Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಉಪಾಕರ್ಮ-ಜ್ಞಾನಕ್ಕಾಗಿ ಪ್ರಾರ್ಥಿಸುವ ದಿನ

ಇದನ್ನು ಋಗ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಶ್ರವಣ ನಕ್ಷತ್ರದಂದು ಮಾಡಿದರೆ ಯಜುರ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಹುಣ್ಣಿಮೆಯೆಂದು ಆಚರಿಸಲಾಗುವುದು. ಸಾಮವೇದಿಗಳು ಮಾತ್ರ ಭಾದ್ರಪದ ಮಾಸದ ನಕ್ಷತ್ರದಲ್ಲಿ ಆಚರಿಸುತ್ತಾರೆ.
ಈ ದಿನ ಪೂಜೆ ಮಾಡಿ ಜನಿವಾರವನ್ನು ಧರಿಸಲಾಗುವುದು, ಈ ಜನಿವಾರ ಪ್ರಣವ-ಓಂಕಾರ ಸೂಚಿಸುತ್ತದೆ. ಇದರಲ್ಲಿರುವ 3 ಸೂಕ್ಷ್ಮ ವಾದ ಎಳೆಗಳು ಮೂರು ವೇದಗಳ ಕುರಿತು ಸೂಚಿಸುತ್ತದೆ. ಬ್ರಹ್ಮಚಾರಿಗಳು 3 ಎಳೆಗಳ ಜನಿವಾರ ಧರಿಸದರೆ, ಗೃಹಸ್ಥರು 6 ಎಳೆಗಳ ಜನಿವಾರ ಧರಿಸುತ್ತಾರೆ. ಗೃಹಸ್ಥರು ಧರಿಸುವ ಹೆಚ್ಚಿನ 3 ಎಳೆಗಳು ಭಕ್ತಿ, ಜ್ಞಾನ, ಕರ್ಮಗಳ ಪಾವಿತ್ರ್ಯತೆಯ ಸಂಕೇತವಾಗಿದೆ. ಸಾಧಕರು 9 ಎಳೆಗಳ ಜನಿವಾರ ಧರಿಸುತ್ತಾರೆ, ಅವು ಅವರ ಸಾಧನೆಯ ಸೋಪಾನವಾದ ಸತ್, ಚಿತ್, ಆನಂದ ಎಂಬ ಮೂರು ಸ್ಥತಿಯನ್ನು ಸೂಚಿಸುತ್ತದೆ.
ಈ ದಿನ ಗಾಯತ್ರಿ ಮಂತ್ರಕ್ಕೆ ಹೊಸ ಸಿದ್ಧಿಯನ್ನು ಪಡೆದುಕೊಳ್ಳುವ ಸಂಕಲ್ಪ ಮಾಡಬೇಕು. ಈ ಜಪವನ್ನು ಆವರ್ತನೆಯಂತೆ ವಿದ್ಯೆ, ಸಿದ್ಧಿ, ಸಂತಾನ, ಕೀರ್ತಿ, ಲಾಭ, ಬ್ರಹ್ಮತೇಜಸ್ಸು, ವೈರಾಗ್ಯಗಳನ್ನು ಗಳಿಸಲು ವಿನಿಯೋಗಿಸಬೇಕು ಎಂದ ಹೇಳಲಾಗಿದೆ. ಈ ಮಂತ್ರವನ್ನು ಆತ್ಮಕಲ್ಯಾಣಕ್ಕೂ, ಲೋಕಕಲ್ಯಾಣಕ್ಕೂ ಬಳಸಬಹುದು.
ಈ ದಿನದಂದು ಲೋಕಮಾತೆಯಾಗಿ ಗಾಯತ್ರಿಯನ್ನು ಆರಾಧಿಸಿ, ಜ್ಞಾನವನ್ನು ನೀಡುವಂತೆ ಪ್ರಾರ್ಥಿಸಲಾಗುವುದು. ಇದನ್ನು ಚೌಡೇಶ್ವರಿ ಹುಣ್ಣಿಮೆಯೆಂದು ದೇವಾಂಗ ಜನಾಂಗದವರು ಆಚರಿಸಿದರೆ, ಕರಾವಳಿ ಭಾಗದಲ್ಲಿ ನಾರಿಕೇಳ ಹುಣ್ಣಿಮೆಯಾಗಿ ಆಚರಿಸಲಾಗುವುದು. ಈ ಸಮಯದಲ್ಲಿ ಕೆಲವು ಕಡೆ ಸಮುದ್ರವನ್ನು ಪೂಜಿಸಿ ನಾವೆಯನ್ನು ಇಳಿ ಬಿಡುವ ಪದ್ಧತಿ ಕೂಡ ಇದೆ.



Click it and Unblock the Notifications