Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
ಉಪಾಕರ್ಮ-ಜ್ಞಾನಕ್ಕಾಗಿ ಪ್ರಾರ್ಥಿಸುವ ದಿನ

ಇದನ್ನು ಋಗ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಶ್ರವಣ ನಕ್ಷತ್ರದಂದು ಮಾಡಿದರೆ ಯಜುರ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಹುಣ್ಣಿಮೆಯೆಂದು ಆಚರಿಸಲಾಗುವುದು. ಸಾಮವೇದಿಗಳು ಮಾತ್ರ ಭಾದ್ರಪದ ಮಾಸದ ನಕ್ಷತ್ರದಲ್ಲಿ ಆಚರಿಸುತ್ತಾರೆ.
ಈ ದಿನ ಪೂಜೆ ಮಾಡಿ ಜನಿವಾರವನ್ನು ಧರಿಸಲಾಗುವುದು, ಈ ಜನಿವಾರ ಪ್ರಣವ-ಓಂಕಾರ ಸೂಚಿಸುತ್ತದೆ. ಇದರಲ್ಲಿರುವ 3 ಸೂಕ್ಷ್ಮ ವಾದ ಎಳೆಗಳು ಮೂರು ವೇದಗಳ ಕುರಿತು ಸೂಚಿಸುತ್ತದೆ. ಬ್ರಹ್ಮಚಾರಿಗಳು 3 ಎಳೆಗಳ ಜನಿವಾರ ಧರಿಸದರೆ, ಗೃಹಸ್ಥರು 6 ಎಳೆಗಳ ಜನಿವಾರ ಧರಿಸುತ್ತಾರೆ. ಗೃಹಸ್ಥರು ಧರಿಸುವ ಹೆಚ್ಚಿನ 3 ಎಳೆಗಳು ಭಕ್ತಿ, ಜ್ಞಾನ, ಕರ್ಮಗಳ ಪಾವಿತ್ರ್ಯತೆಯ ಸಂಕೇತವಾಗಿದೆ. ಸಾಧಕರು 9 ಎಳೆಗಳ ಜನಿವಾರ ಧರಿಸುತ್ತಾರೆ, ಅವು ಅವರ ಸಾಧನೆಯ ಸೋಪಾನವಾದ ಸತ್, ಚಿತ್, ಆನಂದ ಎಂಬ ಮೂರು ಸ್ಥತಿಯನ್ನು ಸೂಚಿಸುತ್ತದೆ.
ಈ ದಿನ ಗಾಯತ್ರಿ ಮಂತ್ರಕ್ಕೆ ಹೊಸ ಸಿದ್ಧಿಯನ್ನು ಪಡೆದುಕೊಳ್ಳುವ ಸಂಕಲ್ಪ ಮಾಡಬೇಕು. ಈ ಜಪವನ್ನು ಆವರ್ತನೆಯಂತೆ ವಿದ್ಯೆ, ಸಿದ್ಧಿ, ಸಂತಾನ, ಕೀರ್ತಿ, ಲಾಭ, ಬ್ರಹ್ಮತೇಜಸ್ಸು, ವೈರಾಗ್ಯಗಳನ್ನು ಗಳಿಸಲು ವಿನಿಯೋಗಿಸಬೇಕು ಎಂದ ಹೇಳಲಾಗಿದೆ. ಈ ಮಂತ್ರವನ್ನು ಆತ್ಮಕಲ್ಯಾಣಕ್ಕೂ, ಲೋಕಕಲ್ಯಾಣಕ್ಕೂ ಬಳಸಬಹುದು.
ಈ ದಿನದಂದು ಲೋಕಮಾತೆಯಾಗಿ ಗಾಯತ್ರಿಯನ್ನು ಆರಾಧಿಸಿ, ಜ್ಞಾನವನ್ನು ನೀಡುವಂತೆ ಪ್ರಾರ್ಥಿಸಲಾಗುವುದು. ಇದನ್ನು ಚೌಡೇಶ್ವರಿ ಹುಣ್ಣಿಮೆಯೆಂದು ದೇವಾಂಗ ಜನಾಂಗದವರು ಆಚರಿಸಿದರೆ, ಕರಾವಳಿ ಭಾಗದಲ್ಲಿ ನಾರಿಕೇಳ ಹುಣ್ಣಿಮೆಯಾಗಿ ಆಚರಿಸಲಾಗುವುದು. ಈ ಸಮಯದಲ್ಲಿ ಕೆಲವು ಕಡೆ ಸಮುದ್ರವನ್ನು ಪೂಜಿಸಿ ನಾವೆಯನ್ನು ಇಳಿ ಬಿಡುವ ಪದ್ಧತಿ ಕೂಡ ಇದೆ.



Click it and Unblock the Notifications