Latest Updates
-
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ಕುಟುಂಬದೊಂದಿಗೆ ಸಂಭ್ರಮಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಪ್ಲಾನ್! -
ವರ್ಕ್ ಫ್ರಮ್ ಹೋಮ್ ಜೊತೆ ಭಾರತ-ಶ್ರೀಲಂಕಾ ಟೆಸ್ಟ್ ಮ್ಯಾಚ್: ಲೈವ್ ಸ್ಕೋರ್ ಮತ್ತು ಸ್ಮಾರ್ಟ್ ಟಿಪ್ಸ್ ಇಲ್ಲಿದೆ! -
ದೆಹಲಿ ಟಫ್ಮನ್ ಹಾಫ್ ಮ್ಯಾರಥಾನ್: ತೇವಾಂಶದ ನಡುವೆಯೂ ಓಟದಲ್ಲಿ ಮಿಂಚಲು ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರು ರನ್ನಿಂಗ್ ಡೇ: ಮಳೆಗಾಲದಲ್ಲಿ ಓಡುವಾಗ ಈ ತಪ್ಪುಗಳನ್ನು ಮಾಡಬೇಡಿ, ಸುರಕ್ಷಿತವಾಗಿರಿ! -
ಸುಪ್ರೀಂ ಕೋರ್ಟ್ ಲೋಕ್ ಅದಾಲತ್ ದಿನ 2: ನಿಮ್ಮ ಪ್ರಕರಣ ಇತ್ಯರ್ಥವಾಗಲು ಈ ದಾಖಲೆಗಳು ಕಡ್ಡಾಯ! -
ರಕ್ಷಾ ಬಂಧನ 2026: ಹಬ್ಬದ ಸಂಭ್ರಮಕ್ಕೆ ಬಜೆಟ್ ಮತ್ತು ಪ್ಲಾನಿಂಗ್ ಹೀಗಿರಲಿ! -
ಮಳೆಗಾಲದಲ್ಲಿ ಬೆಂಗಳೂರಿನ ಮನೆ ಮತ್ತು ಬಾಲ್ಕನಿ ರಕ್ಷಣೆ: 40 ನಿಮಿಷದ ಸಿಂಪಲ್ ಚೆಕ್ಲಿಸ್ಟ್ -
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ?
ದೇವತೆಗಳು ಸಂಚರಿಸುವ ಈ ವಾಹನಗಳ ಸಂಕೇತವೇನು?
ಹಿಂದೂ ಧರ್ಮದಲ್ಲಿ ಪ್ರಾಣಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಿಂದೂ ಧರ್ಮದಲ್ಲಿ ನಾವು ಹಸುವನ್ನು ಪೂಜಿಸುತ್ತೇವೆ. ಏಕೆಂದರೆ ಹಸುವಿನ ಒಂದೊಂದು ಭಾಗದಲ್ಲಿಯೂ ದೇವತೆಗಳು ನೆಲಿಸಿದ್ದಾರೆ ಎಂಬ ನಂಬಿಕೆಯಿದೆ ಆದ್ದರಿಂದ ಗೋಮಾತೆಯನ್ನು ತಾಯಿಯ ಸಮಾನವಾಗಿ ನೋಡುತ್ತೇವೆ. ಇನ್ನೂ ಪ್ರತಿಯೊಂದು ದೇವಾಲಯಗಳಲ್ಲಿ ಆ ದೇವರಿಗೆ ತುಂಬಾ ಆಪ್ತವಾದ ಪ್ರಾಣಿ-ಪಕ್ಷಿಯ ಶಿಲ್ಪವಿರುತ್ತದೆ. ಉದಾರಣೆಗೆ ಗಣಪನ ಮೂರ್ತಿಯ ಪಕ್ಕ ಮೂಸಿಕ ಇರುತ್ತದೆ, ಶಿವನ ಪಕ್ಕ ನಂದಿ.
ದೇವರು ತಮ್ಮವಾಹನವಾಗಿ ಪ್ರಾಣಿ, ಪ್ಕಷಿಗಳನ್ನು ಬಳಸುತ್ತಿದ್ದರು , ಈ ಕುರಿತಂತೆ ಅನೇಕ ಕಥೆಗಳು ಪುರಾಣದಲ್ಲಿದೆ.
ಇಲ್ಲಿ ನಾವು ಕೆಲವು ಪ್ರಾಣಿ-ಪಕ್ಷಿಗಳ ಬಗ್ಗೆ ಹೇಳಿದ್ದೇವೆ. ಈ ಪ್ರಾಣಿಗಳನ್ನು ದೇವತೆಗಳು ತಮ್ಮ ವಾಹನವಾಗಿ ಬಳಸಿದ್ದಿರ ಹಿಂದಿನ ಸಂಕೇತವೇನು ಎಂದು ನೋಡೋಣ ಬನ್ನಿ:

ಇಲಿ
ಮೂಸಿಕ ಗಣಪನ ವಾಹನವಾಗಿದ್ದು ಶತ್ರುಗಳನ್ನು ನಾಶ ಪಡಿಸುವುದರ ಸಂಕೇತ ಈ ಪ್ರಾಣಿ ಎಂದು ಪುರಾಣದಲ್ಲಿ ಹೇಳಲಾಗಿದೆ.

