Latest Updates
-
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ?
ಉಪಾಕರ್ಮ-ಜ್ಞಾನಕ್ಕಾಗಿ ಪ್ರಾರ್ಥಿಸುವ ದಿನ

ಇದನ್ನು ಋಗ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಶ್ರವಣ ನಕ್ಷತ್ರದಂದು ಮಾಡಿದರೆ ಯಜುರ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಹುಣ್ಣಿಮೆಯೆಂದು ಆಚರಿಸಲಾಗುವುದು. ಸಾಮವೇದಿಗಳು ಮಾತ್ರ ಭಾದ್ರಪದ ಮಾಸದ ನಕ್ಷತ್ರದಲ್ಲಿ ಆಚರಿಸುತ್ತಾರೆ.
ಈ ದಿನ ಪೂಜೆ ಮಾಡಿ ಜನಿವಾರವನ್ನು ಧರಿಸಲಾಗುವುದು, ಈ ಜನಿವಾರ ಪ್ರಣವ-ಓಂಕಾರ ಸೂಚಿಸುತ್ತದೆ. ಇದರಲ್ಲಿರುವ 3 ಸೂಕ್ಷ್ಮ ವಾದ ಎಳೆಗಳು ಮೂರು ವೇದಗಳ ಕುರಿತು ಸೂಚಿಸುತ್ತದೆ. ಬ್ರಹ್ಮಚಾರಿಗಳು 3 ಎಳೆಗಳ ಜನಿವಾರ ಧರಿಸದರೆ, ಗೃಹಸ್ಥರು 6 ಎಳೆಗಳ ಜನಿವಾರ ಧರಿಸುತ್ತಾರೆ. ಗೃಹಸ್ಥರು ಧರಿಸುವ ಹೆಚ್ಚಿನ 3 ಎಳೆಗಳು ಭಕ್ತಿ, ಜ್ಞಾನ, ಕರ್ಮಗಳ ಪಾವಿತ್ರ್ಯತೆಯ ಸಂಕೇತವಾಗಿದೆ. ಸಾಧಕರು 9 ಎಳೆಗಳ ಜನಿವಾರ ಧರಿಸುತ್ತಾರೆ, ಅವು ಅವರ ಸಾಧನೆಯ ಸೋಪಾನವಾದ ಸತ್, ಚಿತ್, ಆನಂದ ಎಂಬ ಮೂರು ಸ್ಥತಿಯನ್ನು ಸೂಚಿಸುತ್ತದೆ.
ಈ ದಿನ ಗಾಯತ್ರಿ ಮಂತ್ರಕ್ಕೆ ಹೊಸ ಸಿದ್ಧಿಯನ್ನು ಪಡೆದುಕೊಳ್ಳುವ ಸಂಕಲ್ಪ ಮಾಡಬೇಕು. ಈ ಜಪವನ್ನು ಆವರ್ತನೆಯಂತೆ ವಿದ್ಯೆ, ಸಿದ್ಧಿ, ಸಂತಾನ, ಕೀರ್ತಿ, ಲಾಭ, ಬ್ರಹ್ಮತೇಜಸ್ಸು, ವೈರಾಗ್ಯಗಳನ್ನು ಗಳಿಸಲು ವಿನಿಯೋಗಿಸಬೇಕು ಎಂದ ಹೇಳಲಾಗಿದೆ. ಈ ಮಂತ್ರವನ್ನು ಆತ್ಮಕಲ್ಯಾಣಕ್ಕೂ, ಲೋಕಕಲ್ಯಾಣಕ್ಕೂ ಬಳಸಬಹುದು.
ಈ ದಿನದಂದು ಲೋಕಮಾತೆಯಾಗಿ ಗಾಯತ್ರಿಯನ್ನು ಆರಾಧಿಸಿ, ಜ್ಞಾನವನ್ನು ನೀಡುವಂತೆ ಪ್ರಾರ್ಥಿಸಲಾಗುವುದು. ಇದನ್ನು ಚೌಡೇಶ್ವರಿ ಹುಣ್ಣಿಮೆಯೆಂದು ದೇವಾಂಗ ಜನಾಂಗದವರು ಆಚರಿಸಿದರೆ, ಕರಾವಳಿ ಭಾಗದಲ್ಲಿ ನಾರಿಕೇಳ ಹುಣ್ಣಿಮೆಯಾಗಿ ಆಚರಿಸಲಾಗುವುದು. ಈ ಸಮಯದಲ್ಲಿ ಕೆಲವು ಕಡೆ ಸಮುದ್ರವನ್ನು ಪೂಜಿಸಿ ನಾವೆಯನ್ನು ಇಳಿ ಬಿಡುವ ಪದ್ಧತಿ ಕೂಡ ಇದೆ.



Click it and Unblock the Notifications











