈ ಹಬ್ಬಕ್ಕೆ ವಿಶೇಷವಾಗಿ ವಿವಿಧ ರೀತಿಯ ಉಂಡೆಗಳನ್ನು ಮಾಡಲಾಗುವುದು. ಮಕ್ಕಳಿಗೆ ಹೊಸ ಬಟ್ಟೆ ತೊಡಿಸಲಾಗುವುದು. ಶೇಂಗಾ ಉಂಡೆ, ಎಳ್ಳುಂಡೆ, ಕಡಲೆ ಉಂಡೆ, ತಂಬಿಟ್ಟು, ಬೇಳೆ ಕಡುಬು, ಬೂಂದಿ ಉಂಡೆ ಹೀಗೆ ಬಗೆಬಗೆಯ ರುಚಿಕರ ತಿಂಡಿ ತಿನಿಸುಗಳು ತಯಾರಿಸಿ ಸವಿದು ಸಂಭ್ರಮಿಸಲಾಗುವುದು.
ಸಮಸ್ತ ಕನ್ನಡ ಬೋಲ್ಡ್ ಸ್ಕೈ ಓದುಗಗರಿಗೆ ನಾಗರ ಪಂಚಮಿ ಹಬ್ಬದ ಹಾರ್ದಿಕ ಶುಭಾಶಯಗಳು.