Latest Updates
-
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ!
ದೇವತೆಗಳು ಸಂಚರಿಸುವ ಈ ವಾಹನಗಳ ಸಂಕೇತವೇನು?
ಹಿಂದೂ ಧರ್ಮದಲ್ಲಿ ಪ್ರಾಣಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಿಂದೂ ಧರ್ಮದಲ್ಲಿ ನಾವು ಹಸುವನ್ನು ಪೂಜಿಸುತ್ತೇವೆ. ಏಕೆಂದರೆ ಹಸುವಿನ ಒಂದೊಂದು ಭಾಗದಲ್ಲಿಯೂ ದೇವತೆಗಳು ನೆಲಿಸಿದ್ದಾರೆ ಎಂಬ ನಂಬಿಕೆಯಿದೆ ಆದ್ದರಿಂದ ಗೋಮಾತೆಯನ್ನು ತಾಯಿಯ ಸಮಾನವಾಗಿ ನೋಡುತ್ತೇವೆ. ಇನ್ನೂ ಪ್ರತಿಯೊಂದು ದೇವಾಲಯಗಳಲ್ಲಿ ಆ ದೇವರಿಗೆ ತುಂಬಾ ಆಪ್ತವಾದ ಪ್ರಾಣಿ-ಪಕ್ಷಿಯ ಶಿಲ್ಪವಿರುತ್ತದೆ. ಉದಾರಣೆಗೆ ಗಣಪನ ಮೂರ್ತಿಯ ಪಕ್ಕ ಮೂಸಿಕ ಇರುತ್ತದೆ, ಶಿವನ ಪಕ್ಕ ನಂದಿ.
ದೇವರು ತಮ್ಮವಾಹನವಾಗಿ ಪ್ರಾಣಿ, ಪ್ಕಷಿಗಳನ್ನು ಬಳಸುತ್ತಿದ್ದರು , ಈ ಕುರಿತಂತೆ ಅನೇಕ ಕಥೆಗಳು ಪುರಾಣದಲ್ಲಿದೆ.
ಇಲ್ಲಿ ನಾವು ಕೆಲವು ಪ್ರಾಣಿ-ಪಕ್ಷಿಗಳ ಬಗ್ಗೆ ಹೇಳಿದ್ದೇವೆ. ಈ ಪ್ರಾಣಿಗಳನ್ನು ದೇವತೆಗಳು ತಮ್ಮ ವಾಹನವಾಗಿ ಬಳಸಿದ್ದಿರ ಹಿಂದಿನ ಸಂಕೇತವೇನು ಎಂದು ನೋಡೋಣ ಬನ್ನಿ:

ಇಲಿ
ಮೂಸಿಕ ಗಣಪನ ವಾಹನವಾಗಿದ್ದು ಶತ್ರುಗಳನ್ನು ನಾಶ ಪಡಿಸುವುದರ ಸಂಕೇತ ಈ ಪ್ರಾಣಿ ಎಂದು ಪುರಾಣದಲ್ಲಿ ಹೇಳಲಾಗಿದೆ.

ನಂದಿ
ಶಿವನ ವಾಹನ ನಂದಿಯಾಗಿದೆ. ಪ್ರತಿಯೊಂದು ಶಿವ ದೇವಾಲಯದಲ್ಲಿ ನಂದಿಯ ಶಿಲ್ಪ ಇರುತ್ತದೆ. ಶಿವ ಹಾಗೂ ನಂದಿಗೆ ಸಂಬಂಧಿಸಿದ ಅನೇಕ ಕಥೆಗಳು ಪುರಾಣದಲ್ಲಿದೆ. ನಂದಿ ಸಂತಾನ ಭಾಗ್ಯದ ಸಂಕೇತವಾಗಿದೆ.

