Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ದೇವತೆಗಳು ಸಂಚರಿಸುವ ಈ ವಾಹನಗಳ ಸಂಕೇತವೇನು?
ಹಿಂದೂ ಧರ್ಮದಲ್ಲಿ ಪ್ರಾಣಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಿಂದೂ ಧರ್ಮದಲ್ಲಿ ನಾವು ಹಸುವನ್ನು ಪೂಜಿಸುತ್ತೇವೆ. ಏಕೆಂದರೆ ಹಸುವಿನ ಒಂದೊಂದು ಭಾಗದಲ್ಲಿಯೂ ದೇವತೆಗಳು ನೆಲಿಸಿದ್ದಾರೆ ಎಂಬ ನಂಬಿಕೆಯಿದೆ ಆದ್ದರಿಂದ ಗೋಮಾತೆಯನ್ನು ತಾಯಿಯ ಸಮಾನವಾಗಿ ನೋಡುತ್ತೇವೆ. ಇನ್ನೂ ಪ್ರತಿಯೊಂದು ದೇವಾಲಯಗಳಲ್ಲಿ ಆ ದೇವರಿಗೆ ತುಂಬಾ ಆಪ್ತವಾದ ಪ್ರಾಣಿ-ಪಕ್ಷಿಯ ಶಿಲ್ಪವಿರುತ್ತದೆ. ಉದಾರಣೆಗೆ ಗಣಪನ ಮೂರ್ತಿಯ ಪಕ್ಕ ಮೂಸಿಕ ಇರುತ್ತದೆ, ಶಿವನ ಪಕ್ಕ ನಂದಿ.
ದೇವರು ತಮ್ಮವಾಹನವಾಗಿ ಪ್ರಾಣಿ, ಪ್ಕಷಿಗಳನ್ನು ಬಳಸುತ್ತಿದ್ದರು , ಈ ಕುರಿತಂತೆ ಅನೇಕ ಕಥೆಗಳು ಪುರಾಣದಲ್ಲಿದೆ.
ಇಲ್ಲಿ ನಾವು ಕೆಲವು ಪ್ರಾಣಿ-ಪಕ್ಷಿಗಳ ಬಗ್ಗೆ ಹೇಳಿದ್ದೇವೆ. ಈ ಪ್ರಾಣಿಗಳನ್ನು ದೇವತೆಗಳು ತಮ್ಮ ವಾಹನವಾಗಿ ಬಳಸಿದ್ದಿರ ಹಿಂದಿನ ಸಂಕೇತವೇನು ಎಂದು ನೋಡೋಣ ಬನ್ನಿ:

ಇಲಿ
ಮೂಸಿಕ ಗಣಪನ ವಾಹನವಾಗಿದ್ದು ಶತ್ರುಗಳನ್ನು ನಾಶ ಪಡಿಸುವುದರ ಸಂಕೇತ ಈ ಪ್ರಾಣಿ ಎಂದು ಪುರಾಣದಲ್ಲಿ ಹೇಳಲಾಗಿದೆ.

ನಂದಿ
ಶಿವನ ವಾಹನ ನಂದಿಯಾಗಿದೆ. ಪ್ರತಿಯೊಂದು ಶಿವ ದೇವಾಲಯದಲ್ಲಿ ನಂದಿಯ ಶಿಲ್ಪ ಇರುತ್ತದೆ. ಶಿವ ಹಾಗೂ ನಂದಿಗೆ ಸಂಬಂಧಿಸಿದ ಅನೇಕ ಕಥೆಗಳು ಪುರಾಣದಲ್ಲಿದೆ. ನಂದಿ ಸಂತಾನ ಭಾಗ್ಯದ ಸಂಕೇತವಾಗಿದೆ.

