Just In
- 12 min ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- 1 hr ago ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- 2 hrs ago ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- 5 hrs ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
Don't Miss
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಬ್ಬಗಳಿಗೆ ಮುನ್ನುಡಿಯಾಗಿ ಬರುತ್ತಿರುವ ನಾಗರಪಂಚಮಿ
ಹಬ್ಬಗಳ ಮುನ್ನುಡಿಯಂತೆ ಸಾಲು- ಸಾಲು ಹಬ್ಬಗಳನ್ನು ಹೊತ್ತು ಬರುವ ನಾಗರಪಂಚಮಿಯೆಂದರೆ ಹಿಂದೂಗಳಿಗೆ ಎಲ್ಲಿಲ್ಲದ ಸಂಭ್ರಮ. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸುವ ಈ ಹಬ್ಬದಲ್ಲಿ ಸಹೋದರ-ಸಹೋದರಿಯ ಸಂಬಂಧಕ್ಕೂ ಹೆಚ್ಚು ಒತ್ತು ನೀಡಲಾಗುವುದು.
ಮದುವೆಯಾದ ಹೆಣ್ಣು ಮಕ್ಕಳಿಗೆ ತಾಯಿ ಮನೆಗೆ ಹೋಗಿ ತಮ್ಮ ಸಹೋದರನ ಬೆನ್ನಿನ ಮೇಲೆ ತಾಳೆ ಹೂವಿನಿಂದ ಹಾಲು ಚಿಮಿಕಿಸಿ, ಅವನನ್ನು ಹಾರೈಸಿ, ಅವನು ಕೊಟ್ಟ ಉಡುಗೊರೆ ಸ್ವೀಕರಿಸಿ ತನ್ನ ತವರಿನವರ ಜೊತೆ ಸ್ವಲ್ಪ ಸಮಯ ಕಳೆದು ಬರುವ ಸಂಭ್ರಮ. ಮಕ್ಕಳಿಗಂತೂ ಮನೆಯಲ್ಲಿ ಮಾಡುವ ಎಳ್ಳುಂಡೆ, ತಂಬಿಟ್ಟು ಈ ರೀತಿಯ ಸಿಹಿ ತಿಂಡಿಗಳನ್ನು ಸವಿಯುವ ಸಂಭ್ರಮ, ಒಟ್ಟಿನಲ್ಲಿ ಸಂಭ್ರಮ, ಸಡಗರದ ಹಬ್ಬವನ್ನು ಸ್ವಾಗತಿಸಲು ಇಡೀ ನಾಡೇ ಸಿದ್ಧವಾಗಿದೆ.
ನಾಗರ ಹಾವಿನ್ನು ಕಂಡರೆ ಭಯ ಪಡದವರು ತುಂಬಾ ವಿರಳ, ಆದರೆ ಈ ದಿನದಂದು ತಮ್ಮ ಭಯವನ್ನು ಬದಿಗಿರಿಸಿ, ನಾಗ ರಾಜನಿಗೆ ಭಯ, ಭಕ್ತಿಯಿಂದ ಹಾಲು ಎರೆದರೆ ನಮಗೆ ಏನೂ ಕೆಡಕು ಮಾಡುವುದಿಲ್ಲ, ನಮ್ಮನ್ನು ಹಾರೈಸುತ್ತಾನೆ ಎಂಬ ನಂಬಿಕೆಯೇ ಧೈರ್ಯವಾಗಿ ಮಾರ್ಪಟ್ಟು ಹಾವಿನ ಹುತ್ತಕ್ಕೆ ಹಾಲು ಎರೆದು ಬರುತ್ತಾರೆ! ಊರಿನಲ್ಲಿರುವ ನಾಗರ ಹಾವಿನ ಮೂರ್ತಿಗಳಿಗೂ ಹಾಲಿನ ಅಭಿಷೇಕ ಮಾಡಿಸಲಾಗುವುದು.
ನಾಗದೋಷವಿದ್ದರೆ ಕೆಡಕು ಉಂಟಾಗುತ್ತದೆ ಎಂಬ ನಂಬಿಕೆ ಇರುವವರಿಗೆ ತಮ್ಮ ನಾಗದೋಷ ಪರಿಹಾರಕ್ಕೆ ಇಂದು ಸುದಿನ. ತಾವು ನಾಗದೋಷದಿಂದ ಮುಕ್ತರಾಗಲು ಈ ದಿನ ನಾಗಪೂಜೆ ಮಾಡಿಸುತ್ತಾರೆ. ವಾಸುಕಿ, ತಕ್ಷಕ, ಕಾಲಿಯ, ಮಣಿಭದ್ರಕ, ಐರಾವತ, ಧೃತರಾಷ್ಟ್ರ, ಕಾರ್ಕೋಟಕ ಮತ್ತು ಧನಂಜಯ ಎಂಬ ನಾಗದೇವತೆಗಳಿಗೆ ಈ ದಿನ ವಿಶೇಷ ಪೂಜೆ ಸಲ್ಲಿಸಲಾಗುವುದು.
ನಾಗರ
ಪಂಚಮಿಯೆಂದು
ನಮ್ಮದೊಂದು
ಕೋರಿಕೆ
ನಾಗರ
ಹಾವಿಗೆ
ಹಾಲೆರೆದರೆ
ಒಳ್ಳೆಯದಾಗುತ್ತದೆ
ಎಂಬ
ನಂಬಿಕೆಯಿಂದ
ಪೂಜಿಸುವ
ನಾವು,
ನಿಜವಾದ
ನಾಗರಾಜ
ಕಾಣಿಸಿದಾಗ
ಭಯಬಿದ್ದು
ಅದನ್ನು
ಸಾಯಿಸುವ
ನಿರ್ಧಾರಕ್ಕೆ
ಬರಬಾರದು,
ನಾವು
ಭಯಬಿದ್ದು
ಕಿರುಚಾಡಲು
ಪ್ರಾರಂಭಿಸಿದರೆ
ಹಾವು
ಕೂಡ
ಭಯಬಿದ್ದು
ನಮ್ಮತ್ತ
ಹರಿದು
ಬರಬಹುದು,
ಆದ್ದರಿಂದ
ಹಾವು
ಕಾಣಿಸಿದರೆ
ಅದನ್ನು
ಕೊಲ್ಲುವ
ಬದಲು
ಹಾವು
ಹಿಡಿಯುವವರಿಗೆ
ಫೋನ್
ಮಾಡಿ,
ಹಾವನ್ನು
ಹಿಡಿಯುವ
ಪ್ರವೀಣರು
ಸಾಕಷ್ಟು
ಮಂದಿ
ನಮ್ಮ
ನಡುವೆ
ಇದ್ದಾರೆ,
ಅವರು
ಅದನ್ನು
ಹಿಡಿದು
ಕಾಡಿಗೆ
ಬಿಡುತ್ತಾರೆ.
ಇದರಿಂದ
ನಿಮಗೂ,
ಹಾವಿಗೂ
ಯಾವುದೇ
ಅಪಾಯ
ಉಂಟಾಗುವುದಿಲ್ಲ.
ಈ ನಾಗರ ಪಂಚಮಿ ಹಬ್ಬ ನಿಮಗೆ ಶುಭವನ್ನು ತರಲಿ- ಕನ್ನಡ ಬೋಲ್ಡ್ ಸ್ಕೈ