ಹುಲಿ
ಹುಲಿ ದುರ್ಗಾಮಾತೆಯ ಹಾಗೂ ಅಯ್ಯಪ್ಪ ಸ್ವಾಮಿಯ ವಾಹನವಾಗಿದೆ. ದುರ್ಗಾಮಾತೆ ದುಷ್ಟರ ಸಂಹಾರಕ್ಕೆ ಹುಲಿಯ ಮೇಲೆ ಬರುತ್ತಿದ್ದಳು, ಅಯ್ಯಪ್ಪ ಸ್ವಾಮಿ ಹುಲಿಯ ಹಾಲನ್ನು ತನ್ನ ಮಲತಾಯಿಗೆ ಕೊಡಲು ಹುಲಿಯ ಮೇಲೆ ಬಂದ ಎಂಬ ಕಥೆ ಇದೆ. ಹುಲಿ ಕರುಣೆ, ಕೋಪ, ಪ್ರತಿಷ್ಠೆಯ ಸಂಕೇತವಾಗಿದೆ.

ನವಿಲು
ನವಿಲು ಸರಸ್ವತಿ ಹಾಗೂ ಸುಬ್ರಮಣ್ಣಯ ಸ್ವಾಮಿಯ ವಾಹನವಾಗಿದೆ. ನವಿಲು ಬಾಹ್ಯ ಸೌಂದರ್ಯಕ್ಕಿಂತ, ಆಂತರಿಕ ಸೌಂದರ್ಯ ಅವಶ್ಯಕ ಅನ್ನುವುದರ ಸಂಕೇತವಾಗಿದೆ.

ಗೂಬೆ
ಗೂಬೆ ಲಕ್ಷ್ಮಿ ದೇವಿಯ ವಾಹನವಾಗಿದೆ. ಗೂಬೆ ಆಧ್ಯಾತ್ಮಿಕ ಜ್ಞಾನದ ಸಂಕೇತವಾಗಿದೆ. ಗೂಬೆಯ ಕುರುಡತನ ಪ್ರಪಂಚದಲ್ಲಿ ಐಶ್ವರ್ಯದ ಮದದಲ್ಲಿ ಆಧ್ಯಾತ್ಮಿಕ ಜ್ಞಾನವನ್ನು ಮರೆಯಬಾರದು ಅನ್ನುವುದರ ಎಚ್ಚರಿಕೆಯಾಗಿದೆ.

ಹಂಸಾ
ಹಂಸಾ ಬ್ರಹ್ಮಾ ದೇವರ ವಾಹನವಾಗಿದೆ. ಹಂಸಾ ಹಾಲು ಹಾಗೂ ನೀರನ್ನು ಪ್ರತ್ಯೇಕಿಸುವ ಸಾಮರ್ಥ್ಯವಿದೆ. ಇದು ಜ್ಞಾನ ದ ಸಂಕೇತವಾಗಿದೆ.

ಆನೆ
ಆನೆ ಇಂದ್ರನ ವಾಹನವಾಗಿದೆ. ಇದು ಘನತೆ, ಶಕ್ತಿ, ಐಶ್ವರ್ಯ, ಪ್ರತಿಷ್ಠೆಯ ಸಂಕೇತವಾಗಿದೆ.

ಮೊಸಳೆ
ಮೊಸಳೆ ವರುಣಾ ದೇವತೆಯ ವಾಹನವಾಗಿದೆ. ಮೊಸಳೆ ಘನತೆ, ಶಕ್ತಿ, ವೇಗ, ಧೈರ್ಯ, ಮೋಸ ಇವುಗಳ ಸಂಕೇತವಾಗಿದೆ.

ಕುದುರೆ
ಕುದುರೆ ದೇವತೆ ಸೂರ್ಯನ ವಾಹನವಾಗಿದೆ. ಸೂರ್ಯ ಏಳು ಕುದುರೆಗಳಲ್ಲಿ ಸವಾರಿ ಮಾಡುತ್ತಾನೆ. ಕಾಮನ ಬಿಲ್ಲು ಇದರ ಸಂಕೇತವೆಂದು ಹೇಳಲಾಗುತ್ತಿದೆ.



Click it and Unblock the Notifications