ಹುಲಿ
ಹುಲಿ ದುರ್ಗಾಮಾತೆಯ ಹಾಗೂ ಅಯ್ಯಪ್ಪ ಸ್ವಾಮಿಯ ವಾಹನವಾಗಿದೆ. ದುರ್ಗಾಮಾತೆ ದುಷ್ಟರ ಸಂಹಾರಕ್ಕೆ ಹುಲಿಯ ಮೇಲೆ ಬರುತ್ತಿದ್ದಳು, ಅಯ್ಯಪ್ಪ ಸ್ವಾಮಿ ಹುಲಿಯ ಹಾಲನ್ನು ತನ್ನ ಮಲತಾಯಿಗೆ ಕೊಡಲು ಹುಲಿಯ ಮೇಲೆ ಬಂದ ಎಂಬ ಕಥೆ ಇದೆ. ಹುಲಿ ಕರುಣೆ, ಕೋಪ, ಪ್ರತಿಷ್ಠೆಯ ಸಂಕೇತವಾಗಿದೆ.

ನವಿಲು
ನವಿಲು ಸರಸ್ವತಿ ಹಾಗೂ ಸುಬ್ರಮಣ್ಣಯ ಸ್ವಾಮಿಯ ವಾಹನವಾಗಿದೆ. ನವಿಲು ಬಾಹ್ಯ ಸೌಂದರ್ಯಕ್ಕಿಂತ, ಆಂತರಿಕ ಸೌಂದರ್ಯ ಅವಶ್ಯಕ ಅನ್ನುವುದರ ಸಂಕೇತವಾಗಿದೆ.

ಗೂಬೆ
ಗೂಬೆ ಲಕ್ಷ್ಮಿ ದೇವಿಯ ವಾಹನವಾಗಿದೆ. ಗೂಬೆ ಆಧ್ಯಾತ್ಮಿಕ ಜ್ಞಾನದ ಸಂಕೇತವಾಗಿದೆ. ಗೂಬೆಯ ಕುರುಡತನ ಪ್ರಪಂಚದಲ್ಲಿ ಐಶ್ವರ್ಯದ ಮದದಲ್ಲಿ ಆಧ್ಯಾತ್ಮಿಕ ಜ್ಞಾನವನ್ನು ಮರೆಯಬಾರದು ಅನ್ನುವುದರ ಎಚ್ಚರಿಕೆಯಾಗಿದೆ.

ಹಂಸಾ
ಹಂಸಾ ಬ್ರಹ್ಮಾ ದೇವರ ವಾಹನವಾಗಿದೆ. ಹಂಸಾ ಹಾಲು ಹಾಗೂ ನೀರನ್ನು ಪ್ರತ್ಯೇಕಿಸುವ ಸಾಮರ್ಥ್ಯವಿದೆ. ಇದು ಜ್ಞಾನ ದ ಸಂಕೇತವಾಗಿದೆ.

ಆನೆ
ಆನೆ ಇಂದ್ರನ ವಾಹನವಾಗಿದೆ. ಇದು ಘನತೆ, ಶಕ್ತಿ, ಐಶ್ವರ್ಯ, ಪ್ರತಿಷ್ಠೆಯ ಸಂಕೇತವಾಗಿದೆ.

ಮೊಸಳೆ
ಮೊಸಳೆ ವರುಣಾ ದೇವತೆಯ ವಾಹನವಾಗಿದೆ. ಮೊಸಳೆ ಘನತೆ, ಶಕ್ತಿ, ವೇಗ, ಧೈರ್ಯ, ಮೋಸ ಇವುಗಳ ಸಂಕೇತವಾಗಿದೆ.

ಕುದುರೆ
ಕುದುರೆ ದೇವತೆ ಸೂರ್ಯನ ವಾಹನವಾಗಿದೆ. ಸೂರ್ಯ ಏಳು ಕುದುರೆಗಳಲ್ಲಿ ಸವಾರಿ ಮಾಡುತ್ತಾನೆ. ಕಾಮನ ಬಿಲ್ಲು ಇದರ ಸಂಕೇತವೆಂದು ಹೇಳಲಾಗುತ್ತಿದೆ.



Click it and Unblock the Notifications