Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಹಬ್ಬಗಳಿಗೆ ಮುನ್ನುಡಿಯಾಗಿ ಬರುತ್ತಿರುವ ನಾಗರಪಂಚಮಿ
ಹಬ್ಬಗಳ ಮುನ್ನುಡಿಯಂತೆ ಸಾಲು- ಸಾಲು ಹಬ್ಬಗಳನ್ನು ಹೊತ್ತು ಬರುವ ನಾಗರಪಂಚಮಿಯೆಂದರೆ ಹಿಂದೂಗಳಿಗೆ ಎಲ್ಲಿಲ್ಲದ ಸಂಭ್ರಮ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸುವ ಈ ಹಬ್ಬದಲ್ಲಿ ಸಹೋದರ-ಸಹೋದರಿಯ ಸಂಬಂಧಕ್ಕೂ ಹೆಚ್ಚು ಒತ್ತು ನೀಡಲಾಗುವುದು.
ಮದುವೆಯಾದ ಹೆಣ್ಣು ಮಕ್ಕಳಿಗೆ ತಾಯಿ ಮನೆಗೆ ಹೋಗಿ ತಮ್ಮ ಸಹೋದರನ ಬೆನ್ನಿನ ಮೇಲೆ ತಾಳೆ ಹೂವಿನಿಂದ ಹಾಲು ಚಿಮಿಕಿಸಿ, ಅವನನ್ನು ಹಾರೈಸಿ, ಅವನು ಕೊಟ್ಟ ಉಡುಗೊರೆ ಸ್ವೀಕರಿಸಿ ತನ್ನ ತವರಿನವರ ಜೊತೆ ಸ್ವಲ್ಪ ಸಮಯ ಕಳೆದು ಬರುವ ಸಂಭ್ರಮ. ಮಕ್ಕಳಿಗಂತೂ ಮನೆಯಲ್ಲಿ ಮಾಡುವ ಎಳ್ಳುಂಡೆ, ತಂಬಿಟ್ಟು ಈ ರೀತಿಯ ಸಿಹಿ ತಿಂಡಿಗಳನ್ನು ಸವಿಯುವ ಸಂಭ್ರಮ, ಒಟ್ಟಿನಲ್ಲಿ ಸಂಭ್ರಮ, ಸಡಗರದ ಹಬ್ಬವನ್ನು ಸ್ವಾಗತಿಸಲು ಇಡೀ ನಾಡೇ ಸಿದ್ಧವಾಗಿದೆ.

ನಾಗರ ಹಾವಿನ್ನು ಕಂಡರೆ ಭಯ ಪಡದವರು ತುಂಬಾ ವಿರಳ, ಆದರೆ ಈ ದಿನದಂದು ತಮ್ಮ ಭಯವನ್ನು ಬದಿಗಿರಿಸಿ, ನಾಗ ರಾಜನಿಗೆ ಭಯ, ಭಕ್ತಿಯಿಂದ ಹಾಲು ಎರೆದರೆ ನಮಗೆ ಏನೂ ಕೆಡಕು ಮಾಡುವುದಿಲ್ಲ, ನಮ್ಮನ್ನು ಹಾರೈಸುತ್ತಾನೆ ಎಂಬ ನಂಬಿಕೆಯೇ ಧೈರ್ಯವಾಗಿ ಮಾರ್ಪಟ್ಟು ಹಾವಿನ ಹುತ್ತಕ್ಕೆ ಹಾಲು ಎರೆದು ಬರುತ್ತಾರೆ! ಊರಿನಲ್ಲಿರುವ ನಾಗರ ಹಾವಿನ ಮೂರ್ತಿಗಳಿಗೂ ಹಾಲಿನ ಅಭಿಷೇಕ ಮಾಡಿಸಲಾಗುವುದು.
ನಾಗದೋಷವಿದ್ದರೆ ಕೆಡಕು ಉಂಟಾಗುತ್ತದೆ ಎಂಬ ನಂಬಿಕೆ ಇರುವವರಿಗೆ ತಮ್ಮ ನಾಗದೋಷ ಪರಿಹಾರಕ್ಕೆ ಇಂದು ಸುದಿನ. ತಾವು ನಾಗದೋಷದಿಂದ ಮುಕ್ತರಾಗಲು ಈ ದಿನ ನಾಗಪೂಜೆ ಮಾಡಿಸುತ್ತಾರೆ. ವಾಸುಕಿ, ತಕ್ಷಕ, ಕಾಲಿಯ, ಮಣಿಭದ್ರಕ, ಐರಾವತ, ಧೃತರಾಷ್ಟ್ರ, ಕಾರ್ಕೋಟಕ ಮತ್ತು ಧನಂಜಯ ಎಂಬ ನಾಗದೇವತೆಗಳಿಗೆ ಈ ದಿನ ವಿಶೇಷ ಪೂಜೆ ಸಲ್ಲಿಸಲಾಗುವುದು.
ನಾಗರ ಪಂಚಮಿಯೆಂದು ನಮ್ಮದೊಂದು ಕೋರಿಕೆ
ನಾಗರ ಹಾವಿಗೆ ಹಾಲೆರೆದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿಂದ ಪೂಜಿಸುವ ನಾವು, ನಿಜವಾದ ನಾಗರಾಜ ಕಾಣಿಸಿದಾಗ ಭಯಬಿದ್ದು ಅದನ್ನು ಸಾಯಿಸುವ ನಿರ್ಧಾರಕ್ಕೆ ಬರಬಾರದು, ನಾವು ಭಯಬಿದ್ದು ಕಿರುಚಾಡಲು ಪ್ರಾರಂಭಿಸಿದರೆ ಹಾವು ಕೂಡ ಭಯಬಿದ್ದು ನಮ್ಮತ್ತ ಹರಿದು ಬರಬಹುದು, ಆದ್ದರಿಂದ ಹಾವು ಕಾಣಿಸಿದರೆ ಅದನ್ನು ಕೊಲ್ಲುವ ಬದಲು ಹಾವು ಹಿಡಿಯುವವರಿಗೆ ಫೋನ್ ಮಾಡಿ, ಹಾವನ್ನು ಹಿಡಿಯುವ ಪ್ರವೀಣರು ಸಾಕಷ್ಟು ಮಂದಿ ನಮ್ಮ ನಡುವೆ ಇದ್ದಾರೆ, ಅವರು ಅದನ್ನು ಹಿಡಿದು ಕಾಡಿಗೆ ಬಿಡುತ್ತಾರೆ. ಇದರಿಂದ ನಿಮಗೂ, ಹಾವಿಗೂ ಯಾವುದೇ ಅಪಾಯ ಉಂಟಾಗುವುದಿಲ್ಲ.
ಈ ನಾಗರ ಪಂಚಮಿ ಹಬ್ಬ ನಿಮಗೆ ಶುಭವನ್ನು ತರಲಿ- ಕನ್ನಡ ಬೋಲ್ಡ್ ಸ್ಕೈ



Click it and Unblock the Notifications