Latest Updates
-
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ಹೀಟ್ವೇವ್ ಎಚ್ಚರಿಕೆ: ಸುಡುವ ಬಿಸಿಲಿಗೆ ನಿಮ್ಮ ದೇಹ ತಂಪಾಗಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ -
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ!
ಉಪಾಕರ್ಮ-ಜ್ಞಾನಕ್ಕಾಗಿ ಪ್ರಾರ್ಥಿಸುವ ದಿನ

ಇದನ್ನು ಋಗ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಶ್ರವಣ ನಕ್ಷತ್ರದಂದು ಮಾಡಿದರೆ ಯಜುರ್ವೇದವನ್ನು ಆಚರಿಸುವವರು ಶ್ರಾವಣ ಮಾಸದ ಹುಣ್ಣಿಮೆಯೆಂದು ಆಚರಿಸಲಾಗುವುದು. ಸಾಮವೇದಿಗಳು ಮಾತ್ರ ಭಾದ್ರಪದ ಮಾಸದ ನಕ್ಷತ್ರದಲ್ಲಿ ಆಚರಿಸುತ್ತಾರೆ.
ಈ ದಿನ ಪೂಜೆ ಮಾಡಿ ಜನಿವಾರವನ್ನು ಧರಿಸಲಾಗುವುದು, ಈ ಜನಿವಾರ ಪ್ರಣವ-ಓಂಕಾರ ಸೂಚಿಸುತ್ತದೆ. ಇದರಲ್ಲಿರುವ 3 ಸೂಕ್ಷ್ಮ ವಾದ ಎಳೆಗಳು ಮೂರು ವೇದಗಳ ಕುರಿತು ಸೂಚಿಸುತ್ತದೆ. ಬ್ರಹ್ಮಚಾರಿಗಳು 3 ಎಳೆಗಳ ಜನಿವಾರ ಧರಿಸದರೆ, ಗೃಹಸ್ಥರು 6 ಎಳೆಗಳ ಜನಿವಾರ ಧರಿಸುತ್ತಾರೆ. ಗೃಹಸ್ಥರು ಧರಿಸುವ ಹೆಚ್ಚಿನ 3 ಎಳೆಗಳು ಭಕ್ತಿ, ಜ್ಞಾನ, ಕರ್ಮಗಳ ಪಾವಿತ್ರ್ಯತೆಯ ಸಂಕೇತವಾಗಿದೆ. ಸಾಧಕರು 9 ಎಳೆಗಳ ಜನಿವಾರ ಧರಿಸುತ್ತಾರೆ, ಅವು ಅವರ ಸಾಧನೆಯ ಸೋಪಾನವಾದ ಸತ್, ಚಿತ್, ಆನಂದ ಎಂಬ ಮೂರು ಸ್ಥತಿಯನ್ನು ಸೂಚಿಸುತ್ತದೆ.
ಈ ದಿನ ಗಾಯತ್ರಿ ಮಂತ್ರಕ್ಕೆ ಹೊಸ ಸಿದ್ಧಿಯನ್ನು ಪಡೆದುಕೊಳ್ಳುವ ಸಂಕಲ್ಪ ಮಾಡಬೇಕು. ಈ ಜಪವನ್ನು ಆವರ್ತನೆಯಂತೆ ವಿದ್ಯೆ, ಸಿದ್ಧಿ, ಸಂತಾನ, ಕೀರ್ತಿ, ಲಾಭ, ಬ್ರಹ್ಮತೇಜಸ್ಸು, ವೈರಾಗ್ಯಗಳನ್ನು ಗಳಿಸಲು ವಿನಿಯೋಗಿಸಬೇಕು ಎಂದ ಹೇಳಲಾಗಿದೆ. ಈ ಮಂತ್ರವನ್ನು ಆತ್ಮಕಲ್ಯಾಣಕ್ಕೂ, ಲೋಕಕಲ್ಯಾಣಕ್ಕೂ ಬಳಸಬಹುದು.
ಈ ದಿನದಂದು ಲೋಕಮಾತೆಯಾಗಿ ಗಾಯತ್ರಿಯನ್ನು ಆರಾಧಿಸಿ, ಜ್ಞಾನವನ್ನು ನೀಡುವಂತೆ ಪ್ರಾರ್ಥಿಸಲಾಗುವುದು. ಇದನ್ನು ಚೌಡೇಶ್ವರಿ ಹುಣ್ಣಿಮೆಯೆಂದು ದೇವಾಂಗ ಜನಾಂಗದವರು ಆಚರಿಸಿದರೆ, ಕರಾವಳಿ ಭಾಗದಲ್ಲಿ ನಾರಿಕೇಳ ಹುಣ್ಣಿಮೆಯಾಗಿ ಆಚರಿಸಲಾಗುವುದು. ಈ ಸಮಯದಲ್ಲಿ ಕೆಲವು ಕಡೆ ಸಮುದ್ರವನ್ನು ಪೂಜಿಸಿ ನಾವೆಯನ್ನು ಇಳಿ ಬಿಡುವ ಪದ್ಧತಿ ಕೂಡ ಇದೆ.



Click it and Unblock the Notifications