ನಂದಿ
ಶಿವನ ವಾಹನ ನಂದಿಯಾಗಿದೆ. ಪ್ರತಿಯೊಂದು ಶಿವ ದೇವಾಲಯದಲ್ಲಿ ನಂದಿಯ ಶಿಲ್ಪ ಇರುತ್ತದೆ. ಶಿವ ಹಾಗೂ ನಂದಿಗೆ ಸಂಬಂಧಿಸಿದ ಅನೇಕ ಕಥೆಗಳು ಪುರಾಣದಲ್ಲಿದೆ. ನಂದಿ ಸಂತಾನ ಭಾಗ್ಯದ ಸಂಕೇತವಾಗಿದೆ.

ಹುಲಿ
ಹುಲಿ ದುರ್ಗಾಮಾತೆಯ ಹಾಗೂ ಅಯ್ಯಪ್ಪ ಸ್ವಾಮಿಯ ವಾಹನವಾಗಿದೆ. ದುರ್ಗಾಮಾತೆ ದುಷ್ಟರ ಸಂಹಾರಕ್ಕೆ ಹುಲಿಯ ಮೇಲೆ ಬರುತ್ತಿದ್ದಳು, ಅಯ್ಯಪ್ಪ ಸ್ವಾಮಿ ಹುಲಿಯ ಹಾಲನ್ನು ತನ್ನ ಮಲತಾಯಿಗೆ ಕೊಡಲು ಹುಲಿಯ ಮೇಲೆ ಬಂದ ಎಂಬ ಕಥೆ ಇದೆ. ಹುಲಿ ಕರುಣೆ, ಕೋಪ, ಪ್ರತಿಷ್ಠೆಯ ಸಂಕೇತವಾಗಿದೆ.

ನವಿಲು
ನವಿಲು ಸರಸ್ವತಿ ಹಾಗೂ ಸುಬ್ರಮಣ್ಣಯ ಸ್ವಾಮಿಯ ವಾಹನವಾಗಿದೆ. ನವಿಲು ಬಾಹ್ಯ ಸೌಂದರ್ಯಕ್ಕಿಂತ, ಆಂತರಿಕ ಸೌಂದರ್ಯ ಅವಶ್ಯಕ ಅನ್ನುವುದರ ಸಂಕೇತವಾಗಿದೆ.

ಗೂಬೆ
ಗೂಬೆ ಲಕ್ಷ್ಮಿ ದೇವಿಯ ವಾಹನವಾಗಿದೆ. ಗೂಬೆ ಆಧ್ಯಾತ್ಮಿಕ ಜ್ಞಾನದ ಸಂಕೇತವಾಗಿದೆ. ಗೂಬೆಯ ಕುರುಡತನ ಪ್ರಪಂಚದಲ್ಲಿ ಐಶ್ವರ್ಯದ ಮದದಲ್ಲಿ ಆಧ್ಯಾತ್ಮಿಕ ಜ್ಞಾನವನ್ನು ಮರೆಯಬಾರದು ಅನ್ನುವುದರ ಎಚ್ಚರಿಕೆಯಾಗಿದೆ.

ಹಂಸಾ
ಹಂಸಾ ಬ್ರಹ್ಮಾ ದೇವರ ವಾಹನವಾಗಿದೆ. ಹಂಸಾ ಹಾಲು ಹಾಗೂ ನೀರನ್ನು ಪ್ರತ್ಯೇಕಿಸುವ ಸಾಮರ್ಥ್ಯವಿದೆ. ಇದು ಜ್ಞಾನ ದ ಸಂಕೇತವಾಗಿದೆ.

ಆನೆ
ಆನೆ ಇಂದ್ರನ ವಾಹನವಾಗಿದೆ. ಇದು ಘನತೆ, ಶಕ್ತಿ, ಐಶ್ವರ್ಯ, ಪ್ರತಿಷ್ಠೆಯ ಸಂಕೇತವಾಗಿದೆ.

ಮೊಸಳೆ
ಮೊಸಳೆ ವರುಣಾ ದೇವತೆಯ ವಾಹನವಾಗಿದೆ. ಮೊಸಳೆ ಘನತೆ, ಶಕ್ತಿ, ವೇಗ, ಧೈರ್ಯ, ಮೋಸ ಇವುಗಳ ಸಂಕೇತವಾಗಿದೆ.

ಕುದುರೆ
ಕುದುರೆ ದೇವತೆ ಸೂರ್ಯನ ವಾಹನವಾಗಿದೆ. ಸೂರ್ಯ ಏಳು ಕುದುರೆಗಳಲ್ಲಿ ಸವಾರಿ ಮಾಡುತ್ತಾನೆ. ಕಾಮನ ಬಿಲ್ಲು ಇದರ ಸಂಕೇತವೆಂದು ಹೇಳಲಾಗುತ್ತಿದೆ.



Click it and Unblock the Notifications